AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಬಿಡುಗಡೆ ಮುಂಚೆ ತಮಿಳುನಾಡು ಚಿತ್ರಮಂದಿರಗಳಿಗೆ ಎಚ್ಚರಿಕೆ

Jana Nayagan movie: ಸಿಎಂ ವಿಜಯ್ ಅವರ ಕೊನೆಯ ಸಿನಿಮಾ ಇದೆಂದು ಪ್ರಚಾರ ಮಾಡಲಾಗಿದ್ದ ಕಾರಣ, ಭಾರಿ ಸಂಖ್ಯೆಯ ಅಭಿಮಾನಿಗಳು ಸಿನಿಮಾ ನೋಡಲು ಮುಗಿಬೀಳುವ ಸಾಧ್ಯತೆ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಮುಂಚೆ ತಮಿಳುನಾಡಿನ ಚಿತ್ರಮಂದಿರಗಳಿಗೆ ಕೆಲವು ಶಿಸ್ತಿನ ಎಚ್ಚರಿಕೆಗಳನ್ನು ನೀಡಲಾಗಿದೆ.

‘ಜನ ನಾಯಗನ್’ ಬಿಡುಗಡೆ ಮುಂಚೆ ತಮಿಳುನಾಡು ಚಿತ್ರಮಂದಿರಗಳಿಗೆ ಎಚ್ಚರಿಕೆ
Jana Nayagan
ಮಂಜುನಾಥ ಸಿ.
|

Updated on: Jul 19, 2026 | 5:44 PM

Share

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ವರ್ಷದ ಮೊದಲ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಹಲವಾರು ಅಡೆ-ತಡೆಗಳ ಬಳಿಕ ಕೊನೆಗೂ ಜುಲೈ 23 ರಂದು ರಿಲೀಸ್ ಆಗುತ್ತಿದೆ. ಸಿಎಂ ವಿಜಯ್ ಅವರ ಕೊನೆಯ ಸಿನಿಮಾ ಇದೆಂದು ಪ್ರಚಾರ ಮಾಡಲಾಗಿದ್ದ ಕಾರಣ, ಭಾರಿ ಸಂಖ್ಯೆಯ ಅಭಿಮಾನಿಗಳು ಸಿನಿಮಾ ನೋಡಲು ಮುಗಿಬೀಳುವ ಸಾಧ್ಯತೆ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಮುಂಚೆ ತಮಿಳುನಾಡಿನ ಚಿತ್ರಮಂದಿರಗಳಿಗೆ ಕೆಲವು ಶಿಸ್ತಿನ ಎಚ್ಚರಿಕೆಗಳನ್ನು ನೀಡಲಾಗಿದೆ.

ವಿಶ್ವದಾದ್ಯಂತ ಸುಮಾರು 3000 ಸ್ಕ್ರೀನ್​​ಗಳಲ್ಲಿ ‘ಜನ ನಾಯಗನ್’ ಸಿನಿಮಾವನ್ನು ಕೆವಿಎನ್ ನಿರ್ಮಾಣ ಸಂಸ್ಥೆಯು ಬಿಡುಗಡೆ ಮಾಡಲು ಮುಂದಾಗಿದೆ. ತಮಿಳುನಾಡು ಒಂದರಲ್ಲೇ 950 ಸ್ಕ್ರೀನ್​​ಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಸಹ ಈಗಾಗಲೇ ಆರಂಭ ಆಗಿದೆ. ಈ ನಡುವೆ ‘ಜನ ನಾಯಗನ್’ ಬಿಡುಗಡೆ ಮಾಡುತ್ತಿರುವ ತಮಿಳುನಾಡಿನ ಚಿತ್ರಮಂದಿರಗಳಿಗೆ ಎಚ್ಚರಿಕೆ ನೀಡಲಾಗಿದೆ.

‘ಜನ ನಾಯಗನ್’ ಸಿನಿಮಾ ಬಿಡುಗಡೆ ಮಾಡುವ ತಮಿಳುನಾಡಿನ ಯಾವುದೇ ಚಿತ್ರಮಂದಿರಗಳು ಹೆಚ್ಚುವರಿ ಟಿಕೆಟ್ ದರವನ್ನು ಪ್ರೇಕ್ಷಕರಿಂದ ಪಡೆಯುವಂತಿಲ್ಲ ಎಂದು ನಿರ್ಮಾಪಕರು ಎಚ್ಚರಿಸಿದ್ದಾರೆ. ಸರ್ಕಾರ ಯಾವ ಟಿಕೆಟ್ ದರವನ್ನು ನಿಗದಿ ಮಾಡಿದೆಯೋ ಅದೇ ದರವನ್ನು ಚಿತ್ರಮಂದಿರದವರು ಪಡೆಯಬೇಕಿದೆ. ಅಲ್ಲದೆ, ಟಿಕೆಟ್ ದರ ಹೆಚ್ಚಳಕ್ಕೆ ನಿರ್ಮಾಪಕರು ಸಹ ಅರ್ಜಿ ಹಾಕಿಲ್ಲ, ಆಂಧ್ರ ಮತ್ತು ತೆಲಂಗಾಣಗಳಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಅರ್ಜಿ ಹಾಕಿ ಅನುಮತಿ ಪಡೆಯಲಾಗುತ್ತದೆ. ಆದರೆ ವಿಜಯ್ ಮನವಿಯ ಮೇರೆಗೆ ಅಲ್ಲಿಯೂ ಸಹ ದರ ಹೆಚ್ಚಳಕ್ಕೆ ಅನುಮತಿ ಪಡೆದಿಲ್ಲವಂತೆ.

ಇದನ್ನೂ ಓದಿ:ಜುಲೈ 23ಕ್ಕೆ ಬಿಡುಗಡೆ ಆಗಲಿದೆ ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’

ಸಿನಿಮಾದ ಬಿಡುಗಡೆ ಬಗ್ಗೆ ವಿಪಕ್ಷಗಳು ಹದ್ದಿನ ಕಣ್ಣೀಟ್ಟಿದ್ದು, ಅವರ ಟೀಕೆಗೆ ಆಹಾರ ಆಗುವ ಯಾವುದೇ ಅಹಿತಕರ ನಡೆಯದಂತೆ ಮುನ್ನೆಚ್ಚರಿಕೆಯನ್ನು ವಿಜಯ್ ಪರವಾಗಿ ಕೆವಿಎನ್ ನಿರ್ಮಾಣ ಸಂಸ್ಥೆಯು ಜವಾಬ್ದಾರಿ ಹೊತ್ತುಕೊಂಡಿದೆ. ಯಾವುದೇ ಕಾರಣಕ್ಕೆ ಅಹಿತಕರ ಘಟನೆಗಳು ನಡೆಯದಂತೆ, ಹೆಚ್ಚು ಟಿಕೆಟ್ ದರ ವಸೂಲಿ ಆಗದಂತೆ, ಹಾಗೂ ‘ಎ’ ಸರ್ಟಿಫಿಕೇಟ್ ಸಿಕ್ಕಿರುವ ಕಾರಣ ಯಾವುದೇ ಕಾರಣಕ್ಕೂ 18 ವರ್ಷದೊಳಗಿನವರಿಗೆ ಟಿಕೆಟ್ ಮಾರಾಟ ಮಾಡದಂತೆ ನೋಡಿಕೊಳ್ಳಬೇಕು ಎಂದು ನಿರ್ಮಾಪಕರು ಮತ್ತು ಅವರ ತಂಡ ವಿತರಕರಿಗೆ ಮತ್ತು ಚಿತ್ರಮಂದಿರ ಮಾಲೀಕರಿಗೆ ಮೌಖಿಕ ಎಚ್ಚರಿಕೆಗಳನ್ನು ನೀಡಿದ್ದಾರೆ.

‘ಜನ ನಾಯಗನ್’ ಸಿನಿಮಾ, ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗಿತ್ತು. ಈ ಸಿನಿಮಾ ಜನವರಿ 12 ರಂದೇ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ, ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ತಡವಾಯ್ತು. ಇದೀಗ ಕಾನೂನು ಹೋರಾಟ, ಇನ್ನಿತರೆಗಳ ಬಳಿಕ ಜುಲೈ 23ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಸಿನಿಮಾವನ್ನು ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಪೂಜಾ ಹೆಗ್ಡೆ ಮತ್ತು ಮಮಿತಾ ಬಿಜು ನಾಯಕಿ. ಅನಿರುದ್ಧ್ ರವಿಚಂದ್ರನ್ ಸಂಗೀತ ಸಿನಿಮಾಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ