AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ

Jailer Movie Second Day Collection: ‘ಜೈಲರ್’ ಚಿತ್ರದಲ್ಲಿ ದಕ್ಷಿಣ ಭಾರತದ ಹಲವು ಸ್ಟಾರ್​ಗಳಿದ್ದಾರೆ. ಕನ್ನಡದಿಂದ ಶಿವರಾಜ್​ಕುಮಾರ್, ಮಲಯಾಳಂನಿಂದ ಮೋಹನ್​ಲಾಲ್​ ಹಾಗೂ ವಿನಾಯಕನ್, ಹಿಂದಿಯಿಂದ ಜಾಕಿ ಶ್ರಾಫ್, ತೆಲುಗಿನಿಂದ ನಾಗ ಬಾಬು ಹಾಗೂ ಸುನೀಲ್ ನಟಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾದ ಮೈಲೇಜ್ ಹೆಚ್ಚಿದೆ.

‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ
ಜೈಲರ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Aug 12, 2023 | 8:35 AM

Share

ರಜನಿಕಾಂತ್, ಶಿವರಾಜ್​ಕುಮಾರ್ (Shivarajkumar), ಮೋಹನ್​ಲಾಲ್, ಜಾಕಿ ಶ್ರಾಫ್ ನಟನೆಯ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿತು. ಎರಡನೇ ದಿನವೂ ಈ ಚಿತ್ರಕ್ಕೆ ಉತ್ತಮ ಗಳಿಕೆ ಆಗಿದೆ. ಮೂರೇ ದಿನಕ್ಕೆ ಈ ಚಿತ್ರದ ಗಳಿಕೆ ನೂರು ಕೋಟಿ ರೂಪಾಯಿ ದಾಟಲಿದೆ ಅನ್ನೋದು ವಿಶೇಷ. ಸದ್ಯ ರಜನಿ ಫ್ಯಾನ್ಸ್ ಚಿತ್ರವನ್ನು ಎಂಜಾಯ್ ಮಾಡುತ್ತಿದ್ದಾರೆ. ಅವರ ಎನರ್ಜಿ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಜನಿಕಾಂತ್ ಅವರ ವಯಸ್ಸು ಈಗ 72. ಈ ವಯಸ್ಸಿನಲ್ಲೂ ಅವರು ಆ್ಯಕ್ಷನ್ ಚಿತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಮೊದಲ ದಿನ 48 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಆಗಸ್ಟ್ 11) ಈ ಚಿತ್ರದ ಗಳಿಕೆ 27 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಚಿತ್ರದ ಒಟ್ಟೂ ಗಳಿಕೆ 75 ಕೋಟಿ ರೂಪಾಯಿ ಆಗಿದೆ. ಇಂದು (ಆಗಸ್ಟ್ 12) ಹಾಗೂ ನಾಳೆ (ಆಗಸ್ಟ್ 13) ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಆಗಸ್ಟ್ 15ರಂದು ಚಿತ್ರ ಒಳ್ಳೆಯ ಕಮಾಯಿ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ.

‘ಜೈಲರ್’ ಚಿತ್ರದಲ್ಲಿ ದಕ್ಷಿಣ ಭಾರತದ ಹಲವು ಸ್ಟಾರ್​ಗಳಿದ್ದಾರೆ. ಕನ್ನಡದಿಂದ ಶಿವರಾಜ್​ಕುಮಾರ್, ಮಲಯಾಳಂನಿಂದ ಮೋಹನ್​ಲಾಲ್​ ಹಾಗೂ ವಿನಾಯಕನ್, ಹಿಂದಿಯಿಂದ ಜಾಕಿ ಶ್ರಾಫ್, ತೆಲುಗಿನಿಂದ ನಾಗ ಬಾಬು ಹಾಗೂ ಸುನೀಲ್ ನಟಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾದ ಮೈಲೇಜ್ ಹೆಚ್ಚಿದೆ.

ಇದನ್ನೂ ಓದಿ: ‘ಜೈಲರ್​’ ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯೂ ಕೇಳದೇ ಮನಶಾಂತಿಗಾಗಿ ಹಿಮಾಲಯಕ್ಕೆ ತೆರಳಿದ ರಜನಿಕಾಂತ್​

ಇದನ್ನೂ ಓದಿ: ಪರಭಾಷಿಗರಿಗೂ ಹತ್ತಿರವಾದ ಶಿವರಾಜ್​ಕುಮಾರ್; ಹ್ಯಾಟ್ರಿಕ್ ಹೀರೋಈ ಖದರ್​ಗೆ ಭರಪೂರ ಮೆಚ್ಚುಗೆ 

ಶಿವರಾಜ್​ಕುಮಾರ್ ಮಾಡಿರುವ ನರಸಿಂಹನ ಪಾತ್ರವನ್ನು ಎಲ್ಲರೂ ಹೊಗಳುತ್ತಿದ್ದಾರೆ. ಅವರು ಖಡಕ್ ಪಾತ್ರದ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ಶಿವರಾಜ್​ಕುಮಾರ್ ಅವರ ಖುಷಿಯನ್ನು ಹೆಚ್ಚಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು