AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ರಿಲೀಸ್​ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ

Jana Nayagan Movie: 'ಜನ ನಾಯಗನ್' ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿಯಿಂದ ಅಡೆತಡೆ ಎದುರಾಗಿದೆ. ಜನವರಿ 9ಕ್ಕೆ ರಿಲೀಸ್ ಆಗಬೇಕಿದ್ದ ವಿಜಯ್ ಅಂತಿಮ ಸಿನಿಮಾ, ಒಂದು ತಿಂಗಳಾದರೂ ಸೆನ್ಸಾರ್ ಪತ್ರ ಪಡೆಯುವಲ್ಲಿ ವಿಫಲವಾಗಿದೆ. ಇದು ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಚಿತ್ರತಂಡ ಕೋರ್ಟ್ ಮೆಟ್ಟಿಲೇರುವ ಚಿಂತನೆಯಲ್ಲಿದೆ.

‘ಜನ ನಾಯಗನ್’ ರಿಲೀಸ್​ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on:Jan 06, 2026 | 9:55 AM

Share

ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಅದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಆಗಬಾರದು ಎಂಬ ಕಾರಣದಿಂದ ನಿರ್ಮಾಪಕರು ಈ ಬಗ್ಗೆ ಹೆಚ್ಚು ಜಾಗೃತಿವಹಿಸುತ್ತಾರೆ. ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ‘ಜನ ನಾಯಗನ್’ ಸಿನಿಮಾ (Jana Nayagan Movie) ಕೂಡ ಇದೇ ಕೆಲಸ ಮಾಡಿತ್ತು. ಆದರೆ, ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತಿಂಗಳಾದರೂ ಸೆನ್ಸಾರ್ ಪತ್ರ ಸಿಕ್ಕಿಲ್ಲ. ಸಿನಿಮಾ ರಿಲೀಸ್​​ಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಇದು ತಂಡದ ಚಿಂತೆಗೆ ಕಾರಣ ಆಗಿದೆ. ಈ ಪ್ರಕರಣ ರಾಜಕೀಯ ಬಣ್ಣವನ್ನು ಕೂಡ ಪಡೆದುಕೊಂಡಿದೆ.

‘ಜನ ನಾಯಗನ್’ ಚಿತ್ರ ಜನವರಿ 9ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಮಲಯಾಳಂ ನಟಿ ಮಮಿತಾ ಬೈಜು ಮೊದಲಾದವರು ನಟಿಸಿದ್ದಾರೆ. ಎಚ್. ವಿನೋದ್ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇದು ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್. ಈ ಚಿತ್ರದಲ್ಲಿ ರಾಜಕೀಯ ಅಂಶ ಕೂಡ ಸೇರಿಸಲಾಗಿದೆ. ಸಿನಿಮಾದ ಕೆಲವು ದೃಶ್ಯಕ್ಕೆ ಸೆನ್ಸಾರ್ ಮಂಡಳಿ ಅಪಸ್ವರ ತೆಗೆದಿದೆ ಎನ್ನಲಾಗಿದೆ.

2025ರ ಡಿಸೆಂಬರ್ 19ರಂದೇ ‘ಜನ ನಾಯಗನ್’ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಣೆ ಮಾಡಿದೆ. ಈ ವೇಳೆ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಕೆಲವು ಶಬ್ದಕ್ಕೆ ಮ್ಯೂಟ್ ಮಾಡಲು ಸೂಚನೆ ನೀಡಿತ್ತು. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ತಂಡ, ಸಿನಿಮಾನ ಮತ್ತೆ ಮಂಡಳಿಗೆ ತೋರಿಸಿದೆ. ಆದಾಗ್ಯೂ ಸೆನ್ಸಾರ್ ಮಂಡಳಿ ಸೆನ್ಸಾರ್ ಪತ್ರ ನೀಡಿಲ್ಲ.ಇದು ಚರ್ಚೆಗೆ ಕಾರಣ ಆಗಿದೆ.

ಈ ವಿಷಯ ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಟಿವಿಕೆ ಪ್ರಧಾನ ಕಾರ್ಯದರ್ಶಿಯೊಬ್ಬರು ಸೆನ್ಸಾರ್ ಮಂಡಳಿಯನ್ನು ಟೀಕಿಸಿದ್ದಾರೆ. ಇದು ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಇಂದು (ಜನವರಿ 6) ಕೂಡ ಸೆನ್ಸಾರ್ ಪತ್ರ ಸಿಗದಿದ್ದರೆ ಕೋರ್ಟ್​ಗೆ ಹೋಗುವ ಬಗ್ಗೆ ತಂಡ ಆಲೋಚಿಸಿದೆ.

ಇದನ್ನೂ ಓದಿ: ‘ಜನ ನಾಯಗನ್’ ತಂಡದಿಂದ ಇದೆಂಥಾ ತಪ್ಪು; ಟ್ರೋಲಿಗರಿಗೆ ಆಹಾರವಾದ ನಿರ್ದೇಶಕ

ಈ ಸಿನಿಮಾ ಬಳಿಕ ವಿಜಯ್ ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ವರ್ಷ ನಡೆಯುವ ತಮಿಳುನಾಡು ಚುನಾವಣೆಯಲ್ಲಿ ಅವರು ಭಾಗಿ ಆಗಲಿದ್ದಾರೆ. ಅವರ ಕೊನೆಯ ಸಿನಿಮಾ ರಿಮೇಕ್ ಎಂಬ ಬೇಸರ ಅಭಿಮಾನಿಗಳಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:54 am, Tue, 6 January 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More