AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಟಿ ಜಾಹ್ನವಿ ಕೇಳಿದ ಪ್ರಶ್ನೆಗೆ ನಿಮ್ಮಿಂದ ಉತ್ತರ ಕೊಡೋಕೆ ಸಾಧ್ಯವೇ?

ಕೊವಿಡ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸರ್ಕಾರ ಹೇರಿರುವ ಕಠಿಣ ಲಾಕ್​ಡೌನ್​ನಿಂದಾಗಿ ಚಿತ್ರರಂಗದ ಕೆಲಸ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ, ಜಾಹ್ನವಿ ಕಪೂರ್​ ಮನೆಯಲ್ಲೇ ಇದ್ದಾರೆ.

ಬಾಲಿವುಡ್​ ನಟಿ ಜಾಹ್ನವಿ ಕೇಳಿದ ಪ್ರಶ್ನೆಗೆ ನಿಮ್ಮಿಂದ ಉತ್ತರ ಕೊಡೋಕೆ ಸಾಧ್ಯವೇ?
ಜಾನ್ಹವಿ
ರಾಜೇಶ್ ದುಗ್ಗುಮನೆ
|

Updated on:May 30, 2021 | 9:05 PM

Share

ಕೊವಿಡ್​ ಲಾಕ್​ಡೌನ್​ನಿಂದಾಗಿ ಎಲ್ಲಾ ಸ್ಟಾರ್ಸ್​ ಮನೆಯಲ್ಲೇ ಇದ್ದಾರೆ. ಹೀಗಾಗಿ ಟೈಮ್​ಪಾಸ್​ಗೆ ಸೆಲೆಬ್ರಿಟಿಗಳು ತಮ್ಮಿಷ್ಟದ ಕೆಲಸ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಇನ್ನು, ‘ಆಸ್ಕ್​ ಮಿ ಎನಿಥಿಂಗ್​’ ಚಾಲೆಂಜ್​ಗಳನ್ನೂ ಸೆಲೆಬ್ರಿಟಿಗಳು ಮಾಡುತ್ತಿದ್ದಾರೆ. ಈಗ ನಟಿ ಜಾಹ್ನವಿ ಕಪೂರ್ ಭಿನ್ನ ಪೋಸ್ಟ್​ ಒಂದನ್ನು ಮಾಡಿದ್ದಾರೆ. ಅಷ್ಟೇ ಅಲ್ಲ, ಅವರು ಅಭಿಮಾನಿಗಳಿಗೆ ಪ್ರಶ್ನೆಯನ್ನೂ ಕೇಳಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸರ್ಕಾರ ಹೇರಿರುವ ಕಠಿಣ ಲಾಕ್​ಡೌನ್​ನಿಂದಾಗಿ ಚಿತ್ರರಂಗದ ಕೆಲಸ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ, ಜಾಹ್ನವಿಕಪೂರ್​ ಮನೆಯಲ್ಲೇ ಇದ್ದಾರೆ. ಟೈಮ್​ಪಾಸ್​ಗೆ ಡಾನ್ಸ್​ ಮಾಡುತ್ತಿದ್ದ ಅವರು, ಈಗ ತಮ್ಮ ಕಲೆಯನ್ನು ಹೊರ ಹಾಕಿದ್ದಾರೆ.

ಅದ್ಭುತವಾಗಿ ಚಿತ್ರಗಳನ್ನು ಪೇಂಟ್​ ಮಾಡಿರುವ ಜಾಹ್ನವಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವತಿಯೊಬ್ಬಳು ನದಿಯಲ್ಲಿ ಈಜುತ್ತಿರುವುದು, ಸಮುದ್ರದ ತೀರ ಮತ್ತಿತ್ಯಾದಿಗಳನ್ನು ಜಾಹ್ನವಿ ತಮ್ಮ ಕುಂಚದಿಂದ ಅರಳಿಸಿದ್ದಾರೆ. ಅಲ್ಲದೆ, ‘ನನ್ನನ್ನು ನಾನು ಈಗ ಪೇಂಟರ್​ ಎಂದು ಕರೆದುಕೊಳ್ಳಬಹುದೇ?’ ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಅನೇಕರು ಕಮೆಂಟ್​ ಮಾಡಿದ್ದಾರೆ. ನೀವು ಬಿಡಿಸಿದ ಚಿತ್ರಗಳು ಅದ್ಭುತವಾಗಿದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು, ನನಗೂ ಒಂದು ಪೇಂಟಿಂಗ್​ ಬಿಡಿಸಿಕೊಡಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಹಲವರು, ನಿಮ್ಮನ್ನು ನೀವು ಪೇಂಟರ್​ ಎಂದು ಕರೆದುಕೊಳ್ಳಬಹುದು ಎಂದು ಮನಸ್ಫೂರ್ತಿಯಾಗಿ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸ್ಟಾರ್​ ನಟಿಯ ಮಗಳಾದರೂ ಜಾಹ್ನವಿ ಕಪೂರ್​​ಗೆ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು.  ಸದ್ಯ ‘ದೋಸ್ತಾನಾ 2’ ಹಾಗೂ ‘ಗುಡ್​​ ಲಕ್​ ಜೆರ್ರಿ’ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಜಾಹ್ನವಿ ಕಪೂರ್ ಬೆಲ್ಲಿ ಡ್ಯಾನ್ಸ್​ಗೆ ಅಭಿಮಾನಿಗಳು ಫಿದಾ!

Published On - 8:44 pm, Sun, 30 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!