Sign In

By signing in or creating an account, you agree with Associated Broadcasting Company's Terms & Conditions and Privacy Policy.

Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ.

Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ
ರಜನಿ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Aug 18, 2023 | 11:35 AM

ಜೈಲರ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿತ್ತು. ಆ ನಿರೀಕ್ಷೆಯನ್ನು ಮೀರಿ ಚಿತ್ರ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎರಡನೇ ವಾರವೂ ಭರ್ಜರಿ ಗಳಿಕೆ ಆಗುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ನಿರ್ದೇಶನದ, ರಜನಿಕಾಂತ್ (Rajinikanth) ನಟನೆಯ ಈ ಸಿನಿಮಾ ಎಂಟು ದಿನಕ್ಕೆ ತಮಿಳುನಾಡಿನಲ್ಲಿ 235 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಕಲೆಕ್ಷನ್ 450+ ಕೋಟಿ ರೂಪಾಯಿ ಆಗಿದೆ ಅನ್ನೋದು ವಿಶೇಷ. ಇನ್ನೂ ಹಲವು ದಿನಗಳ ಕಾಲ ಈ ನಾಗಾಲೋಟ ಮುಂದುವರಿಯಲಿದೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ. ಬಾಲಿವುಡ್ ಸಿನಿಮಾಗಳ ಯಶಸ್ಸಿನ ಬಿಸಿ ಈ ಚಿತ್ರಕ್ಕೆ ತಟ್ಟುತ್ತಿಲ್ಲ.

ಬಾಲಿವುಡ್​ನಲ್ಲಿ ‘ಗದರ್ 2’ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಚಿತ್ರ ಐದು ದಿನಕ್ಕೆ 262 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು, ‘ಒಎಂಜಿ 2’ ಸಿನಿಮಾ ಕೂಡ 100 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರಗಳು ದಕ್ಷಿಣ ಭಾರತದಲ್ಲಿ ‘ಜೈಲರ್​’ ಚಿತ್ರದ ಜೊತೆ ಸ್ಪರ್ಧೆ ನೀಡೋಕೆ ಸಾಧ್ಯವಾಗುತ್ತಿಲ್ಲ. ತಮಿಳು ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಸಿನಿಮಾ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ರಜನಿಕಾಂತ್ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾಗೆ ಹೈಪ್ ಸೃಷ್ಟಿ ಆಗೋಕೆ ಇದೂ ಕಾರಣ. ಸದ್ಯ ರಜನಿಕಾಂತ್ ಅವರು ಹಿಮಾಚಲ್ ಪ್ರದೇಶಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಆಧ್ಯಾತ್ಮ ಗುರುಗಳನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:28 am, Fri, 18 August 23

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು