AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ವಿಳಂಬದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ?

‘ಜನ ನಾಯಗನ್’ ಚಿತ್ರದ ಸೆನ್ಸಾರ್ ವಿಳಂಬ ಮತ್ತು ನ್ಯಾಯಾಲಯದ ಪ್ರಕರಣದಿಂದ ಅದರ ಬಿಡುಗಡೆ ಮುಂದೂಡಲ್ಪಟ್ಟಿದೆ. ಇದು ಕೆವಿಎನ್ ನಿರ್ಮಾಣದ 'ಟಾಕ್ಸಿಕ್' ಮತ್ತು 'ಕೆಡಿ' ಚಿತ್ರಗಳ ಪ್ರಚಾರ ಹಾಗೂ ಬಿಡುಗಡೆ ವೇಳಾಪಟ್ಟಿಯ ಮೇಲೆ ನೇರ ಪರಿಣಾಮ ಬೀರಿದೆ. ವಿಜಯ್ ಅವರ ರಾಜಕೀಯ ಪ್ರವೇಶದಿಂದ ರಾಜಕೀಯ ಶಕ್ತಿಗಳು ಚಿತ್ರವನ್ನು ತಡೆಯುತ್ತಿವೆಯೇ ಎಂಬ ಪ್ರಶ್ನೆ ಎದ್ದಿದೆ.

‘ಜನ ನಾಯಗನ್’ ವಿಳಂಬದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ?
ಕೆವಿಎನ್ ಸಿನಿಮಾಗಳು
ರಾಜೇಶ್ ದುಗ್ಗುಮನೆ
|

Updated on:Jan 28, 2026 | 3:29 PM

Share

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ.

ವಿಜಯ್ ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ ರಿಲೀಸ್ ಆಗುತ್ತಿದೆ. ಇದು ಬಾಲಯ್ಯ ಅವರ ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್. ಇದರಲ್ಲಿ ರಾಜಕೀಯ ವಿಷಯ ಕೂಡ ಇದೆ. ವಿಜಯ್ ಕೂಡ ರಾಜಕೀಯಕ್ಕೆ ಬರುತ್ತಿರುವುದರಿಂದ ರಾಜಕೀಯ ಶಕ್ತಿಗಳು ಸಿನಿಮಾ ರಿಲೀಸ್ ಆಗದಂತೆ ತಡೆಯುತ್ತಿವೆಯೇ ಎಂಬ ಪ್ರಶ್ನೆ ಮೂಡಿದೆ. ಈ ಮಧ್ಯೆ ‘ಟಾಕ್ಸಿಕ್’ ಚಿತ್ರಕ್ಕೂ ತೊಂದರೆ ಎದುರಾಗುವ ಸೂಚನೆ ಸಿಕ್ಕಿದೆ.

‘ಜನ ನಾಯಗನ್’ ಸಿನಿಮಾ ನಿರ್ಮಾಣ ಮಾಡಿದ್ದು ಕನ್ನಡದ ಕೆವಿಎನ್​ ಸಂಸ್ಥೆ. ಯಶ್ ನಟನೆಯ ‘ಟಾಕ್ಸಿಕ್’ ಹಾಗೂ ಧ್ರುವ ಸರ್ಜಾ ವರ ‘ಕೆಡಿ’ ಚಿತ್ರವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿದೆ. ಜನವರಿ 9ಕ್ಕೆ ‘ಜನ ನಾಯಗನ್’, ‘ಮಾರ್ಚ್ 19’ಕ್ಕೆ ‘ಟಾಕ್ಸಿಕ್’ ಹಾಗೂ ಏಪ್ರಿಲ್ ಅಂತ್ಯಕ್ಕೆ ‘ಕೆಡಿ’ ರಿಲೀಸ್ ಮಾಡುವ ಪ್ಲ್ಯಾನ್ ಸಂಸ್ಥೆಯದ್ದಾಗಿತ್ತು.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ

ಒಂದು ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಮತ್ತೊಂದು ಚಿತ್ರದ ಪ್ರಚಾರ ಕಾರ್ಯ ಆರಂಭಿಸುವ ಪ್ಲ್ಯಾನ್​ ಅಲ್ಲಿ ಕೆವಿಎನ್ ಇತ್ತು. ಆದರೆ, ‘ಜನ ನಾಯಗನ್’ ಸಿನಿಮಾ ರಿಲೀಸ್ ಡೋಲಾಯಮಾನ ಸ್ಥಿತಿಯಲ್ಲಿ ಇದೆ. ಹೀಗಾಗಿ, ‘ಟಾಕ್ಸಿಕ್’ ಚಿತ್ರದ ಪ್ರಚಾರಕ್ಕೆ ಸಾಕಷ್ಟು ಅಡಚಣೆ ಉಂಟಾಗಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಳಿಕ ‘ಕೆಡಿ’ ಸಿನಿಮಾದ ಮೇಲೂ ಇದು ಪರಿಣಾಮ ಬೀರಲಿದೆ. ‘ಜನ ನಾಯಗನ್’ ಸಿನಿಮಾ ಯಾವಾಗ ರಿಲೀಸ್ ಆಗುತ್ತದೆ ಎಂಬುದು ಸದ್ಯದ ಪ್ರಶ್ನೆ. ಅದರ ಆಧಾರದ ಮೇಲೆ ಮುಂದಿನ ಪ್ಲ್ಯಾನ್​​ಗಳು ನಿರ್ಧಾರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:05 am, Wed, 28 January 26

Follow Us
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ