AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ ‘ಜನ ನಾಯಗನ್’; ಭರ್ಜರಿ ಸೆಲೆಬ್ರೇಷನ್

ದಳಪತಿ ವಿಜಯ್ ನಟನೆಯ ಕೊನೆಯ ಹಾಗೂ ಬಹುನಿರೀಕ್ಷಿತ 'ಜನ ನಾಯಗನ್' ಸಿನಿಮಾ ಇಂದು (ಜುಲೈ 23) ಅದ್ಧೂರಿಯಾಗಿ ರಿಲೀಸ್ ಆಗಿದೆ. ಈಗ ಸಿಎಂ ಆಗಿರುವ ವಿಜಯ್ ಅವರ ಈ ರಾಜಕೀಯ ಚಿತ್ರಕ್ಕೆ ಮುಂಜಾನೆ 6 ಗಂಟೆಯಿಂದಲೇ ಪ್ರದರ್ಶನಗಳು ಆರಂಭವಾಗಿದೆ. ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ ‘ಜನ ನಾಯಗನ್’; ಭರ್ಜರಿ ಸೆಲೆಬ್ರೇಷನ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: Jul 23, 2026 | 7:36 AM

Share

ಮುಖ್ಯಾಂಶಗಳು

  • ಮುಂಜಾನೆ 6 ಗಂಟೆಯಿಂದಲೇ ದಳಪತಿ ದರ್ಬಾರ್
  • ಅಡೆತಡೆಗಳನ್ನು ದಾಟಿ 'ಎ' ಸರ್ಟಿಫಿಕೇಟ್‌ನೊಂದಿಗೆ ಎಂಟ್ರಿ
  • ಬಾಕ್ಸ್ ಆಫೀಸ್ ಧೂಳೆಬ್ಬಿಸಲು ಸಜ್ಜಾದ 'ಜನ ನಾಯಗನ್'

ದಳಪತಿ ವಿಜಯ್ (Thalapathy Vijay) ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ರಿಲೀಸ್ ಆಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಸ್ವಾಗತ ಜೋರಾಗಿದೆ. ವಿಜಯ್ ಅವರ ಕೊನೆಯ ಸಿನಿಮಾ ಇದು. ಅಲ್ಲದೆ, ಈಗ ವಿಜಯ್ ಸಿಎಂ ಆಗಿರುವುದರಿಂದ ಫ್ಯಾನ್ಸ್ ಚಿತ್ರವನ್ನು ಭರ್ಜರಿ ಸ್ವಾಗತ ಮಾಡಿದ್ದು, ಥಿಯೇಟರ್ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

ಹಲವು ಅಡೆತಡೆಗಳನ್ನು ದಾಟಿ ಬಂದ ಸಿನಿಮಾ

‘ಜನ ನಾಯಗನ್’ ಸಿನಿಮಾ ತೆರೆಗೆ ಬರಲು ಸಾಕಷ್ಟು ಸಮಯ ತಗೆದುಕೊಂಡಿದೆ. ಈ ಚಿತ್ರಕ್ಕೆ ಸಾಕಷ್ಟು ತೊಂದರೆಗಳು ಎದುರಾಗಿದ್ದವು. ಸೆನ್ಸಾರ್ ಮಂಡಳಿ ಸಮಸ್ಯೆ ಮತ್ತು ಆನ್​​ಲೈನ್ ಸೋರಿಕೆಯಂತಹ ಹಲವು ಅಡೆತಡೆಗಳಿಂದ ಸಿನಿಮಾ ತಡವಾಗಿತ್ತು. ಆದರೆ ಈಗ ಎಲ್ಲಾ ಕಷ್ಟಗಳು ಮುಗಿದಿವೆ. ಸಿನಿಮಾ ಎ ಪ್ರಮಾಣಪತ್ರ ಪಡೆದು ಅದ್ಧೂರಿಯಾಗಿ ರಿಲೀಸ್ ಆಗಿದೆ.

ಚಿತ್ರಮಂದಿರಗಳ ಬಳಿ ಹಬ್ಬದ ವಾತಾವರಣ

ಬೆಂಗಳೂರು, ಚೆನ್ನೈ, ಹೈದರಾಬಾದ್ ಮೊದಲಾದ ಕಡೆಯಲ್ಲಿ ಈಗಲೇ ಹಬ್ಬದ ಸಂಭ್ರಮ ಶುರುವಾಗಿದೆ. ವಿಜಯ್ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಪ್ರಮುಖ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳ ಮುಂದೆ ವಿಜಯ್ ಅವರ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿದೆ. ಬ್ಯಾನರ್‌ಗಳು ಮತ್ತು ತಳಿರು ತೋರಣಗಳಿಂದ ಚಿತ್ರಮಂದಿರಗಳನ್ನು ಅಲಂಕರಿಸಲಾಗಿದೆ.

ಬಾಕ್ಸ್ ಆಫೀಸ್ ದಾಖಲೆ ಬರೆಯುತ್ತಾ ‘ಜನ ನಾಯಗನ್’?

ಸಿನಿಮಾದ ಅಡ್ವಾನ್ಸ್ ಬುಕಿಂಗ್ ತುಂಬಾ ಚೆನ್ನಾಗಿ ನಡೆದಿದೆ. ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಭರ್ಜರಿ ಓಪನಿಂಗ್ ಪಡೆಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕರೆ ಮೊದಲ ದಿನವೇ ದಾಖಲೆ ಕಲೆಕ್ಷನ್ ಮಾಡುವುದು ಗ್ಯಾರಂಟಿ. ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಧೂಳೆಬ್ಬಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಜನ ನಾಯಗನ್’ ಪ್ರಚಾರ ಮಾಡದ ಸಿಎಂ ವಿಜಯ್; ಆದರೂ ಹೇಗಿದೆ ಅಭಿಮಾನಿಗಳ ಕ್ರೇಜ್?

ಎಚ್. ವಿನೋದ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಮಿತಾ ಬೈಜು ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಪ್ರಶ್ನೆ: ಜನ ನಾಯಗನ್ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ?  ಉತ್ತರ: ಜುಲೈ 23

ಪ್ರಶ್ನೆ: ಇದು ವಿಜಯ್ ಕೊನೆ ಚಿತ್ರವೇ? ಉತ್ತರ: ಹೌದು

ಪ್ರಶ್ನೆ: ಚಿತ್ರಕ್ಕೆ ಯಾವ ಪ್ರಮಾಣ ಪತ್ರ ನೀಡಲಾಗಿದೆ? ಉತ್ತರ: ಎ ಪ್ರಮಾಣಪತ್ರ

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ