AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್

"ಜನ ನಾಯಗನ್" ಸಿನಿಮಾ ದೃಶ್ಯಗಳ ಸೋರಿಕೆಯಿಂದ ನಿರ್ಮಾಪಕರಿಗೆ ಸಾಕಷ್ಟು ನಷ್ಟವಾಗಿದೆ. ಅನೇಕ ಸ್ಟಾರ್‌ಗಳು ಘಟನೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗ್ರಹಿಸಿದ್ದಾರೆ. ಆದರೆ, ನಾಯಕ ದಳಪತಿ ವಿಜಯ್ ಈ ಬಗ್ಗೆ ಮೌನ ತಾಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ನಿರತರಾದ ಅವರು ಪ್ರತಿಕ್ರಿಯಿಸಲು ನಿರಾಕರಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್
ವಿಜಯ್ Image Credit source: PTI
ರಾಜೇಶ್ ದುಗ್ಗುಮನೆ
|

Updated on: Apr 11, 2026 | 6:46 AM

Share

‘ಜನ ನಾಯಗನ್’ ಸಿನಿಮಾ (Jana Nayagan) ಬಗ್ಗೆ ಸೃಷ್ಟಿ ಆದ ವಿವಾದಗಳು ಒಂದೆರಡಲ್ಲ. ಪ್ರತಿ ಹಂತದಲ್ಲೂ ಚಿತ್ರಕ್ಕೆ ಹಿನ್ನಡೆಗಳು ಆಗುತ್ತಲೇ ಬರುತ್ತಿದ್ದವು. ಈಗ ಸಿನಿಮಾಗೆ ದೊಡ್ಡ ಹೊಡೆತ ಸಿಕ್ಕಿದೆ. ಚಿತ್ರದ ಪ್ರಮುಖ ದೃಶ್ಯಗಳೇ ಲೀಕ್ ಆಗಿವೆ. ಈ ಮೂಲಕ ನೂರಾರು ಕೋಟಿ ರೂಪಾಯಿ ಸುರಿದು ಸಿನಿಮಾ ಮಾಡಿದ ನಿರ್ಮಾಪಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಅನೇಕ ಸ್ಟಾರ್​​ಗಳು ಖಂಡನೆ ಮಾಡಿದ್ದಾರೆ. ಆದರೆ, ವಿಜಯ್ ಮಾತ್ರ ಈ ವಿಷಯದಲ್ಲಿ ಮೌನ ತಾಳಿದ್ದಾರೆ.

‘ಜನ ನಾಯಗನ್’ ಸಿನಿಮಾ ಲೀಕ್ ವಿಷಯವನ್ನು ತೆಲುಗಿನ ನಟ ಚಿರಂಜೀವಿ, ನಟಿ ಖುಷ್ಬೂ ಸುಂದರ್ ಹೀಗೆ ಅನೇಕರು ಖಂಡನೆ ಮಾಡಿದ್ದಾರೆ. ಕೆವಿಎನ್ ಹೋರಾಟದಲ್ಲಿ ನಾವಿದ್ದೇವೆ ಎಂದಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಅನೇಕರು ಒತ್ತಾಯಿಸಿದ್ದಾರೆ. ಕೆವಿಎನ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದೆ. ಆದರೆ, ವಿಜಯ್ ಈ ವಿಷಯದಲ್ಲಿ ಮಾತನಾಡುತ್ತಿಲ್ಲ.

ದಳಪತಿ ವಿಜಯ್ ಅವರು ‘ಜನ ನಾಯಗನ್’ ಚಿತ್ರದ ಹೀರೋ. ಸಿನಿಮಾ ಲೀಕ್ ವಿಷಯ ಅವರಿಗೆ ದೊಡ್ಡ ಚಿಂತೆ ತಂದಿದೆ. ಮುಂದೇನು ಎನ್ನುವ ಪ್ರಶ್ನೆ ಹುಟ್ಟುಹಾಕಿದೆ. ಇದರ ಜೊತೆಗೆ ಚುನಾವಣೆ ಪ್ರಚಾರ ಮಾಡುವ ಕೆಲಸವನ್ನು ಅವರು ಮುಂದುವರಿಸಲೇಬೇಕಿದೆ. ಅವರು ಕೊನೆಯ ಪಕ್ಷ ಒಂದು ಟ್ವೀಟ್​ ಆದರೂ ಮಾಡಬಹುದಿತ್ತು ಎಂದು ಫ್ಯಾನ್ಸ್ ಬಯಸಿದ್ದರು. ಅವರು ಮಾಧ್ಯಮದವರು ಪ್ರಶ್ನೆ ಮಾಡಿದಾಗ ಉತ್ತರಿಸಬೇಕು ಎಂದಿದ್ದರು. ಆದರೆ, ಯಾವುದನ್ನೂ ಅವರು ಮಾಡಿಲ್ಲ.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ವಿಜಯ್ ಅವರು ಏಪ್ರಿಲ್ 10ರಂದು ಚೆನ್ನೈಗೆ ಬಂದಿದ್ದಾರೆ. ಶಿವಗಂಗಾ ಜಿಲ್ಲೆಯ ಕರೈಕುಡಿಯಲ್ಲಿ ಚುನಾವಣೆ ಪ್ರಚಾರ ಮಾಡಿ ಅವರು ಮರಳಿದ್ದಾರೆ. ಆಗ ಅವರಿಗೆ ‘ಜನ ನಾಯಗನ್ ಸಿನಿಮಾ ಸೋರಿಕೆ ಬಗ್ಗೆ ಮಾತನಾಡಿ’ ಎಂದು ಕೇಳಲಾಯಿತು. ಆದರೆ, ಇದಕ್ಕೆ ವಿಜಯ್ ಉತ್ತರಿಸುವ ಮನಸ್ಸು ಮಾಡಿಲ್ಲ. ಬದಲಿಗೆ ಅವರು ನೇರವಾಗಿ ನಡೆದು ಹೋದರು. ಅವರು ಈ ಬಗ್ಗೆ ಉತ್ತರಿಸಬೇಕಿತ್ತು ಎಂದು ಫ್ಯಾನ್ಸ್ ಹೇಳಿದ್ದಾರೆ.

‘ಜನ ನಾಯಗನ್’ ಸಿನಿಮಾಗೆ ಇನ್ನೂ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ. ಇದು ಚಿತ್ರ ಮುಂದಕ್ಕೆ ಹೋಗಲು ಪ್ರಮುಖ ಕಾರಣ.ಚುನಾವಣೆ ಮುಗಿದ ಬಳಿಕ ಸಿನಿಮಾ ರಿಲೀಸ್ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ