AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ.

Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ
ರಜನಿ
ರಾಜೇಶ್ ದುಗ್ಗುಮನೆ
| Edited By: |

Updated on:Aug 18, 2023 | 11:35 AM

Share

ಜೈಲರ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿತ್ತು. ಆ ನಿರೀಕ್ಷೆಯನ್ನು ಮೀರಿ ಚಿತ್ರ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎರಡನೇ ವಾರವೂ ಭರ್ಜರಿ ಗಳಿಕೆ ಆಗುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ನಿರ್ದೇಶನದ, ರಜನಿಕಾಂತ್ (Rajinikanth) ನಟನೆಯ ಈ ಸಿನಿಮಾ ಎಂಟು ದಿನಕ್ಕೆ ತಮಿಳುನಾಡಿನಲ್ಲಿ 235 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಕಲೆಕ್ಷನ್ 450+ ಕೋಟಿ ರೂಪಾಯಿ ಆಗಿದೆ ಅನ್ನೋದು ವಿಶೇಷ. ಇನ್ನೂ ಹಲವು ದಿನಗಳ ಕಾಲ ಈ ನಾಗಾಲೋಟ ಮುಂದುವರಿಯಲಿದೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ. ಬಾಲಿವುಡ್ ಸಿನಿಮಾಗಳ ಯಶಸ್ಸಿನ ಬಿಸಿ ಈ ಚಿತ್ರಕ್ಕೆ ತಟ್ಟುತ್ತಿಲ್ಲ.

ಬಾಲಿವುಡ್​ನಲ್ಲಿ ‘ಗದರ್ 2’ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಚಿತ್ರ ಐದು ದಿನಕ್ಕೆ 262 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು, ‘ಒಎಂಜಿ 2’ ಸಿನಿಮಾ ಕೂಡ 100 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರಗಳು ದಕ್ಷಿಣ ಭಾರತದಲ್ಲಿ ‘ಜೈಲರ್​’ ಚಿತ್ರದ ಜೊತೆ ಸ್ಪರ್ಧೆ ನೀಡೋಕೆ ಸಾಧ್ಯವಾಗುತ್ತಿಲ್ಲ. ತಮಿಳು ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಸಿನಿಮಾ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ರಜನಿಕಾಂತ್ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾಗೆ ಹೈಪ್ ಸೃಷ್ಟಿ ಆಗೋಕೆ ಇದೂ ಕಾರಣ. ಸದ್ಯ ರಜನಿಕಾಂತ್ ಅವರು ಹಿಮಾಚಲ್ ಪ್ರದೇಶಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಆಧ್ಯಾತ್ಮ ಗುರುಗಳನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:28 am, Fri, 18 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!