AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಮನೆಯವರ ಎದುರು ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್; ವಿಡಿಯೋ ವೈರಲ್

ಮೈ ಮೇಲೆ ಬಟ್ಟೆ ಇಲ್ಲದ ಅವತಾರದಲ್ಲಿ ವಿನಾಯಕನ್ ಅವರು ಕಾಣಿಸಿಕೊಂಡಿದ್ದಾರೆ. ನೆರೆಮನೆಯವರಿಗೆ ಅಶ್ಲೀಲವಾಗಿ ಬೈಯ್ದಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಅವರ ಅಶ್ಲೀಲ ವರ್ತನೆಯನ್ನು ಕಂಡು ನೆಟ್ಟಿಗರು ಖಾರವಾಗಿ ಕಮೆಂಟ್ ಮಾಡುತ್ತಿದ್ದಾರೆ. ವಿನಾಯಕನ್ ಅವರನ್ನು ಚಿತ್ರರಂಗದಿಂದ ಹೊರಗೆ ಹಾಕಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ನೆರೆ ಮನೆಯವರ ಎದುರು ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್; ವಿಡಿಯೋ ವೈರಲ್
Vinayakan
Follow us
ಮದನ್​ ಕುಮಾರ್​
|

Updated on: Jan 21, 2025 | 3:29 PM

ಮಲಯಾಳಂ ಹಾಗೂ ತಮಿಳು ಚಿತ್ರರಂಗದ ಖ್ಯಾತ ನಟ ವಿನಾಯಕನ್ ಅವರು ಬರೀ ನೆಗೆಟಿವ್ ಕಾರಣಗಳಿಂದಲೇ ಸುದ್ದಿ ಆಗುತ್ತಿದ್ದಾರೆ. ಅವರಿಗೆ ಜನಪ್ರಿಯತೆಯ ಅಮಲು ತಲೆಗೆ ಏರಿದಂತಿದೆ. ಸೆಲೆಬ್ರಿಟಿಯಾಗಿ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸಾರ್ವಜನಿಕವಾಗಿ ಅವರು ಬಹಳ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಈಗ ವಿನಾಯಕನ್ ಅವರ ಒಂದು ವಿಡಿಯೋ ವೈರಲ್ ಆಗಿದೆ. ನೆರೆಮನೆಯವರಿಗೆ ಬೈಯುತ್ತಾ, ಅಶ್ಲೀಲವಾಗಿ ನಡೆದುಕೊಂಡಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಅದನ್ನು ವಿನಾಯಕನ್ ಕೂಡ ಒಪ್ಪಿಕೊಂಡಿದ್ದಾರೆ.

ವಿನಾಯಕನ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತು ನೆರೆಮನೆಯವರಿಗೆ ಬೈಯ್ದಿದ್ದಾರೆ. ಅವಾಚ್ಯ ಪದಗಳನ್ನು ಅವರು ಬಳಸಿದ್ದಾರೆ. ಲುಂಗಿ ಧರಿಸಿ ಜಗಳಕ್ಕೆ ಬಂದಿದ್ದ ಅವರಿಗೆ ಸರಿಯಾಗಿ ನಿಂತುಕೊಳ್ಳಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಸೊಂಟದ ಮೇಲಿದ್ದ ಲುಂಗಿ ಉದುರಿ ಹೋದರೂ ಅರಿವಿಲ್ಲದ ಹಾಗೆ ಅವರು ಜಗಳ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

ಹಲವು ವರ್ಷಗಳಿಂದ ವಿನಾಯಕನ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅತ್ಯುತ್ತಮ ನಟ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇರಳ ರಾಜ್ಯ ಪ್ರಶಸ್ತಿ, ಫಿಲ್ಮ್​ಫೇರ್​ ಪ್ರಶಸ್ತಿಗಳು ಕೂಡ ಅವರಿಗೆ ಸಿಕ್ಕಿವೆ. ರಜನಿಕಾಂತ್ ನಟನೆ ‘ಜೈಲರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡುವ ಮೂಲಕ ವಿನಾಯಕನ್ ಅವರು ಹೆಚ್ಚು ಖ್ಯಾತಿ ಗಳಿಸಿದರು. ಆ ಬಳಿಕ ಅವರ ಕಿರಿಕ್​ಗಳು ಕೂಡ ಜಾಸ್ತಿ ಆದವು.

ಸೋಶಿಯಲ್ ಮೀಡಿಯಾದಲ್ಲಿ ವಿನಾಯಕನ್ ಅವರ ವಿಡಿಯೋ ವೈರಲ್ ಆಗುತ್ತಿದೆ. ‘ಇವನೇನು ನಟನೋ ಅಥವಾ ಕುಡುಕನೋ’ ಎಂದು ಜನರು ಪ್ರಶ್ನಿಸಿದ್ದಾರೆ. ‘ಚಿತ್ರರಂಗದಿಂದ ವಿನಾಯಕನ್ ಅವರನ್ನು ಬ್ಯಾನ್ ಮಾಡಬೇಕು’ ಎಂದು ಕೂಡ ಜನರು ಕಮೆಂಟ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ವಿನಾಯಕನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಜೇಲರ್ ಚಿತ್ರದ ವಿಲನ್ ವಿನಾಯಕನ್ ಕುಡಿತದ ಅಮಲಿನಲ್ಲಿ ಮನೆ ಬಳಿಯೂ ವಿಲನ್ ವರ್ತನೆ, ಪೊಲೀಸರಿಂದ ಬುದ್ಧಿವಾದ!!

‘ಒಬ್ಬ ವ್ಯಕ್ತಿಯಾಗಿ, ಸಿನಿಮಾ ನಟನಾಗಿ ನನಗೆ ಎಷ್ಟೋ ವಿಷಯಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನನ್ನಿಂದ ನೆಗೆಟಿವ್ ಎನರ್ಜಿ ಉಂಟಾಗಿದ್ದಕ್ಕೆ ನನ್ನ ಕಡೆಯಿಂದ ಜನರ ಬಳಿ ಕ್ಷಮೆ ಕೇಳುತ್ತೇನೆ. ಚರ್ಚೆ ಮುಂದುವರಿಯಲಿ’ ಎಂದು ವಿನಾಯಕನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್