AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಕರ್ನಾಟಕದ ಧಾರ್ಮಿಕ ಕ್ಷೇತ್ರಗಳಿಗೆ ರಜನಿಕಾಂತ್​ ಭೇಟಿ; ‘ಜೈಲರ್​’ ಶೂಟಿಂಗ್​ ನಡುವೆ ‘ತಲೈವಾ’ ಸುತ್ತಾಟ

Rajinikanth | Art of Living: ಚಿಕ್ಕಬಳ್ಳಾಪುರದ ಆವಲಕುರ್ಕಿಯಲ್ಲಿ ಇರುವ ಬೃಹತ್​ ಆದಿಯೋಗಿ ಪ್ರತಿಮೆ ಎಲ್ಲರನ್ನೂ ಸೆಳೆಯುತ್ತಿದೆ. ರಜನಿಕಾಂತ್ ಕೂಡ ಇಲ್ಲಿಗೆ ಭೇಟಿ ನೀಡಿದ್ದಾರೆ.

Rajinikanth: ಕರ್ನಾಟಕದ ಧಾರ್ಮಿಕ ಕ್ಷೇತ್ರಗಳಿಗೆ ರಜನಿಕಾಂತ್​ ಭೇಟಿ; ‘ಜೈಲರ್​’ ಶೂಟಿಂಗ್​ ನಡುವೆ ‘ತಲೈವಾ’ ಸುತ್ತಾಟ
ರಜನಿಕಾಂತ್ ಮತ್ತು ಸಹೋದರ ಸತ್ಯನಾರಾಯಣ ರಾವ್
ಮದನ್​ ಕುಮಾರ್​
| Edited By: |

Updated on:Feb 20, 2023 | 2:15 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಅವರಿಗೂ ಕರ್ನಾಟಕಕ್ಕೂ ಬಹಳ ಹತ್ತಿರದ ನಂಟು. ಬೆಂಗಳೂರಿನ ಸ್ಥಳಗಳು ಅವರಿಗೆ ಚಿರಪರಿಚಿತ. ಕನ್ನಡ ಚಿತ್ರರಂಗದ ಜೊತೆಗೆ ಅವರು ಉತ್ತಮ ಒಡನಾಟ ಹೊಂದಿದ್ದಾರೆ. ಈಗ ‘ಜೈಲರ್​’ ಸಿನಿಮಾ ಸಲುವಾಗಿ ಅವರು ಕರುನಾಡಿನಲ್ಲಿ ತಂಗಿದ್ದಾರೆ. ಇದೇ ಸಮಯದಲ್ಲಿ ಅವರು ಹಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರದ ಆದಿಯೋಗಿ (Adiyogi) ಪ್ರತಿಮೆಯನ್ನು ಅವರು ನೋಡಿಕೊಂಡು ಬಂದಿದ್ದಾರೆ. ಆ ಬಳಿಕ ರಜನಿಕಾಂತ್​ ಅವರು ಬೆಂಗಳೂರಿನ ‘ಆರ್ಟ್​​ ಆಫ್​ ಲಿವಿಂಗ್​’ (Art of Living) ಧ್ಯಾನ ಕೇಂದ್ರಕ್ಕೂ ಭೇಟಿ ಕೊಟ್ಟಿದ್ದಾರೆ. ಅದಕ್ಕೂ ಮುನ್ನ ಯಾರಿಗೂ ತಿಳಿಯದಂತೆ ಮಾರುವೇಷದಲ್ಲಿ ಏರೋ ಶೋ ಕೂಡ ವೀಕ್ಷಿಸಿದ್ದಾರೆ ಎನ್ನಲಾಗುತ್ತಿದೆ!

ರಜನಿಕಾಂತ್​ ಅವರಿಗೆ ಅಧ್ಯಾತ್ಮದಲ್ಲಿ ಹೆಚ್ಚು ನಂಬಿಕೆ ಇದೆ. ದೇವರ ಬಗ್ಗೆ ಅವರು ಅನೇಕ ಬಾರಿ ಮಾತನಾಡಿದ್ದಿದೆ. ಹಲವು ವಿಶೇಷ ಸಂದರ್ಭಗಳಲ್ಲಿ ಅವರು ದೇವಸ್ಥಾನಕ್ಕೆ ತೆರಳುತ್ತಾರೆ. ಶೂಟಿಂಗ್​ ನಿಮಿತ್ತ ಕರುನಾಡಿನಲ್ಲಿ ಇರುವಾಗಲೇ ಈ ವರ್ಷದ ಶಿವರಾತ್ರಿ ಹಬ್ಬ ಬಂದಿದ್ದರಿಂದ ಅವರು ಇಲ್ಲಿಯೇ ಹಬ್ಬ ಆಚರಿಸಿದ್ದಾರೆ. ಅವರ ಒಂದಷ್ಟು ಹೊಸ ಫೋಟೋಗಳು ಲಭ್ಯವಾಗಿವೆ. ಎಂದಿನಂತೆ ಅವರು ಸರಳತೆ ಮೆರೆಯುವ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ.

ಇದನ್ನೂ ಓದಿ: Jailer: ಮಂಗಳೂರಿನಲ್ಲಿ ‘ಜೈಲರ್​’ ಶೂಟಿಂಗ್; ಒಟ್ಟಿಗೆ ಕುಳಿತು ಹರಟೆ ಹೊಡೆದ ಶಿವಣ್ಣ-ರಜನಿ

ಇದನ್ನೂ ಓದಿ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ಚಿಕ್ಕಬಳ್ಳಾಪುರದ ಆವಲಕುರ್ಕಿಯಲ್ಲಿ ಇರುವ ಬೃಹತ್​ ಆದಿಯೋಗಿ ಪ್ರತಿಮೆಯು ಎಲ್ಲರನ್ನೂ ಸೆಳೆಯುತ್ತಿದೆ. ಪ್ರತಿದಿನ ಅನೇಕ ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ರಜನಿಕಾಂತ್ ಅವರನ್ನೂ ಈ ಸ್ಥಳ ಆಕರ್ಷಿಸಿದೆ. ಸಹೋದರ ಸತ್ಯನಾರಾಯಣ ಜೊತೆ ರಜನಿಕಾಂತ್​ ಅವರು ಆದಿಯೋಗಿ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಸನ್ಮಾನಿಸಲಾಗಿದೆ.

ಇದನ್ನೂ ಓದಿ: ‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

‘ಜೈಲರ್’​ ಸಿನಿಮಾದಲ್ಲಿ ರಜನಿಕಾಂತ್​-ಶಿವಣ್ಣ:

ರಜನಿಕಾಂತ್​ ಅವರ ಹೊಸ ಸಿನಿಮಾ ‘ಜೈಲರ್​’ ಶೂಟಿಂಗ್​ ಭರದಿಂದ ಸಾಗುತ್ತಿದೆ. ನೆಲ್ಸನ್​ ದಿಲೀಪ್​ ಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಇದರ ಶೂಟಿಂಗ್​ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಜನಿಕಾಂತ್ ಅವರ ಜೊತೆ ಶಿವರಾಜ್​ಕುಮಾರ್​ ಕೂಡ ನಟಿಸುತ್ತಿರುವುದು ವಿಶೇಷ. ಕೆಲವೇ ದಿನಗಳ ಹಿಂದೆ ಶಿವಣ್ಣ ಮತ್ತು ರಜನಿಕಾಂತ್​ ಅವರು ಒಟ್ಟಿಗೆ ಕಾಲ ಕಳೆದ ವಿಡಿಯೋ ವೈರಲ್​ ಆಗಿತ್ತು. ಈ ಸಿನಿಮಾದ ಶೂಟಿಂಗ್​ ಬಿಡುವಿನಲ್ಲಿ ಕರುನಾಡಿನ ಅನೇಕ ಸ್ಥಳಗಳಿಗೆ ರಜನಿಕಾಂತ್​ ಭೇಟಿ ನೀಡುತ್ತಿದ್ದಾರೆ.

‘ಜೈಲರ್’ ಸಿನಿಮಾಗೆ ಸನ್​ ಪಿಕ್ಚರ್ಸ್​ ಬಂಡವಾಳ ಹೂಡುತ್ತಿದೆ. ಇದೇ ಮೊದಲ ಬಾರಿಗೆ ಶಿವರಾಜ್​ಕುಮಾರ್​ ಮತ್ತು ರಜನಿಕಾಂತ್​ ಅವರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಈ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಅವರ ಜೊತೆ ಸಾಧು ಕೋಕಿಲ, ಯೋಗಿ ಬಾಬು ಮುಂತಾದ ಜನಪ್ರಿಯ ಕಲಾವಿದರು ಕೂಡ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Sun, 19 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?