AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿ ‘ಜೈ ಭೀಮ್’ ತಂಡ; ಕ್ಷಮೆ ಕೇಳಿ ಐದು ಕೋಟಿ ನೀಡುವಂತೆ ಸೂರ್ಯಗೆ ಬಂತು ನೋಟಿಸ್

 ವನ್ನಿಯಾರ್ ಸಮುದಾಯದ ಅಧ್ಯಕ್ಷ ಪು ಥಾ ಅರುಳ್ಮೋಳಿ ಅವರು ಸಿನಿಮಾದಲ್ಲಿ ಬರುವ ಕೆಲ ದೃಶ್ಯಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ದೃಶ್ಯಗಳು ವನ್ನಿಯಾರ್ ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿದೆ. ಈ ಕಾರಣಕ್ಕೆ ಅವುಗಳನ್ನು ತೆಗೆದು ಹಾಕಬೇಕು ಎಂದು ನೋಟಿಸ್ ನೀಡಲಾಗಿದೆ.

ಸಂಕಷ್ಟದಲ್ಲಿ ‘ಜೈ ಭೀಮ್’ ತಂಡ; ಕ್ಷಮೆ ಕೇಳಿ ಐದು ಕೋಟಿ ನೀಡುವಂತೆ ಸೂರ್ಯಗೆ ಬಂತು ನೋಟಿಸ್
ಜೈ ಭೀಮ್​
TV9 Web
| Edited By: |

Updated on: Nov 15, 2021 | 8:55 PM

Share

ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಮತ್ತೊಂದು ಕಡೆ ವಿವಾದ ಮೂಲಕ ಸದ್ದು ಮಾಡುತ್ತಿದೆ. ಈಗ ಸಿನಿಮಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವನ್ನಿಯಾರ್ ಸಮುದಾಯದವರು ತಮಗೆ ಸಿನಿಮಾದಲ್ಲಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಸಿನಿಮಾದ ಮುಖ್ಯ ಪಾತ್ರಧಾರಿ ಸೂರ್ಯ, ಜ್ಯೋತಿಕಾ, ಅಮೇಜಾನ್​ ಪ್ರೈಮ್​ ವಿಡಿಯೋ ಮತ್ತು ನಿರ್ದೇಶಕ ಟಿಜೆ ಜ್ಞಾನವೇಲ್​ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ವನ್ನಿಯಾರ್ ಸಮುದಾಯಕ್ಕೆ ಅವಮಾನವಾಗುವ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಲಾಗಿದೆ.  

ವನ್ನಿಯಾರ್ ಸಮುದಾಯದ ಅಧ್ಯಕ್ಷ ಪು ಥಾ ಅರುಳ್ಮೋಳಿ ಅವರು ಸಿನಿಮಾದಲ್ಲಿ ಬರುವ ಕೆಲ ದೃಶ್ಯಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ದೃಶ್ಯಗಳು ವನ್ನಿಯಾರ್ ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿದೆ. ಈ ಕಾರಣಕ್ಕೆ ಅವುಗಳನ್ನು ತೆಗೆದು ಹಾಕಬೇಕು ಎಂದು ನೋಟಿಸ್ ನೀಡಲಾಗಿದೆ. ಸಿನಿಮಾದಲ್ಲಿ ಬರುವ ಕ್ಯಾಲೆಂಡರ್​ ಒಂದರಲ್ಲಿ ಅಗ್ನಿ ಕುಂಡದ ಫೋಟೋ ಇದೆ. ಅಗ್ನಿ ಕುಂಡವು ವನ್ನಿಯಾರ್ ಸಮುದಾಯದ ಚಿಹ್ನೆ. ದುರುದ್ದೇಶ ಪೂರ್ವಕವಾಗಿ ಅಲ್ಲಿ ಅಗ್ನಿ ಕುಂಡದ ಚಿತ್ರವನ್ನು ಇರಿಸಲಾಗಿದೆ. ಸಿನಿಮಾದಲ್ಲಿ ಬರುವ ಸಬ್​ ಇನ್​ಸ್ಪೆಕ್ಟರ್​ಗೆ ಗುರುಮೂರ್ತಿ ಎಂದು ಹೆಸರು ಇಡಲಾಗಿದೆ. ಈ ಸಬ್​-ಇನ್​ಸ್ಪೆಕ್ಟರ್​ ಸಿನಿಮಾದ ಪ್ರಮುಖ ಖಳ. ಗುರುಮೂರ್ತಿ ಎಂಬುದು ಪಿಎಂಕೆಯ ಪ್ರಮುಖ ನಾಯಕ ಕಾಡುವೆಟ್ಟಿ ಜೆ ಗುರುವನ್ನು ಪ್ರತಿನಿಧಿಸುತ್ತದೆ ಎಂದು ಆರೋಪಿಸಲಾಗಿದೆ.

ಸಿನಿಮಾದಲ್ಲಿ ಕ್ಯಾಲೆಂಡರ್​ ಮೇಲೆ ಇರುವ ಅಗ್ನಿ ಕುಂಡವನ್ನು ತೆಗೆದು ಹಾಕಬೇಕು. ವನ್ನಿಯಾರ್ ಸಮುದಾಯದ ಪ್ರತಿಷ್ಠೆಗೆ ಕಳಂಕ ತಂದಿದ್ದಕ್ಕಾಗಿ ಜೈ ಭೀಮ್ ತಂಡವು ಬೇಷರತ್ ಕ್ಷಮೆಯಾಚಿಸಬೇಕು. ವನ್ನಿಯಾರ್​ ಸಮುದಾಯದ ವಿರುದ್ಧ ಇನ್ನು ಮುಂದೆ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನಹಾನಿಕರ ಟೀಕೆಗಳನ್ನು ಪ್ರಕಟಿಸುವುದನ್ನು ನಿಲ್ಲಿಸಬೇಕು  ಮತ್ತು ಈ ನೋಟಿಸ್ ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳಲ್ಲಿ 5 ಕೋಟಿ ರೂ. ಪಾವತಿಸುವಂತೆ ನೋಟಿಸ್​ನಲ್ಲಿ ಕೋರಲಾಗಿದೆ.

ಈ ಮಧ್ಯೆ ಸೂರ್ಯ ಅವರನ್ನು ಬೆಂಬಲಿಸಿ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಟ್ವೀಟ್​ಗಳನ್ನು ಮಾಡಲಾಗುತ್ತಿದೆ. ಸೂರ್ಯ ಅವರ ಬೆಂಬಲಕ್ಕೆ ನಾವಿದ್ದೇವೆ ಎಂದು ಸಾಕಷ್ಟು ಮಂದಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:  ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ