AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಮಾಲ್ಡೀವ್ಸ್​ ಬೀಚ್​​ನಲ್ಲಿ ಚಿಲ್ ಮಾಡುತ್ತಿರುವ ರಜನಿಕಾಂತ್; ಫೋಟೋ ವೈರಲ್

ರಜನಿಕಾಂತ್ ಅವರು ಮಾಲ್ಡೀವ್ಸ್ ಬೀಚ್​ನಲ್ಲಿ ಓಡಾಡುತ್ತಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗಿದೆ.

Rajinikanth: ಮಾಲ್ಡೀವ್ಸ್​ ಬೀಚ್​​ನಲ್ಲಿ ಚಿಲ್ ಮಾಡುತ್ತಿರುವ ರಜನಿಕಾಂತ್; ಫೋಟೋ ವೈರಲ್
ರಜನಿಕಾಂತ್
TV9 Web
| Edited By: |

Updated on:Jul 18, 2023 | 11:57 AM

Share

ಮಾಲ್ಡೀವ್ಸ್ ಸೆಲೆಬ್ರಿಟಿಗಳ ಹಾಟ್ ಸ್ಪಾಟ್. ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಸುತ್ತಾಡಲು ಹೋಗಬೇಕು ಎಂದರೆ ಸೆಲೆಬ್ರಿಟಿಗಳು ಮೊದಲು ಆಯ್ಕೆ ಮಾಡುವ ಸ್ಥಳ ಎಂದರೆ ಅದು ಮಾಲ್ಡೀವ್ಸ್. ಈಗ ತಮಿಳು ಚಿತ್ರರಂಗದ ಸೂಪರ್​ಸ್ಟಾರ್ ರಜನಿಕಾಂತ್ ಕೂಡ ಇಲ್ಲಿಗೆ ಭೇಟಿ ನೀಡಿದ್ದಾರೆ. ಅವರು ಬೀಚ್​ನಲ್ಲಿ ಸುತ್ತಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿದ ಬಳಿಕ ರಜನಿಕಾಂತ್ (Rajinikanth) ಇಲ್ಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಇಲ್ಲ. ಈ ಕಾರಣಕ್ಕೆ ಅವರು ತಾವು ಪ್ರವಾಸಕ್ಕೆ ತೆರಳುವ ಫೋಟೋಗಳನ್ನು ಶೇರ್​ ಮಾಡಿಕೊಳ್ಳುವುದು ತುಂಬಾನೇ ಅಪರೂಪ. ಆದಾಗ್ಯೂ ಅವರ ಫೋಟೋಗಳು ವೈರಲ್ ಆಗುತ್ತವೆ. ಈಗ ರಜನಿಕಾಂತ್ ಅವರು ಮಾಲ್ಡೀವ್ಸ್ ಬೀಚ್​ನಲ್ಲಿ ಓಡಾಡುತ್ತಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗಿದೆ.

ರಜನಿಕಾಂತ್ ಅವರ ವಯಸ್ಸು ಈಗ 72. ಈ ವಯಸ್ಸಿನಲ್ಲೂ ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ‘ಜೈಲರ್’ ಸಿನಿಮಾ ಆಗಸ್ಟ್​ 10ರಂದು ರಿಲೀಸ್ ಆಗುತ್ತಿದೆ. ಅವರ ನಟನೆಯ ಮತ್ತೊಂದು ಸಿನಿಮಾ ‘ಲಾಲ್​ ಸಲಾಂ’ ಚಿತ್ರದ ಶೂಟಿಂಗ್​ನ ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಈ ಚಿತ್ರಕ್ಕೆ ಅವರ ಮಗಳು ಐಶ್ವರ್ಯಾ ನಿರ್ದೇಶನ ಮಾಡುತ್ತಿದ್ದಾರೆ. ಇದಾದ ಬಳಿಕವೇ ಅವರು ವೆಕೇಷನ್ ತೆರಳಿದ್ದಾರೆ.

ಇದನ್ನೂ ಓದಿ: Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ

‘ಜೈಲರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಕನ್ನಡದ ಶಿವರಾಜ್​ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು 10 ನಿಮಿಷ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಗೆ ನೆಲ್ಸನ್ ದಿಲೀಪ್​ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ತಮನ್ನಾ ಅವರು ‘ಜೈಲರ್​’ ಚಿತ್ರದ ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಈ ಹಾಡು ಸೂಪರ್ ಹಿಟ್ ಆಗಿದೆ. ಕೋಟ್ಯಂತರ ಬಾರಿ ಹಾಡು ವಿಕ್ಷಣೆ ಕಂಡಿದೆ. ಈ ಹಾಡನಿಂದ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

Published On - 11:55 am, Tue, 18 July 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ