AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್

ಕೊರೊನಾ ವೈರಸ್ ಎರಡನೆ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಅನೇಕ ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇದರಿಂದ ಕೆಲವರು ಮನೆಯಲ್ಲೇ ಕೂತಿದ್ದಾರೆ. ಇದಕ್ಕೆ ಜಾನ್ವಿ ಕಪೂರ್​ ಕೂಡ ಹೊರತಾಗಿಲ್ಲ.

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್
ಜಾಹ್ನವಿ ಕಪೂರ್
ರಾಜೇಶ್ ದುಗ್ಗುಮನೆ
|

Updated on: Apr 19, 2021 | 7:29 PM

Share

ಜಾನ್ವಿ ಕಪೂರ್​ ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್​ ಮಗಳು. ಸ್ಟಾರ್​ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಆಫರ್​ಗಳು ಹರಿದು ಬಂದಿವೆ. ಆದರೆ ಅವರಿಗೆ ಯಶಸ್ಸು ಕೈಹಿಡಿದಿಲ್ಲ. ಈಗ ಜಾನ್ವಿಗೆ ಬೇಸರವೊಂದು ಕಾಡಿದೆ. ಇದನ್ನು ಅವರು ತಮ್ಮ ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೊರೊನಾ ವೈರಸ್ ಎರಡನೆ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಅನೇಕ ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇದರಿಂದ ಕೆಲವರು ಮನೆಯಲ್ಲೇ ಕೂತಿದ್ದಾರೆ. ಇದಕ್ಕೆ ಜಾನ್ವಿ ಕಪೂರ್​ ಕೂಡ ಹೊರತಾಗಿಲ್ಲ. ಅವರು ಸದ್ಯ ಗೆಳತಿಯರ ಜತೆ ಸಮಯ ಕಳೆಯುತ್ತಿದ್ದಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಅಪ್​ಲೋಡ್​ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಜಾನ್ವಿ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ. ಅವರ ಗೆಳತಿ ಕೂಡ ಇವರಿಗೆ ಸಾತ್ ನೀಡಿದ್ದಾರೆ. ಅವರ ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ವಿಡಿಯೋಗೆ ಅವರು ನೀಡಿದ ಕ್ಯಾಪ್ಶನ್​ ಸಾಕಷ್ಟು ಗಮನಸೆಳೆಯುತ್ತಿದೆ. ಫಿಲ್ಮ್​​ಫೇರ್​​ ಸ್ಟೇಜ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಹೀಗಾಗಿ, ಕೊಳದ ಪಕ್ಕದಲ್ಲಿ ಡ್ಯಾನ್ಸ್​ ಮಾಡಬೇಕಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

2.74 ಲಕ್ಷ ಬೆಲೆಯ ಉಡುಪು ಧರಿಸಿದ ನಟಿ ಜಾಹ್ನವಿ ಕಪೂರ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್