AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ

Jana Naygan vs Parasakthi: ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ಜನ ನಾಯಗನ್ ಮತ್ತು ತಮಿಳು ಚಿತ್ರರಂಗದ ಯುವ ಸ್ಟಾರ್ ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾಗಳು ಒಂದೇ ಸಮಯಕ್ಕೆ ಬಿಡುಗಡೆ ಆಗುತ್ತಿವೆ. ಇದು ರಾಜಕೀಯ ಪ್ರೇರಿತ ಎನ್ನಲಾಗುತ್ತಿದೆ. ಈ ಬಗ್ಗೆ ‘ಪರಾಶಕ್ತಿ’ ನಾಯಕ ಶಿವಕಾರ್ತಿಕೇಯನ್ ಸ್ಪಷ್ಟನೆ ನೀಡಿದ್ದಾರೆ.

‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ
Jana Nayagan Parashakti
ಮಂಜುನಾಥ ಸಿ.
|

Updated on: Jan 04, 2026 | 8:05 PM

Share

ದಳಪತಿ ವಿಜಯ್ (Thalapathy Vijay) ಈಗ ಕೇವಲ ಸ್ಟಾರ್ ನಟ ಮಾತ್ರವಲ್ಲ, ತಮಿಳುನಾಡು ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ರಾಜಕಾರಣಿ. ‘ಜನ ನಾಯಗನ್’ ವಿಜಯ್ ಕಡೆಯ ಸಿನಿಮಾ ಎನ್ನಲಾಗುತ್ತಿದೆ. ತಮಿಳುನಾಡಿನಲ್ಲಿ ಚುನಾವಣೆಗಳು ಪ್ರಾರಂಭವಾದಾಗಿನಿಂದಲೂ ಸಿನಿಮಾ ಮತ್ತು ರಾಜಕೀಯ ಪರಸ್ಪರವನ್ನು ಅವಲಂಭಿಸಿವೆ. ಈಗ ‘ಜನ ನಾಯಗನ್’ ಸಿನಿಮಾ ಮೂಲಕ ವಿಜಯ್ ಸಹ ತಮ್ಮ ರಾಜಕೀಯ ಅಜೆಂಡಾ ಅನ್ನು ಪ್ರಚಾರ ಮಾಡಲು ಮುಂದಾಗಿದ್ದಾರೆ. ‘ಜನ ನಾಯಗನ್’ ಬಿಡುಗಡೆ ಆಗುತ್ತಿರುವ ದಿನವೇ ತಮಿಳಿನ ‘ಪರಾಶಕ್ತಿ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ವಿಜಯ್ ಅವರ ರಾಜಕೀಯ ಎದುರಾಳಿಗಳು ವಿಜಯ್ ಅವರ ‘ಸಿನಿಮಾ ರಾಜಕೀಯಕ್ಕೆ’ ಸಿನಿಮಾ ಮೂಲಕವೇ ಅಡ್ಡಗಾಲು ಹಾಕಲೆಂದು ಮುಂದಾಗಿ, ‘ಪರಾಶಕ್ತಿ’ ಸಿನಿಮಾವನ್ನು ಅದೇ ದಿನ ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದು ನಿಜವೇ? ಈ ಪ್ರಶ್ನೆಗೆ ‘ಪರಾಶಕ್ತಿ’ ಸಿನಿಮಾದ ನಾಯಕ ಶಿವಕಾರ್ತಿಕೇಯನ್ ಉತ್ತರ ನೀಡಿದ್ದಾರೆ.

‘ಪರಾಶಕ್ತಿ’ ಸಿನಿಮಾ ನಿರ್ಮಾಣ ಮಾಡಿರುವ ಆಕಾಶ್ ಭಾಸ್ಕರನ್, ಆಡಳಿತಾರೂಢ ಡಿಎಂಕೆ ನಾಯಕರಿಗೆ ಬಲು ಆಪ್ತರು ಮತ್ತು ಹತ್ತಿರದ ಸಂಬಂಧಿ ಸಹ. ದಳಪತಿ ವಿಜಯ್ ಅವರ ಪ್ರಮುಖ ರಾಜಕೀಯ ಎದುರಾಳಿ ಡಿಎಂಕೆ ಆಗಿದೆ. ಇದೇ ಕಾರಣಕ್ಕೆ ತಮ್ಮ ಎದುರಾಳಿಯಾದ ವಿಜಯ್ ಅವರ ಸಿನಿಮಾಕ್ಕೆ ತಮ್ಮ ಸಿನಿಮಾವನ್ನು ಪ್ರತಿಸ್ಪರ್ಧಿಯಾಗಿ ಬಿಡುಗಡೆ ಮಾಡುತ್ತಿದ್ದಾರೆ ಆಕಾಶ್ ಭಾಸ್ಕರನ್ ಎಂಬ ಚರ್ಚೆ ತಮಿಳುನಾಡಿನಲ್ಲಿ ಹರಿದಾಡುತ್ತಿದೆ. ಇದಕ್ಕೆ ‘ಪರಾಶಕ್ತಿ’ ಸಿನಿಮಾದ ನಾಯಕ ಶಿವಕಾರ್ತಿಕೇಯನ್ ಉತ್ತರ ನೀಡಿದ್ದಾರೆ.

‘ನಾವು ಮೊದಲು 2025ರ ದೀಪಾವಳಿ ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದ್ದೆವು, ಆದರೆ ‘ಜನ ನಾಯಗನ್’ ಸಿನಿಮಾ ದೀಪಾವಳಿಗೆ ಬಿಡುಗಡೆ ಆಗುತ್ತಿದೆ ಎಂಬ ವಿಷಯ ಗೊತ್ತಾಗಿ, ನಾವು ಸಂಕ್ರಾಂತಿಗೆ ಸಿನಿಮಾ ಬಿಡುಗಡೆ ಮಾಡೋಣ ಎಂದು ಸುಮ್ಮನಾದೆವು, ನಮ್ಮ ಸಿನಿಮಾ ಕೆಲಸಗಳನ್ನು ಸಹ ಅದಕ್ಕೆ ತಕ್ಕಂತೆ ಹೊಂದಿಸಿಕೊಂಡೆವು. ಆದರೆ ಬಳಿಕ ‘ಜನ ನಾಯಗನ್’ ಸಿನಿಮಾ ಬಿಡುಗಡೆಯನ್ನು ಸಂಕ್ರಾಂತಿಗೆ ಮುಂದೂಡಲಾಯ್ತು’ ಎಂದಿದ್ದಾರೆ.

ಇದನ್ನೂ ಓದಿ:ಎಲ್ಲರಿಗೂ ಸ್ವಂತ ಮನೆ, ಕಾರು, ಬೈಕು: ದಳಪತಿ ವಿಜಯ್ ಭರವಸೆ

‘ಜನ ನಾಯಗನ್’ ಸಿನಿಮಾ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ ಎಂದು ಗೊತ್ತಾದಾಗ ಮೊದಲು ನಾನು ನಿರ್ಮಾಪಕ ಆಕಾಶ್ ಅವರ ಬಳಿ, ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಮುಂದೂಡಲು ಸಾಧ್ಯವೇ ಎಂದು ಕೇಳಿದೆ. ಆದರೆ ಅದು ಸಾಧ್ಯವಿರಲಿಲ್ಲ. ಸಿನಿಮಾ ಮೇಲೆ ಹೂಡಿಕೆ ಮಾಡಿರುವವರಿಗೆ ಬಿಡುಗಡೆ ದಿನಾಂಕ ಹೇಳಿ ಆಗಿತ್ತು. ಅದಕ್ಕೆ ತಕ್ಕಂತೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿತ್ತು. ಅಲ್ಲದೆ ಈಗ ನಾವು ಬಿಡುಗಡೆ ಮಾಡಲಿಲ್ಲವೆಂದಾದರೆ ಮತ್ತೆ ಏಪ್ರಿಲ್ ವರೆಗೆ ಬಿಡುಗಡೆ ಮಾಡಲು ಆಗುತ್ತಿರಲಿಲ್ಲ ಹಾಗಾಗಿ ಧೈರ್ಯ ಮಾಡಿ ಬಿಡುಗಡೆಗೆ ಮುಂದಾದೆವು’ ಎಂದಿದ್ದಾರೆ ಶಿವಕಾರ್ತಿಕೇಯನ್.

‘ನಾನು ವಿಜಯ್ ಅವರ ಮ್ಯಾನೇಜರ್ ಜಗದೀಶ್ ಬಳಿಯೂ ಮಾತನಾಡಿದೆ. ಎರಡೂ ಸಿನಿಮಾಗಳು ಒಟ್ಟಿಗೆ ಬರುತ್ತಿವೆ, ಈ ಬಗ್ಗೆ ವಿಜಯ್ ಅವರ ಬಳಿ ಮಾತನಾಡಿ ಎಂದು ಮನವಿ ಮಾಡಿದೆ. ಅದಕ್ಕೆ ವಿಜಯ್ ಅವರು ಸಂಕ್ರಾಂತಿ ಸಮಯ ಆದ್ದರಿಂದ ಎರಡೂ ಸಿನಿಮಾಗಳಿಗೆ ಸಾಕಷ್ಟು ಥಿಯೇಟರ್ ಸ್ಪೇಸ್ ಸಿಗುತ್ತದೆ. ಯೋಚನೆ ಬೇಡ ಆರಾಮವಾಗಿ ಬಿಡುಗಡೆ ಮಾಡುವಂತೆ ವಿಜಯ್ ಅವರು ಹೇಳಿದ್ದಾಗಿ ಜಗದೀಶ್ ಹೇಳಿದರು ಎಂದಿದ್ದಾರೆ ಶಿವಕಾರ್ತಿಕೇಯನ್. ಅಲ್ಲದೆ, ‘ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಅನ್ನು ಎಲ್ಲರೂ ಎಂಜಾಯ್ ಮಾಡೋಣ ಎಂದು ಸಹ ಶಿವಕಾರ್ತಿಕೇಯನ್ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಜನವರಿ 9ಕ್ಕೆ ಬಿಡುಗಡೆ ಆದರೆ, ‘ಪರಾಶಕ್ತಿ’ ಸಿನಿಮಾ ಜನವರಿ 10ಕ್ಕೆ ತೆರೆಗೆ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ