AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಮನೆಯವರ ಎದುರು ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್; ವಿಡಿಯೋ ವೈರಲ್

ಮೈ ಮೇಲೆ ಬಟ್ಟೆ ಇಲ್ಲದ ಅವತಾರದಲ್ಲಿ ವಿನಾಯಕನ್ ಅವರು ಕಾಣಿಸಿಕೊಂಡಿದ್ದಾರೆ. ನೆರೆಮನೆಯವರಿಗೆ ಅಶ್ಲೀಲವಾಗಿ ಬೈಯ್ದಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಅವರ ಅಶ್ಲೀಲ ವರ್ತನೆಯನ್ನು ಕಂಡು ನೆಟ್ಟಿಗರು ಖಾರವಾಗಿ ಕಮೆಂಟ್ ಮಾಡುತ್ತಿದ್ದಾರೆ. ವಿನಾಯಕನ್ ಅವರನ್ನು ಚಿತ್ರರಂಗದಿಂದ ಹೊರಗೆ ಹಾಕಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ನೆರೆ ಮನೆಯವರ ಎದುರು ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್; ವಿಡಿಯೋ ವೈರಲ್
Vinayakan
ಮದನ್​ ಕುಮಾರ್​
|

Updated on: Jan 21, 2025 | 3:29 PM

Share

ಮಲಯಾಳಂ ಹಾಗೂ ತಮಿಳು ಚಿತ್ರರಂಗದ ಖ್ಯಾತ ನಟ ವಿನಾಯಕನ್ ಅವರು ಬರೀ ನೆಗೆಟಿವ್ ಕಾರಣಗಳಿಂದಲೇ ಸುದ್ದಿ ಆಗುತ್ತಿದ್ದಾರೆ. ಅವರಿಗೆ ಜನಪ್ರಿಯತೆಯ ಅಮಲು ತಲೆಗೆ ಏರಿದಂತಿದೆ. ಸೆಲೆಬ್ರಿಟಿಯಾಗಿ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸಾರ್ವಜನಿಕವಾಗಿ ಅವರು ಬಹಳ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಈಗ ವಿನಾಯಕನ್ ಅವರ ಒಂದು ವಿಡಿಯೋ ವೈರಲ್ ಆಗಿದೆ. ನೆರೆಮನೆಯವರಿಗೆ ಬೈಯುತ್ತಾ, ಅಶ್ಲೀಲವಾಗಿ ನಡೆದುಕೊಂಡಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಅದನ್ನು ವಿನಾಯಕನ್ ಕೂಡ ಒಪ್ಪಿಕೊಂಡಿದ್ದಾರೆ.

ವಿನಾಯಕನ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತು ನೆರೆಮನೆಯವರಿಗೆ ಬೈಯ್ದಿದ್ದಾರೆ. ಅವಾಚ್ಯ ಪದಗಳನ್ನು ಅವರು ಬಳಸಿದ್ದಾರೆ. ಲುಂಗಿ ಧರಿಸಿ ಜಗಳಕ್ಕೆ ಬಂದಿದ್ದ ಅವರಿಗೆ ಸರಿಯಾಗಿ ನಿಂತುಕೊಳ್ಳಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಸೊಂಟದ ಮೇಲಿದ್ದ ಲುಂಗಿ ಉದುರಿ ಹೋದರೂ ಅರಿವಿಲ್ಲದ ಹಾಗೆ ಅವರು ಜಗಳ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

ಹಲವು ವರ್ಷಗಳಿಂದ ವಿನಾಯಕನ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅತ್ಯುತ್ತಮ ನಟ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇರಳ ರಾಜ್ಯ ಪ್ರಶಸ್ತಿ, ಫಿಲ್ಮ್​ಫೇರ್​ ಪ್ರಶಸ್ತಿಗಳು ಕೂಡ ಅವರಿಗೆ ಸಿಕ್ಕಿವೆ. ರಜನಿಕಾಂತ್ ನಟನೆ ‘ಜೈಲರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡುವ ಮೂಲಕ ವಿನಾಯಕನ್ ಅವರು ಹೆಚ್ಚು ಖ್ಯಾತಿ ಗಳಿಸಿದರು. ಆ ಬಳಿಕ ಅವರ ಕಿರಿಕ್​ಗಳು ಕೂಡ ಜಾಸ್ತಿ ಆದವು.

ಸೋಶಿಯಲ್ ಮೀಡಿಯಾದಲ್ಲಿ ವಿನಾಯಕನ್ ಅವರ ವಿಡಿಯೋ ವೈರಲ್ ಆಗುತ್ತಿದೆ. ‘ಇವನೇನು ನಟನೋ ಅಥವಾ ಕುಡುಕನೋ’ ಎಂದು ಜನರು ಪ್ರಶ್ನಿಸಿದ್ದಾರೆ. ‘ಚಿತ್ರರಂಗದಿಂದ ವಿನಾಯಕನ್ ಅವರನ್ನು ಬ್ಯಾನ್ ಮಾಡಬೇಕು’ ಎಂದು ಕೂಡ ಜನರು ಕಮೆಂಟ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ವಿನಾಯಕನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಜೇಲರ್ ಚಿತ್ರದ ವಿಲನ್ ವಿನಾಯಕನ್ ಕುಡಿತದ ಅಮಲಿನಲ್ಲಿ ಮನೆ ಬಳಿಯೂ ವಿಲನ್ ವರ್ತನೆ, ಪೊಲೀಸರಿಂದ ಬುದ್ಧಿವಾದ!!

‘ಒಬ್ಬ ವ್ಯಕ್ತಿಯಾಗಿ, ಸಿನಿಮಾ ನಟನಾಗಿ ನನಗೆ ಎಷ್ಟೋ ವಿಷಯಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನನ್ನಿಂದ ನೆಗೆಟಿವ್ ಎನರ್ಜಿ ಉಂಟಾಗಿದ್ದಕ್ಕೆ ನನ್ನ ಕಡೆಯಿಂದ ಜನರ ಬಳಿ ಕ್ಷಮೆ ಕೇಳುತ್ತೇನೆ. ಚರ್ಚೆ ಮುಂದುವರಿಯಲಿ’ ಎಂದು ವಿನಾಯಕನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು