400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ‘ಜೈಲರ್’ ಸಿನಿಮಾ ತಮಿಳುನಾಡಿನಲ್ಲಿ ಅಬ್ಬರಿಸಿದೆ. ಈ ಸಿನಿಮಾ ತಮಿಳುನಾಡಿನಲ್ಲಿ ಆರು ದಿನಕ್ಕೆ 134 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಂಧ್ರ ಪ್ರದೇಶ-ನಿಜಾಮ್ ಭಾಗದಲ್ಲಿ ಸಿನಿಮಾಗೆ 49 ಕೋಟಿ ರೂಪಾಯಿ ಗಳಿಕೆ ಆಗಿದೆ.

400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?
ರಜನಿಕಾಂತ್​, ಶಿವರಾಜ್​ಕುಮಾರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 16, 2023 | 12:17 PM

ನಟ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಮಲ್ಟಿ ಸ್ಟಾರರ್ ಸಿನಿಮಾ ಎನ್ನುವ ಕಾರಣಕ್ಕೆ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇತ್ತು. ಹೀಗಾಗಿ, ಈ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ಸ್ವಾಗತ ಸಿಕ್ಕಿತು. ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಮ್ಯಾಜಿಕ್ ಮಾಡಿದೆ. ಆರು ದಿನಕ್ಕೆ ಈ ಚಿತ್ರದ ಒಟ್ಟಾರೆ ಗಳಿಕ 400 ಕೋಟಿ ರೂಪಾಯಿ ಆಗಿದೆ. ವಿಶ್ವ ಮಟ್ಟದಲ್ಲಿ ಸಿನಿಮಾ ಸದ್ದು ಮಾಡುತ್ತಿದೆ. ರಜನಿಕಾಂತ್ (Rajinikanth) ವೃತ್ತಿ ಜೀವನದಲ್ಲಿ ಈ ಚಿತ್ರ ಪ್ರಮುಖ ಎನಿಸಿಕೊಂಡಿದೆ. ಕರ್ನಾಟಕದಲ್ಲೂ ಸಿನಿಮಾಗೆ ಒಳ್ಳೆಯ ಗಳಿಕೆ ಆಗಿದೆ.

ರಜನಿಕಾಂತ್ ಅವರು ಸೂಪರ್ ಸ್ಟಾರ್ ಎಂದೇ ಫೇಮಸ್ ಆದವರು. ಅವರನ್ನು ಆರಾಧಿಸುವ ಅನೇಕರಿದ್ದಾರೆ. ಅವರ ನಟನೆಯ ‘ಜೈಲರ್’ ಟ್ರೇಲರ್ ನೋಡಿ ಜನರು ಮೆಚ್ಚಿಕೊಂಡಿದ್ದರು. ಸಿನಿಮಾ ಕೂಡ ನಿರೀಕ್ಷೆಯ ಮಟ್ಟವನ್ನೂ ಮೀರಿದ್ದರಿಂದ ಸಹಜವಾಗಿಯೇ ಉತ್ತಮ ಗಳಿಕೆ ಆಗುತ್ತಿದೆ. ಬೇರೆ ಬೇರೆ ಭಾಷೆಯ ಸ್ಟಾರ್​ಗಳು ನಟಿಸಿದ್ದು ಚಿತ್ರಕ್ಕೆ ಸಹಕಾರಿ ಆಗಿದೆ. ತಮನ್ನಾ ಹೆಜ್ಜೆ ಹಾಕಿದ ‘ಕಾವಾಲಾ..’ ಹಾಡು ಕೂಡ ಮೋಡಿ ಮಾಡಿದೆ. ಈ ಎಲ್ಲಾ  ಕಾರಣದಿಂದ ಸಿನಿಮಾದ ಗಳಿಕೆ ಆರು ದಿನಕ್ಕೆ 400 ಕೋಟಿ ರೂಪಾಯಿ ಆಗಿದೆ.

ಯಾವ ರಾಜ್ಯದಲ್ಲಿ ಎಷ್ಟೆಷ್ಟು ಗಳಿಕೆ?

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ‘ಜೈಲರ್’ ಸಿನಿಮಾ ತಮಿಳುನಾಡಿನಲ್ಲಿ ಅಬ್ಬರಿಸಿದೆ. ಈ ಸಿನಿಮಾ ತಮಿಳುನಾಡಿನಲ್ಲಿ ಆರು ದಿನಕ್ಕೆ 134 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಂಧ್ರ ಪ್ರದೇಶ-ನಿಜಾಮ್ ಭಾಗದಲ್ಲಿ ಸಿನಿಮಾಗೆ 49 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದ್ದರಿಂದ ತೆಲುಗು ಭಾಗದ ಕಲೆಕ್ಷನ್ ಹೆಚ್ಚಲು ಸಹಕಾರಿ ಆಗಿದೆ. ತೆಲುಗಿನಲ್ಲಿ ರಿಲೀಸ್ ಆದ ‘ಭೋಲಾ ಶಂಕರ್’ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದು ‘ಜೈಲರ್’ ಚಿತ್ರದ ಕಲೆಕ್ಷನ್ ಹೆಚ್ಚಲು ಪ್ರಮುಖ ಕಾರಣ.

ಕೇರಳದಲ್ಲಿ ಈ ಚಿತ್ರ 33 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಲ್ಲಿ ಮಲಯಾಳಂ ನಟರಾದ ಮೋಹನ್​ಲಾಲ್ ಹಾಗೂ ವಿನಾಯಕನ್ ಅಭಿನಯಿಸಿದ್ದಾರೆ. ವಿನಾಯಕನ್ ಅವರು ವಿಲನ್ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಇನ್ನು ಕರ್ನಾಟಕದಲ್ಲಿ ಚಿತ್ರ ಅಬ್ಬರಿಸಿದೆ. ಈ ಸಿನಿಮಾ ನಮ್ಮ ರಾಜ್ಯದಲ್ಲಿ 44 ಕೋಟಿ ರೂಪಾಯಿ ಬಾಚಿಕೊಂಡಿದೆ. ಶಿವರಾಜ್​ಕುಮಾರ್ ಅವರ ಮಾಸ್ ಎಂಟ್ರಿಗೆ ಜನರು ಫಿದಾ ಆಗಿದ್ದಾರೆ. ಇದು ಕರ್ನಾಟಕದ ಕಲೆಕ್ಷನ್ ಹೆಚ್ಚಲು ಪ್ರಮುಖ ಕಾರಣ. ಉಳಿದ ರಾಜ್ಯಗಳಿಂದ ಚಿತ್ರಕ್ಕೆ 7 ಕೋಟಿ ರೂಪಾಯಿ ಸಿಕ್ಕಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಎರಡು ಗಂಟೆ ಟ್ರೆಕ್ಕಿಂಗ್ ಮಾಡಿ ಗುರುಗಳ ಭೇಟಿ ಮಾಡಿದ ರಜನಿಕಾಂತ್

ವಿದೇಶದಲ್ಲೂ ಈ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ರಜನಿಗೆ ಅಭಿಮಾನಿಗಳಿದ್ದಾರೆ. ಈ ಸಿನಿಮಾಗೆ ವಿದೇಶದಲ್ಲಿ 145 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ವಿಶ್ವ ಮಟ್ಟದಲ್ಲಿ ಈ ಚಿತ್ರದ ಗಳಿಕೆ 410 ಕೋಟಿ ರೂಪಾಯಿ ಆಗಿದೆ.

ವಾರಾದ ದಿನದಲ್ಲೂ ಅಬ್ಬರ

‘ಜೈಲರ್’ ಸಿನಿಮಾಗೆ ವೀಕೆಂಡ್ ಹಾಗೂ ಸ್ವಾತಂತ್ರ್ಯೋತ್ಸವದ ದಿನ ಭರ್ಜರಿ ಕಲೆಕ್ಷನ್ ಆಗಿದೆ. ಇದರ ಜೊತೆಗೆ ವಾರದ ದಿನಗಳಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಮಲ್ಟಿಪ್ಲೆಕ್ಸ್​​ನಲ್ಲಿ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಆಗುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ರಜನಿಕಾಂತ್

‘ಜೈಲರ್’ ಸಿನಿಮಾ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡುತ್ತಿರುವುದು ರಜನಿಕಾಂತ್​ಗೆ ಖುಷಿ ನೀಡಿದೆ. ಅವರು ಸಿನಿಮಾ ರಿಲೀಸ್​ಗೂ ಮೊದಲೇ ಹಿಮಾಚಲ ಪ್ರದೇಶಕ್ಕೆ ತೆರಳಿದ್ದರು. ಈಗ ಅಲ್ಲಿಯೇ ಇದ್ದಾರೆ. ಆಧ್ಯಾತ್ಮ ಗುರುಗಳನ್ನು ಅವರು ಭೇಟಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು