Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ.

Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ
ರಜನಿ
Follow us
| Updated By: Digi Tech Desk

Updated on:Aug 18, 2023 | 11:35 AM

ಜೈಲರ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿತ್ತು. ಆ ನಿರೀಕ್ಷೆಯನ್ನು ಮೀರಿ ಚಿತ್ರ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎರಡನೇ ವಾರವೂ ಭರ್ಜರಿ ಗಳಿಕೆ ಆಗುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ನಿರ್ದೇಶನದ, ರಜನಿಕಾಂತ್ (Rajinikanth) ನಟನೆಯ ಈ ಸಿನಿಮಾ ಎಂಟು ದಿನಕ್ಕೆ ತಮಿಳುನಾಡಿನಲ್ಲಿ 235 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಕಲೆಕ್ಷನ್ 450+ ಕೋಟಿ ರೂಪಾಯಿ ಆಗಿದೆ ಅನ್ನೋದು ವಿಶೇಷ. ಇನ್ನೂ ಹಲವು ದಿನಗಳ ಕಾಲ ಈ ನಾಗಾಲೋಟ ಮುಂದುವರಿಯಲಿದೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ. ಬಾಲಿವುಡ್ ಸಿನಿಮಾಗಳ ಯಶಸ್ಸಿನ ಬಿಸಿ ಈ ಚಿತ್ರಕ್ಕೆ ತಟ್ಟುತ್ತಿಲ್ಲ.

ಬಾಲಿವುಡ್​ನಲ್ಲಿ ‘ಗದರ್ 2’ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಚಿತ್ರ ಐದು ದಿನಕ್ಕೆ 262 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು, ‘ಒಎಂಜಿ 2’ ಸಿನಿಮಾ ಕೂಡ 100 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರಗಳು ದಕ್ಷಿಣ ಭಾರತದಲ್ಲಿ ‘ಜೈಲರ್​’ ಚಿತ್ರದ ಜೊತೆ ಸ್ಪರ್ಧೆ ನೀಡೋಕೆ ಸಾಧ್ಯವಾಗುತ್ತಿಲ್ಲ. ತಮಿಳು ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಸಿನಿಮಾ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ರಜನಿಕಾಂತ್ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾಗೆ ಹೈಪ್ ಸೃಷ್ಟಿ ಆಗೋಕೆ ಇದೂ ಕಾರಣ. ಸದ್ಯ ರಜನಿಕಾಂತ್ ಅವರು ಹಿಮಾಚಲ್ ಪ್ರದೇಶಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಆಧ್ಯಾತ್ಮ ಗುರುಗಳನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:28 am, Fri, 18 August 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು