ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  

G. Marimuthu Passed Away: ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್​ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು.

ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  
ಮಾರಿಮುತ್ತು
Follow us
|

Updated on:Sep 08, 2023 | 11:41 AM

ತಮಿಳುನಾಡಿನ ಖ್ಯಾತ ನಟ ಮಾರಿಮುತ್ತು (Marimuthu) ಅವರು ಹೃದಯಾಘಾತದಿಂದ ಇಂದು (ಸೆಪ್ಟೆಂಬರ್ 8) ಮೃತಪಟ್ಟಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ರಿಲೀಸ್ ಆದ ಜೈಲರ್’ ಸಿನಿಮಾದಲ್ಲಿ (Jailer Movie) ಅವರು ವಿಲನ್ ಸಹಚರನ ಪಾತ್ರ ಮಾಡಿದ್ದರು. ಹೃದಯಾಘಾತ ಆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅವರ ಸಾವಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ನಿಧನ ವಾರ್ತೆ ಅನೇಕರಿಗೆ ಶಾಕ್ ತಂದಿದೆ.

ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್​ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು. ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ಸ್ಥಳಾಂತರಿಸಲಾಗಿದೆ.

‘ಜೈಲರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಚಿತ್ರದಲ್ಲಿ ವಿಲನ್ ವರ್ಮಾನ (ವಿನಾಯಕನ್) ಸಹಚರನಾಗಿ ಮಾರಿಮುತ್ತು ಕಾಣಿಸಿಕೊಂಡಿದ್ದರು. ಅವರ ಪಾತ್ರ ಕೂಡ ಗಮನ ಸೆಳೆದಿತ್ತು. ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾಗಲೇ ಅವರು ಮೃತಪಟ್ಟಿರೋದು ಬೇಸರದ ಸಂಗತಿ.

ಇದನ್ನೂ ಓದಿ: ‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?

ಮಾರಿಮುತ್ತು ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1999ರಲ್ಲಿ. ಅಜಿತ್ ಕುಮಾರ್ ನಟನೆಯ ‘ವಾಲಿ’ ಅವರ ನಟನೆಯ ಮೊದಲ ಸಿನಿಮಾ. ಬಳಿಕ ಅವರು ಹಲವು ಪೋಷಕ ಪಾತ್ರದಲ್ಲಿ ನಟಿಸಿದರು. ‘ತೇರಿ’ ಸಿನಿಮಾದಲ್ಲಿ ಅವರು ರಾಜಕಾರಣಿಯ ಪಾತ್ರ ಮಾಡಿದ್ದರು. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರದಲ್ಲಿ ಅವರು ನಟಿಸುತ್ತಿದ್ದರು. ಸಿನಿಮಾ ಶೂಟಿಂಗ್​ ಪ್ರಗತಿಯಲ್ಲಿರುವಾಗಲೇ ‘ಅವರು ಕೊನೆಯುಸಿರು ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 8 September 23

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್