AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ‘ಜೈಲರ್ vs ಜೈಲರ್’; ಒಂದೇ ಶೀರ್ಷಿಕೆಯ ಎರಡು ಸಿನಿಮಾ ಒಟ್ಟಿಗೆ ರಿಲೀಸ್  

‘ಜೈಲರ್’ ತಮಿಳು ಸಿನಿಮಾ. ಮಲಯಾಳಂ ಭಾಷೆಯಲ್ಲೂ ಇದೇ ಹೆಸರಿನ ಸಿನಿಮಾ ಸಿದ್ಧವಾಗಿದೆ. ಒಂದೇ ದಿನ ಎರಡೂ ಚಿತ್ರಗಳು ರಿಲೀಸ್ ಆಗುತ್ತಿವೆ ಅನ್ನೋದು ವಿಶೇಷ..

ಬಾಕ್ಸ್ ಆಫೀಸ್​ನಲ್ಲಿ ‘ಜೈಲರ್ vs ಜೈಲರ್’; ಒಂದೇ ಶೀರ್ಷಿಕೆಯ ಎರಡು ಸಿನಿಮಾ ಒಟ್ಟಿಗೆ ರಿಲೀಸ್  
ರಾಜೇಶ್ ದುಗ್ಗುಮನೆ
|

Updated on:Jul 25, 2023 | 2:17 PM

Share

ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ರಿಲೀಸ್​ಗೆ ರೆಡಿ ಇದೆ. ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shivarajkumar) ಕೂಡ ನಟಿಸಿದ್ದಾರೆ ಎನ್ನುವ ಕಾರಣಕ್ಕೆ ಕನ್ನಡಿಗರಿಗೆ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದಲ್ಲಿ ಅವರ ಪಾತ್ರ 10 ನಿಮಿಷಗಳ ಕಾಲ ಬರಲಿದೆಯಂತೆ. ಈ ಚಿತ್ರ ಆಗಸ್ಟ್ 10ರಂದು ತೆರೆಗೆ ಬರುತ್ತಿದೆ. ವಿಚಿತ್ರ ಎಂದರೆ ಇದೇ ಶೀರ್ಷಿಕೆಯ ಮತ್ತೊಂದು ಸಿನಿಮಾ ಅದೇ ದಿನ ರಿಲೀಸ್ ಆಗುತ್ತಿದೆ! ಇದು ಅಚ್ಚರಿ ಎನಿಸಿದರೂ ಸತ್ಯ.

‘ಜೈಲರ್’ ತಮಿಳು ಸಿನಿಮಾ. ಮಲಯಾಳಂ ಭಾಷೆಯಲ್ಲೂ ಇದೇ ಹೆಸರಿನ ಸಿನಿಮಾ ಸಿದ್ಧವಾಗಿದೆ. ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ಬರೋದು ಹೊಸದೇನು ಅಲ್ಲ. ಆದರೆ, ಒಂದೇ ದಿನ ಎರಡೂ ಚಿತ್ರಗಳು ರಿಲೀಸ್ ಆಗುತ್ತಿವೆ ಅನ್ನೋದು ವಿಶೇಷ. ಇದು ಈಗ ವಿವಾದವನ್ನೂ ಹುಟ್ಟುಹಾಕುವ ಸಾಧ್ಯತೆ ಇದೆ.

‘ಜೈಲರ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತದೆ. ತಮಿಳು ಮಾತ್ರವಲ್ಲದೆ, ತೆಲುಗು, ಕನ್ನಡ, ಮಲಯಾಳಂ ಮೊದಲಾದ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಈ ಕಾರಣಕ್ಕೆ ರಜನಿ ನಟನೆಯ ‘ಜೈಲರ್’ ಸಿನಿಮಾದ ಮಲಯಾಳಂ ವರ್ಷನ್​ಗೆ ಟೈಟಲ್ ಬದಲಾಯಿಸುವಂತೆ ಮತ್ತೊಂದು ತಂಡದಿಂದ ಆಗ್ರಹ ವ್ಯಕ್ತವಾಗಿದೆ.

ತಮಿಳು ಸಿನಿಮಾ ‘ಜೈಲರ್’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಕಾವಾಲಾ..’ ಹಾಡು ಸೆನ್ಸೇಷನ್ ಸೃಷ್ಟಿ ಮಾಡಿದೆ. ಮಲಯಾಳಂ ‘ಜೈಲರ್’ ಚಿತ್ರವನ್ನು  ಸಕ್ಕಿರ್ ಮದಥಿಲ್ ಅವರು ನಿರ್ದೇಶನ ಮಾಡಿದ್ದಾರೆ. ಎರಡು ತಂಡಗಳ ಮಧ್ಯೆ ಜಟಾಪಟಿ ಏರ್ಪಟ್ಟಿದೆ.

ಇದನ್ನೂ ಓದಿ: ಜೈಲರ್: ರಜನೀಕಾಂತ್ ಸಿನಿಮಾ ಹೆಸರು ವಿವಾದ, ಹೇಳಿಕೆ ಹೊರಡಿಸಿದ ನಿರ್ಮಾಣ ಸಂಸ್ಥೆ

ಈಗಾಗಲೇ ಮಲಯಾಳಂ ‘ಜೈಲರ್’ ತಂಡದವರು ತಮಿಳು ‘ಜೈಲರ್’ ಸಿನಿಮಾ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್​ನ ಸಂಪರ್ಕಿಸಿದ್ದಾರೆ. ಕೇರಳದಲ್ಲಿ ಟೈಟಲ್ ಬದಲಿಸಿ ಸಿನಿಮಾ ರಿಲೀಸ್ ಮಾಡುವಂತೆ ಕೋರಿಕೊಂಡಿದ್ದಾರೆ. ಕೆಲವರು ಮಲಯಾಳಂ ಸಿನಿಮಾ ತಂಡದ ವಿರುದ್ಧ ಕಿಡಿಕಾರಿದ್ದಾರೆ. ಉದ್ದೇಶಪೂರ್ವಕವಾಗಿ ಅವರು ಆಗಸ್ಟ್ 10ರಂದು ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ನೆಲ್ಸನ್ ದಿಲೀಪ್ ಕುಮಾರ್ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಕ್ಕಿರ್ ಕೂಡ ಕೋರ್ಟ್​​ನ ಮೊರೆ ಹೋಗಿದ್ದಾರೆ. ಆಗಸ್ಟ್ 2ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:46 am, Tue, 25 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು