AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು

ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರೀಕರಣದ ಸೆಟ್‌ನಲ್ಲಿ ಭೀಕರ ದುರಂತ ಸಂಭವಿಸಿದೆ. 28 ವರ್ಷದ ಕಲಾ ವಿಭಾಗದ ಸಿಬ್ಬಂದಿ ಕಾರ್ತಿಕೇಯನ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಈ ಘಟನೆ ಇಡೀ ತಂಡವನ್ನು ಆಘಾತಕ್ಕೆ ದಳ್ಳಿದೆ. ಕನ್ನಡಿಗರಿಗೆ ಮುಖ್ಯವಾದ ಶಿವರಾಜ್‌ಕುಮಾರ್ ಪಾತ್ರ 'ಜೈಲರ್ 2'ರಲ್ಲಿ ಮತ್ತಷ್ಟು ಹೈಲೈಟ್ ಆಗುವ ನಿರೀಕ್ಷೆಯಿದೆ.

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು
ಜೈಲರ್ 2
ರಾಜೇಶ್ ದುಗ್ಗುಮನೆ
|

Updated on: May 15, 2026 | 11:09 AM

Share

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ.

1. ಜೈಲರ್ 2 ಸೆಟ್​​​ನಲ್ಲಿ ಅವಘಢ

2. ಯುವ ಆರ್ಟ್ ಕಲಾವಿದನ ಸಾವು

3. ವಿದ್ಯುತ್ ತಂತಿ ತಾಗಿ ಸಾವು

ಚೆನ್ನೈನ ಪಣಯೂರ್‌ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದವು. ಮನೆಯ ಮಾದರಿಯ ಸೆಟ್ ನಿರ್ಮಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಕಾರ್ತಿಕೇಯನ್‌ಗೆ ತೀವ್ರವಾಗಿ ಶಾಕ್ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಈ ಕುರಿತು ಕಾನತ್ತೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕನ್ನಡಿಗರಿಗೆ ಈ ಸಿನಿಮಾ ಕೇವಲ ರಜನಿಕಾಂತ್ ಚಿತ್ರವಲ್ಲ, ಬದಲಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಸಿನಿಮಾ ಕೂಡ ಹೌದು. ‘ಜೈಲರ್’ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಇಡೀ ಸಿನಿಮಾಕ್ಕೆ ಒಂದು ದೊಡ್ಡ ಮೈಲೇಜ್ ನೀಡಿತ್ತು. ಥಿಯೇಟರ್‌ನಲ್ಲಿ ಶಿವಣ್ಣನ ಎಂಟ್ರಿಗೆ ಸಿಕ್ಕ ರೆಸ್ಪಾನ್ಸ್ ನೋಡಿ ಚಿತ್ರತಂಡ ಬೆರಗಾಗಿತ್ತು. ಹೀಗಾಗಿ, ‘ಜೈಲರ್ 2’ ಚಿತ್ರದಲ್ಲೂ ಶಿವಣ್ಣ ಅವರ ಪಾತ್ರ ಮುಂದುವರಿಯಲಿದ್ದು, ಸೀಕ್ವೆಲ್‌ನಲ್ಲಿ ಅವರ ಪಾತ್ರ ಇನ್ನಷ್ಟು ಹೈಲೈಟ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗ ಸಂಭವಿಸಿದ ಈ ಸಾವು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ಇತ್ತೀಚಿನ ವರದಿಗಳ ಪ್ರಕಾರ ‘ಜೈಲರ್ 2’ ಸಿನಿಮಾ ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆಯಂತೆ. ಸನ್ ಪಿಕ್ಚರ್ಸ್ ಸಂಸ್ಥೆಯು ಶೀಘ್ರದಲ್ಲೇ ರಿಲೀಸ್ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ರಮ್ಯಾ ಕೃಷ್ಣನ್, ಯೋಗಿ ಬಾಬು ಮೊದಲಾದವರು ನಟಿಸುತ್ತಿದ್ದಾರೆ. ಮೊದಲ ಭಾಗವು ಜಾಗತಿಕವಾಗಿ 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಅಬ್ಬರಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ