AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್

"ಜನ ನಾಯಗನ್" ಸಿನಿಮಾ ದೃಶ್ಯಗಳ ಸೋರಿಕೆಯಿಂದ ನಿರ್ಮಾಪಕರಿಗೆ ಸಾಕಷ್ಟು ನಷ್ಟವಾಗಿದೆ. ಅನೇಕ ಸ್ಟಾರ್‌ಗಳು ಘಟನೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗ್ರಹಿಸಿದ್ದಾರೆ. ಆದರೆ, ನಾಯಕ ದಳಪತಿ ವಿಜಯ್ ಈ ಬಗ್ಗೆ ಮೌನ ತಾಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ನಿರತರಾದ ಅವರು ಪ್ರತಿಕ್ರಿಯಿಸಲು ನಿರಾಕರಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್
ವಿಜಯ್ Image Credit source: PTI
ರಾಜೇಶ್ ದುಗ್ಗುಮನೆ
|

Updated on: Apr 11, 2026 | 6:46 AM

Share

‘ಜನ ನಾಯಗನ್’ ಸಿನಿಮಾ (Jana Nayagan) ಬಗ್ಗೆ ಸೃಷ್ಟಿ ಆದ ವಿವಾದಗಳು ಒಂದೆರಡಲ್ಲ. ಪ್ರತಿ ಹಂತದಲ್ಲೂ ಚಿತ್ರಕ್ಕೆ ಹಿನ್ನಡೆಗಳು ಆಗುತ್ತಲೇ ಬರುತ್ತಿದ್ದವು. ಈಗ ಸಿನಿಮಾಗೆ ದೊಡ್ಡ ಹೊಡೆತ ಸಿಕ್ಕಿದೆ. ಚಿತ್ರದ ಪ್ರಮುಖ ದೃಶ್ಯಗಳೇ ಲೀಕ್ ಆಗಿವೆ. ಈ ಮೂಲಕ ನೂರಾರು ಕೋಟಿ ರೂಪಾಯಿ ಸುರಿದು ಸಿನಿಮಾ ಮಾಡಿದ ನಿರ್ಮಾಪಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಅನೇಕ ಸ್ಟಾರ್​​ಗಳು ಖಂಡನೆ ಮಾಡಿದ್ದಾರೆ. ಆದರೆ, ವಿಜಯ್ ಮಾತ್ರ ಈ ವಿಷಯದಲ್ಲಿ ಮೌನ ತಾಳಿದ್ದಾರೆ.

‘ಜನ ನಾಯಗನ್’ ಸಿನಿಮಾ ಲೀಕ್ ವಿಷಯವನ್ನು ತೆಲುಗಿನ ನಟ ಚಿರಂಜೀವಿ, ನಟಿ ಖುಷ್ಬೂ ಸುಂದರ್ ಹೀಗೆ ಅನೇಕರು ಖಂಡನೆ ಮಾಡಿದ್ದಾರೆ. ಕೆವಿಎನ್ ಹೋರಾಟದಲ್ಲಿ ನಾವಿದ್ದೇವೆ ಎಂದಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಅನೇಕರು ಒತ್ತಾಯಿಸಿದ್ದಾರೆ. ಕೆವಿಎನ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದೆ. ಆದರೆ, ವಿಜಯ್ ಈ ವಿಷಯದಲ್ಲಿ ಮಾತನಾಡುತ್ತಿಲ್ಲ.

ದಳಪತಿ ವಿಜಯ್ ಅವರು ‘ಜನ ನಾಯಗನ್’ ಚಿತ್ರದ ಹೀರೋ. ಸಿನಿಮಾ ಲೀಕ್ ವಿಷಯ ಅವರಿಗೆ ದೊಡ್ಡ ಚಿಂತೆ ತಂದಿದೆ. ಮುಂದೇನು ಎನ್ನುವ ಪ್ರಶ್ನೆ ಹುಟ್ಟುಹಾಕಿದೆ. ಇದರ ಜೊತೆಗೆ ಚುನಾವಣೆ ಪ್ರಚಾರ ಮಾಡುವ ಕೆಲಸವನ್ನು ಅವರು ಮುಂದುವರಿಸಲೇಬೇಕಿದೆ. ಅವರು ಕೊನೆಯ ಪಕ್ಷ ಒಂದು ಟ್ವೀಟ್​ ಆದರೂ ಮಾಡಬಹುದಿತ್ತು ಎಂದು ಫ್ಯಾನ್ಸ್ ಬಯಸಿದ್ದರು. ಅವರು ಮಾಧ್ಯಮದವರು ಪ್ರಶ್ನೆ ಮಾಡಿದಾಗ ಉತ್ತರಿಸಬೇಕು ಎಂದಿದ್ದರು. ಆದರೆ, ಯಾವುದನ್ನೂ ಅವರು ಮಾಡಿಲ್ಲ.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ವಿಜಯ್ ಅವರು ಏಪ್ರಿಲ್ 10ರಂದು ಚೆನ್ನೈಗೆ ಬಂದಿದ್ದಾರೆ. ಶಿವಗಂಗಾ ಜಿಲ್ಲೆಯ ಕರೈಕುಡಿಯಲ್ಲಿ ಚುನಾವಣೆ ಪ್ರಚಾರ ಮಾಡಿ ಅವರು ಮರಳಿದ್ದಾರೆ. ಆಗ ಅವರಿಗೆ ‘ಜನ ನಾಯಗನ್ ಸಿನಿಮಾ ಸೋರಿಕೆ ಬಗ್ಗೆ ಮಾತನಾಡಿ’ ಎಂದು ಕೇಳಲಾಯಿತು. ಆದರೆ, ಇದಕ್ಕೆ ವಿಜಯ್ ಉತ್ತರಿಸುವ ಮನಸ್ಸು ಮಾಡಿಲ್ಲ. ಬದಲಿಗೆ ಅವರು ನೇರವಾಗಿ ನಡೆದು ಹೋದರು. ಅವರು ಈ ಬಗ್ಗೆ ಉತ್ತರಿಸಬೇಕಿತ್ತು ಎಂದು ಫ್ಯಾನ್ಸ್ ಹೇಳಿದ್ದಾರೆ.

‘ಜನ ನಾಯಗನ್’ ಸಿನಿಮಾಗೆ ಇನ್ನೂ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ. ಇದು ಚಿತ್ರ ಮುಂದಕ್ಕೆ ಹೋಗಲು ಪ್ರಮುಖ ಕಾರಣ.ಚುನಾವಣೆ ಮುಗಿದ ಬಳಿಕ ಸಿನಿಮಾ ರಿಲೀಸ್ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ