AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್ ಮಂದಿಗೂ ಇಷ್ಟವಾದ ‘ಕಾವಾಲಾ..’ ಹಾಡು; ಹೇಗಿದೆ ನೋಡಿ ಅಲ್ಲಿಯವರ ಡ್ಯಾನ್ಸ್

ಸಿನಿಮಾದಲ್ಲಿರುವ ವಿಶೇಷ ಸಾಂಗ್​ಗಳು ಕೆಲವೊಮ್ಮೆ ಭರ್ಜರಿ ಗಮನ ಸೆಳೆಯುತ್ತವೆ. ಈ ಮೊದಲು ರಿಲೀಸ್ ಆಗಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವ ಮಾವ..’ ಹಾಡು ಸೂಪರ್ ಹಿಟ್ ಆಯಿತು. ಎಲ್ಲ ಕಡೆಗಳಲ್ಲೂ ಈ ಹಾಡಿನದ್ದೇ ಸದ್ದಿತ್ತು. ಈಗ ‘ಕಾವಾಲಾ..’ ಹಾಡಿನ ಸರದಿ.

ಜಪಾನ್ ಮಂದಿಗೂ ಇಷ್ಟವಾದ ‘ಕಾವಾಲಾ..’ ಹಾಡು; ಹೇಗಿದೆ ನೋಡಿ ಅಲ್ಲಿಯವರ ಡ್ಯಾನ್ಸ್
ತಮನ್ನಾ
ರಾಜೇಶ್ ದುಗ್ಗುಮನೆ
|

Updated on: Aug 17, 2023 | 10:41 AM

Share

‘ಜೈಲರ್’ ಸಿನಿಮಾ (Jailer Movie) ವಿಶ್ವಾದ್ಯಂತ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಈ ಚಿತ್ರ ಆರು ದಿನಗಳಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ‘ಕಾವಾಲಾ..’ ಹಾಡು (Kaavaalaa Song) ಕೂಡ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟಿ ಕೋಟಿ ವೀವ್ಸ್ ಪಡೆದಿದೆ. ತಮನ್ನಾ ಹಾಕಿದ ಸ್ಟೆಪ್ಸ್ ಗಮನ ಸೆಳೆದಿದೆ. ಕೇವಲ ಭಾರತೀಯ ಮಂದಿ ಮಾತ್ರ ಈ ಹಾಡನ್ನು ಮೆಚ್ಚಿಕೊಂಡಿಲ್ಲ. ವಿದೇಶಿಗರು ಈ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ. ಭಾರತದ ಜಪಾನ್ ರಾಯಭಾರಿ ಕೂಡ ಈ ಹಾಡಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

ಸಿನಿಮಾದಲ್ಲಿರುವ ವಿಶೇಷ ಸಾಂಗ್​ಗಳು ಕೆಲವೊಮ್ಮೆ ಭರ್ಜರಿ ಗಮನ ಸೆಳೆಯುತ್ತವೆ. ಈ ಮೊದಲು ರಿಲೀಸ್ ಆಗಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವ ಮಾವ..’ ಹಾಡು ಸೂಪರ್ ಹಿಟ್ ಆಯಿತು. ಎಲ್ಲ ಕಡೆಗಳಲ್ಲೂ ಈ ಹಾಡಿನದ್ದೇ ಸದ್ದಿತ್ತು. ಈಗ ‘ಕಾವಾಲಾ..’ ಹಾಡಿನ ಸರದಿ. ಈ ಸಾಂಗ್ ಭರ್ಜರಿ ಮೆಚ್ಚುಗೆ ಪಡೆದಿದೆ. ಇತ್ತೀಚೆಗೆ ಜಪಾನ್ ವ್ಯಕ್ತಿಯೋರ್ವ ಈ ಹಾಡಿಗೆ ಹೆಜ್ಜೆ ಹಾಕಿದ್ದರು. ಈ ಮೂಲಕ ಜಪಾನ್​ನಲ್ಲೂ ಈ ಹಾಡು ಫೇಮಸ್ ಆಯಿತು. ಈಗ ಭಾರತದ ಜಪಾನ್ ರಾಯಭಾರಿ ಹಿರೋಷಿ ಸುಜುಕಿ ‘ಕಾವಾಲಾ..’ ಹಾಡಿಗೆ ಸ್ಟೆಪ್ ಹಾಕಿದ್ದಾರೆ.

ಜಪಾನ್ ಯೂಟ್ಯೂಬರ್ ಮಯೋ ಸಾನ್ ಜೊತೆ ಹಿರೋಷಿ ಅವರು ಕೊಲಾಬರೇಷನ್ ಮಾಡಿಕೊಂಡಿದ್ದಾರೆ. ‘ಜಪಾನ್ ಯೂಟ್ಯೂಬರ್ ಮಯೋ ಸ್ಯಾನ್ ಜೊತೆ ಕಾವಾಲಾ ಡ್ಯಾನ್ಸ್. ರಜನಿಕಾಂತ್ ಮೇಲೆ ಇರುವ ನನ್ನ ಪ್ರೀತಿ ನಿರಂತರ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

‘ಜೈಲರ್’ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಮೂಲಕ ಅವರು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ರಜನಿಕಾಂತ್ ಜೊತೆ ಕನ್ನಡದ ಶಿವರಾಜ್​ಕುಮಾರ್, ಮಲಯಾಳಂ ಕಲಾವಿದರಾದ ಮೋಹನ್​ಲಾಲ್, ವಿನಾಯಕನ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು