AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  

G. Marimuthu Passed Away: ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್​ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು.

ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  
ಮಾರಿಮುತ್ತು
ರಾಜೇಶ್ ದುಗ್ಗುಮನೆ
|

Updated on:Sep 08, 2023 | 11:41 AM

Share

ತಮಿಳುನಾಡಿನ ಖ್ಯಾತ ನಟ ಮಾರಿಮುತ್ತು (Marimuthu) ಅವರು ಹೃದಯಾಘಾತದಿಂದ ಇಂದು (ಸೆಪ್ಟೆಂಬರ್ 8) ಮೃತಪಟ್ಟಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ರಿಲೀಸ್ ಆದ ಜೈಲರ್’ ಸಿನಿಮಾದಲ್ಲಿ (Jailer Movie) ಅವರು ವಿಲನ್ ಸಹಚರನ ಪಾತ್ರ ಮಾಡಿದ್ದರು. ಹೃದಯಾಘಾತ ಆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅವರ ಸಾವಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ನಿಧನ ವಾರ್ತೆ ಅನೇಕರಿಗೆ ಶಾಕ್ ತಂದಿದೆ.

ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್​ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು. ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ಸ್ಥಳಾಂತರಿಸಲಾಗಿದೆ.

‘ಜೈಲರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಚಿತ್ರದಲ್ಲಿ ವಿಲನ್ ವರ್ಮಾನ (ವಿನಾಯಕನ್) ಸಹಚರನಾಗಿ ಮಾರಿಮುತ್ತು ಕಾಣಿಸಿಕೊಂಡಿದ್ದರು. ಅವರ ಪಾತ್ರ ಕೂಡ ಗಮನ ಸೆಳೆದಿತ್ತು. ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾಗಲೇ ಅವರು ಮೃತಪಟ್ಟಿರೋದು ಬೇಸರದ ಸಂಗತಿ.

ಇದನ್ನೂ ಓದಿ: ‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?

ಮಾರಿಮುತ್ತು ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1999ರಲ್ಲಿ. ಅಜಿತ್ ಕುಮಾರ್ ನಟನೆಯ ‘ವಾಲಿ’ ಅವರ ನಟನೆಯ ಮೊದಲ ಸಿನಿಮಾ. ಬಳಿಕ ಅವರು ಹಲವು ಪೋಷಕ ಪಾತ್ರದಲ್ಲಿ ನಟಿಸಿದರು. ‘ತೇರಿ’ ಸಿನಿಮಾದಲ್ಲಿ ಅವರು ರಾಜಕಾರಣಿಯ ಪಾತ್ರ ಮಾಡಿದ್ದರು. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರದಲ್ಲಿ ಅವರು ನಟಿಸುತ್ತಿದ್ದರು. ಸಿನಿಮಾ ಶೂಟಿಂಗ್​ ಪ್ರಗತಿಯಲ್ಲಿರುವಾಗಲೇ ‘ಅವರು ಕೊನೆಯುಸಿರು ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 8 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!