AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ?

Jana Nayagan vs CBFC: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿರುವುದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ ಎನ್ನಲಾಗುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ವಿಷಯದಲ್ಲಿ ವಿಜಯ್​​ಗೆ ಬೆಂಬಲ ಘೋಷಣೆ ಮಾಡಿದೆ.

‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ?
Jana Nayagan
ಮಂಜುನಾಥ ಸಿ.
|

Updated on:Jan 08, 2026 | 7:21 PM

Share

ರಾಜಕೀಯಕ್ಕೆ ಪ್ರವೇಶಿಸಿರುವ ದಳಪತಿ ವಿಜಯ್ (Thalapathy Vijay), ಸಿನಿಮಾಗಳಿಂದ ದೂರಾಗುವುದಾಗಿ ಹೇಳಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದಿದ್ದರು. ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿರುವುದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ ಎನ್ನಲಾಗುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ವಿಷಯದಲ್ಲಿ ವಿಜಯ್​​ಗೆ ಬೆಂಬಲ ಘೋಷಣೆ ಮಾಡಿದೆ.

‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣ ಪತ್ರ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಕಾಂಗ್ರೆಸ್ ಮುಖಂಡ ಪ್ರವೀಣ್ ಚಕ್ರವರ್ತಿ, ಸಂಸದೆ ಎಸ್ ಜೋತಿಮಣಿ ಅವರುಗಳು ‘ವಿಜಯ್ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ವಿಳಂಬ ಮಾಡುತ್ತಿರುವುದು ಕೆಟ್ಟ ರಾಜಕೀಯ ನಡೆ’ ಎಂದು ಟೀಕಿಸಿದ್ದಾರೆ.

ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಪ್ರವೀಣ್ ಚಕ್ರವರ್ತಿ, ರಾಹುಲ್ ಗಾಂಧಿ ಒಂಬತ್ತು ವರ್ಷಗಳ ಹಿಂದೆ ತಮಿಳು ಸಿನಿಮಾ ಬಗ್ಗೆ ಮೋದಿ ಅವರಿಗೆ ಮಾಡಿದ್ದ ಟ್ವೀಟ್​ ಅನ್ನು ನೆನಪಿಸಿದ್ದು, ‘ಆಗಲೇ ರಾಹುಲ್ ಗಾಂಧಿ ಅವರು ಮೋದಿ ಅವರಿಗೆ ಹೇಳಿದ್ದರು, ತಮಿಳುನಾಡು ಸಂಸ್ಕೃತಿ ಮತ್ತು ತಮಿಳು ಸಿನಿಮಾಗಳನ್ನು ತುಳಿಯುವ ಪ್ರಯತ್ನ ಮಾಡಬೇಡಿ ಎಂದು. ಆದರೆ ‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣಪತ್ರ ನಿರಾಕರಿಸುವ ಮೂಲಕ ಮತ್ತೊಮ್ಮೆ ಮೋದಿ, ತಮಿಳು ಜನರನ್ನು ಅವಮಾನಿಸಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ:‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ

ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಸಹ ಇದೇ ವಿಷಯವಾಗಿ ಟ್ವೀಟ್ ಮಾಡಿದ್ದು, ‘ಇದು ತಮಿಳು ಚಿತ್ರರಂಗದ ಮೇಲೆ ಮಾಡುತ್ತಿರುವ ದಾಳಿ. ಯಾರ್ಯಾರು ವಾಕ್ ಸ್ವಾತಂತ್ರ್ಯದ ಮೇಲೆ ನಂಬಿಕೆ ಇರಿಸಿದ್ದಾರೆಯೋ ಅವರೆಲ್ಲರೂ ಸಿಬಿಎಫ್​​ಸಿಯ ಈ ನಡೆಯನ್ನು ಖಂಡಿಸಬೇಕು. ನೂರಾರು ಜನರ ಶ್ರಮದಿಂದ, ಕೋಟ್ಯಂತರ ರೂಪಾಯಿಗಳ ಹಣ ಖರ್ಚು ಮಾಡಿ ಸಿನಿಮಾ ಮಾಡಲಅಗಿರುತ್ತದೆ. ಆದರೆ ಹೀಗೆ ಸಿನಿಮಾಕ್ಕೆ ಸಮಸ್ಯೆ ನೀಡುವುದು ಕ್ರಿಯಾತ್ಮಕ ಸ್ವಾತಂತ್ರ್ಯದ ಹರಣ ಮಾಡಿದಂತೆ. ಅದರಲ್ಲೂ ರಾಜಕೀಯ ಕಾರಣಕ್ಕೆ ಸಿನಿಮಾಕ್ಕೆ ಕಿರುಕುಳ ನೀಡುವುದು ಮತ್ತೂ ಅಪಾಯಕಾರಿ’ ಎಂದಿದ್ದಾರೆ.

ಅಂದಹಾಗೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷಗಳಾಗಿವೆ. ಆದರೆ ವಿಜಯ್, ರಾಜಕೀಯ ಪ್ರವೇಶಿಸಿದಾಗಿನಿಂದಲೂ ಆಡಳಿತಾರೂಢ ಡಿಎಂಕೆ ಪಕ್ಷದ ವಿರುದ್ಧವೇ ಹೋರಾಡುತ್ತಿದ್ದಾರೆ. ಇದೀಗ ಡಿಎಂಕೆಯ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್, ಡಿಎಂಕೆಯ ವಿರೋಧಿ ನಾಯಕ ಎನಿಸಿಕೊಂಡಿರುವ ವಿಜಯ್​​ಗೆ ಬೆಂಬಲ ಸೂಚಿಸಿರುವುದು ರಾಜಕೀಯ ವಿಶ್ಲೇಷಕರ ಕುತೂಹಲಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Thu, 8 January 26

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ