AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಜೈಲರ್​’ ಸಿನಿಮಾ? ಬಾಕ್ಸ್​ ಆಫೀಸ್​ನಲ್ಲಿ ರಜನಿಕಾಂತ್​ ಅಬ್ಬರ

Jailer Box Office Collection: ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ‘ಜೈಲರ್​’ ಸಿನಿಮಾಗೆ ಭರ್ಜರಿ ಓಪನಿಂಗ್​ ಸಿಕ್ಕಿದೆ. ಈ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್​ಕುಮಾರ್​, ಮೋಹನ್​ಲಾಲ್​, ಜಾಕಿ ಶ್ರಾಫ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸಿರುವುದರಿಂದ ಕ್ರೇಜ್​ ಹೆಚ್ಚಾಗಿದೆ.

ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಜೈಲರ್​’ ಸಿನಿಮಾ? ಬಾಕ್ಸ್​ ಆಫೀಸ್​ನಲ್ಲಿ ರಜನಿಕಾಂತ್​ ಅಬ್ಬರ
ರಜನಿಕಾಂತ್​
ಮದನ್​ ಕುಮಾರ್​
|

Updated on: Aug 10, 2023 | 12:40 PM

Share

ನಟ ರಜನಿಕಾಂತ್​ (Rajinikanth) ಅಭಿಮಾನಿಗಳಿಗೆ ಇಂದು (ಆಗಸ್ಟ್​ 10) ಹಬ್ಬ. ಯಾಕೆಂದರೆ ಬಹುನಿರೀಕ್ಷಿತ ‘ಜೈಲರ್​’ ಸಿನಿಮಾ (Jailer Movie) ರಿಲೀಸ್​ ಆಗಿದೆ. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಿರುವ ಈ ಚಿತ್ರವನ್ನು ಪ್ರೇಕ್ಷಕರು ಮುಗಿಬಿದ್ದು ನೋಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಟಿಕೆಟ್​ ಬುಕಿಂಗ್​ ಶುರುವಾಗಿತ್ತು. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ಗಳು ಬಹುತೇಕ ಎಲ್ಲ ಕಡೆಗಳಲ್ಲಿ ಸೋಲ್ಡ್​ಔಟ್​ ಆಗಿವೆ. ರಜನಿಕಾಂತ್​ ಮಾತ್ರವಲ್ಲದೇ ಅನೇಕ ಸ್ಟಾರ್​ ನಟರು ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸಿರುವುದರಿಂದ ಈ ಚಿತ್ರಕ್ಕೆ ಹೈಪ್​ ಸೃಷ್ಟಿ ಆಗಿತ್ತು. ಮೊದಲ ದಿನ ಈ ಸಿನಿಮಾ 18ರಿಂದ 19 ಕೋಟಿ ರೂಪಾಯಿ ಕಲೆಕ್ಷನ್​ (Jailer Collection) ಮಾಡಬಹುದು ಎಂದು ಬಾಕ್ಸ್​ ಆಫೀಸ್ ವ್ಯವಹಾರ ಬಲ್ಲವರು ಊಹಿಸುತ್ತಿದ್ದಾರೆ.

‘ಜೈಲರ್​​’ಸಿನಿಮಾಗೆ ನೆಲ್ಸನ್​ ದಿಲೀಪ್​ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ಬಹಳ ಮಾಸ್​ ಆಗಿ ಈ ಚಿತ್ರ ಮೂಡಿಬಂದಿದೆ. ಮೊದಲ ದಿನ ಮೊದಲ ಶೋ ನೋಡಿ ಬಂದ ಬಹುತೇಕ ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕಾರಣದಿಂದ ‘ಜೈಲರ್​’ ಸಿನಿಮಾಗೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಗುತ್ತಿದೆ. ಹಾಗಾಗಿ ಮೊದಲ ದಿನ ಸಂಜೆಯ ಶೋಗಳು ಹೌಸ್​ಫುಲ್​ ಪ್ರದರ್ಶನ ಕಾಣಲಿವೆ.

ಇದನ್ನೂ ಓದಿ: Jailer Movie Review: ಇದು ಮಾಸ್ ಮಸಾಲ ‘ಜೈಲರ್’; ಇಷ್ಟವಾಗುತ್ತೆ ರಜನಿ, ಶಿವಣ್ಣನ ಖದರ್

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ಅವರ ಸಿನಿಮಾಗೆ ಭರ್ಜರಿ ಓಪನಿಂಗ್​ ಸಿಗುತ್ತದೆ. ‘ಜೈಲರ್​’ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್​ಕುಮಾರ್​, ಮೋಹನ್​ಲಾಲ್​, ಜಾಕಿ ಶ್ರಾಫ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸಿರುವುದರಿಂದ ಕರ್ನಾಟಕ ಮತ್ತು ಕೇರಳದಲ್ಲೂ ಈ ಸಿನಿಮಾದ ಕ್ರೇಜ್​ ಹೆಚ್ಚಾಗಿದೆ. ಈ ಸಿನಿಮಾಗೆ ಅನಿರುದ್ಧ್​ ರವಿಚಂದರ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಬಿಡುಗಡೆ ಪ್ರಯುಕ್ತ ಆ.10ರಂದು ರಜೆ ಘೋಷಿಸಿದ ಖಾಸಗಿ ಕಂಪನಿಗಳು; ಅಬ್ಬಬ್ಬಾ ಇದು ರಜನಿಕಾಂತ್​ ಹವಾ

ವಿದೇಶದಲ್ಲೂ ‘ಜೈಲರ್​’ ಸಿನಿಮಾ ಬಿಡುಗಡೆ ಆಗಿದೆ. ತಮನ್ನಾ ಭಾಟಿಯಾ ಮತ್ತು ರಜನಿಕಾಂತ್​ ಅವರು ಜೋಡಿಯಾಗಿ ಹೆಜ್ಜೆ ಹಾಕಿದ ‘ಕಾವಾಲಾ..’ ಹಾಡು ಸೂಪರ್​ ಹಿಟ್​ ಆಗಿದೆ. ಇಷ್ಟೆಲ್ಲ ಹೈಪ್​ ಪಡೆದುಕೊಂಡಿರುವ ಕಾರಣದಿಂದ ಭಾರತದಲ್ಲಿ ಈ ಸಿನಿಮಾ ಮೊದಲ ದಿನ 13 ಕೋಟಿ ರೂಪಾಯಿ ಗಳಿಸಲಿದೆ. ವಿದೇಶದಲ್ಲಿ 6 ಕೋಟಿ ರೂಪಾಯಿ ಕಲೆಕ್ಷನ್​ ಆಗಲಿದೆ. ಎರಡನ್ನೂ ಸೇರಿಸಿ 19 ಕೋಟಿ ರೂಪಾಯಿ ಗಳಿಕೆ ಆಗುತ್ತದೆ ಎಂದು ಅಂದಾಜಿಸಲಾಗಿದೆ. ಗುರುವಾರ (ಆಗಸ್ಟ್​ 11) ಈ ಬಗ್ಗೆ ಪಕ್ಕಾ ಲೆಕ್ಕ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು