AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jai Shri Ram song: ‘ಜೈ ಶ್ರೀರಾಮ್​..’ ಹಾಡಿನಿಂದ ರಾಮ ಭಕ್ತರ ಮನಗೆದ್ದ ‘ಆದಿಪುರುಷ್​’ ಚಿತ್ರತಂಡ

ಆರಂಭದಿಂದಲೂ ‘ಆದಿಪುರುಷ್​’ ಸಿನಿಮಾ ಟ್ರೋಲ್​ಗೆ ಒಳಗಾಗುತ್ತಿತ್ತು. ಆದರೆ ಈಗ ‘ಜೈ ಶ್ರೀರಾಮ್​..’ ಹಾಡಿಗೆ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

Jai Shri Ram song: ‘ಜೈ ಶ್ರೀರಾಮ್​..’ ಹಾಡಿನಿಂದ ರಾಮ ಭಕ್ತರ ಮನಗೆದ್ದ ‘ಆದಿಪುರುಷ್​’ ಚಿತ್ರತಂಡ
ಪ್ರಭಾಸ್
ಮದನ್​ ಕುಮಾರ್​
|

Updated on: May 21, 2023 | 7:20 AM

Share

ಪ್ರಭಾಸ್​ ಅಭಿನಯದ ‘ಆದಿಪುರುಷ್​’ ಸಿನಿಮಾ (Adipurush Movie) ಬಿಡುಗಡೆಗೆ ಸಜ್ಜಾಗಿದೆ. ಜೂನ್ 16ರಂದು ಈ ಚಿತ್ರ ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಶನಿವಾರ (ಮೇ 20) ಹೊಸ ಹಾಡು ಬಿಡುಗಡೆ ಮಾಡಲಾಗಿದೆ. ‘ಜೈ ಶ್ರೀರಾಮ್​..’ ಎಂಬ ಈ ಗೀತೆಗೆ ಅಭಿಮಾನಿಗಳಿಂದ ಮೆಚ್ಚುಗೆ ಸಿಗುತ್ತಿದೆ. ಅದರಲ್ಲೂ ರಾಮ ಭಕ್ತರ ಮನಗೆದ್ದಿದೆ. ರಾಮನನ್ನು (Shri Ram) ಸ್ಮರಿಸುವಂತಹ ಈ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಾಣುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ಈ ಹಾಡನ್ನು ರಿಲೀಸ್​ ಮಾಡಲಾಗಿದೆ. ಖ್ಯಾತ ಸಂಗೀತ ನಿರ್ದೇಶಕರಾದ ಅಜಯ್​-ಅತುಲ್​ ಅವರು ‘ಜೈ ಶ್ರೀರಾಮ್​..’ (Jai Shri Ram) ಗೀತೆಗೆ ಸಂಗೀತ ನೀಡಿದ್ದಾರೆ. ಪ್ರಭಾಸ್​ ಅಭಿಮಾನಿಗಳು ಈ ಹಾಡಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಆರಂಭದಿಂದಲೂ ‘ಆದಿಪುರುಷ್​’ ಸಿನಿಮಾ ಟ್ರೋಲ್​ಗೆ ಒಳಗಾಗುತ್ತಿತ್ತು. ಟೀಸರ್​ ಬಿಡುಗಡೆ ಆದಾಗ ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು. ನಂತರ ಹೊರಬಂದ ಪೋಸ್ಟರ್​ಗಳಲ್ಲೂ ನೆಟ್ಟಿಗರು ತಪ್ಪು ಹುಡುಕಿದರು. ಹಾಗಾಗಿ ಚಿತ್ರತಂಡಕ್ಕೆ ಟ್ರೋಲ್​ ಎಂಬುದು ದೊಡ್ಡ ಸವಾಲಾಗಿತ್ತು. ಈಗ ಹಾಡಿಗೆ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ಬಹುಕೋಟಿ ರೂಪಾಯಿ ವೆಚ್ಚದಲ್ಲಿ ‘ಆದಿಪುರುಷ್​’ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.

ಇದನ್ನೂ ಓದಿ: Prabhas: ಹೇಗಿರಲಿದೆ ‘ಸಲಾರ್​’ ಸಿನಿಮಾ ಇಂಟರ್​ವಲ್​ ದೃಶ್ಯ? ಪ್ರಭಾಸ್​ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಟ್ರೀಟ್​

ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ರಾಮಾಯಣವನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ ಪ್ರಭಾಸ್, ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!