AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಸಿನಿಮಾದಲ್ಲಿ ಜಪಾನಿನ ಸೂಪರ್ ಸ್ಟಾರ್ ನಟ

Pawan Kalyan: ಆಂಧ್ರ ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಅರ್ಧಕ್ಕೆ ನಿಂತಿದ್ದ ತಮ್ಮ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಲು ಮುಂದಾಗಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣ ಪೂರ್ಣ ಮಾಡಿದ್ದಾರೆ. ಇದೀಗ ‘ಓಜಿ’ ಸಿನಿಮಾ ಸಹ ಪೂರ್ಣಗೊಳಿಸಲು ಮುಂದಾಗಿದ್ದಾರೆ. ಈ ಸಿನಿಮಾನಲ್ಲಿ ಜಪಾನಿನ ಸ್ಟಾರ್ ನಟರೊಬ್ಬರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ಪವನ್ ಕಲ್ಯಾಣ್ ಸಿನಿಮಾದಲ್ಲಿ ಜಪಾನಿನ ಸೂಪರ್ ಸ್ಟಾರ್ ನಟ
Pawan Kalyan
ಮಂಜುನಾಥ ಸಿ.
|

Updated on: May 13, 2025 | 4:52 PM

Share

ಪವನ್ ಕಲ್ಯಾಣ್ (Pawan Kalyan) ನಟನೆಯ ಮೂರು ಸಿನಿಮಾಗಳು ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿವೆ. ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಪವನ್ ಕಲ್ಯಾಣ್ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳನ್ನು ಪ್ರಾರಂಭ ಮಾಡಿದ್ದರು. ಅದರಲ್ಲಿ ಬಹಳ ಒತ್ತಡದ ಬಳಿಕ ಇತ್ತೀಚೆಗಷ್ಟೆ ‘ಹರಿ ಹರ ವೀರ ಮಲ್ಲು’ ಸಿನಿಮಾದ ಚಿತ್ರೀಕರಣವನ್ನು ಹಾಗೋ ಹೀಗೋ ಮಾಡಿ ಮುಗಿಸಿಕೊಟ್ಟಿದ್ದಾರೆ. ‘ಓಜಿ’ ಸಿನಿಮಾವನ್ನು ಸಹ ಮುಗಿಸಿಕೊಡುವುದಾಗಿ ಪವನ್ ಕಲ್ಯಾಣ್ ಹೇಳಿದ್ದಾರೆ. ‘ಓಜಿ’ ಸಿನಿಮಾದ ಚಿತ್ರೀಕರಣಕ್ಕೆ ಯೋಜನೆ ಸಿದ್ಧವಾಗಿದೆಯಂತೆ. ಇದರ ನಡುವೆ ಬಂದಿರುವ ಹೊಸ ಸುದ್ದಿಯ ಪ್ರಕಾರ, ಜಪಾನಿನ ಸೂಪರ್ ಸ್ಟಾರ್ ನಟರೊಬ್ಬರು ‘ಓಜಿ’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಜಪಾನ್ ಮನೊರಂಜನಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಕಜುಕಿ ಕಿಟಾಮುರಾ, ‘ಓಜಿ’ ಸಿನಿಮಾನಲ್ಲಿ ನಟಿಸಲಿದ್ದಾರೆ. ಕಜುಕಿ ಕಿಟಾಮುರಾ ಜಪಾನ್ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಹಾಲಿವುಡ್​ನ ಕೆಲ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಜನಪ್ರಿಯ ‘ಕಿಲ್ ಬಿಲ್’ ಸಿನಿಮಾದ ಎರಡು ಭಾಗಗಳಲ್ಲಿಯೂ ಕಜುಕಿ ಕಿಟಾಮುರಾ ನಟಿಸಿದ್ದಾರೆ. ಅದಲ್ಲದೆ ‘ಗಾಡ್ಜಿಲಾ: ಫೈನಲ್ ವಾರ್ಸ್’ ಸಿನಿಮಾನಲ್ಲಿಯೂ ಕಜುಕಿ ನಟಿಸಿದ್ದಾರೆ. ಇದರ ಜೊತೆಗೆ ಜಪಾನಿ ಸೂಪರ್ ಹಿಟ್ ಸಿನಿಮಾಗಳಾದ ‘ಯಕೂಜಾ’, ‘ಅಜುಮಿ’, ‘ರುರೊನಿ ಕೆನ್​ಶಿನ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಲಿವುಡ್ ಸಿನಿಮಾಗಳಾದ ‘ದಿ ರೈಡ್ 2’, ‘ಬ್ಲೇಡ್ ಆಫ್ ಇಮ್ಮಾರ್ಟಲ್’ ಇನ್ನಿತರೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಜುಕಿ ಕಿಟಾಮುರಾ ಅದ್ಭುತ ನಟ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾ ಸೆಟ್​ನಲ್ಲಿ ತ್ರಿವಿಕ್ರಮ್, ಅಭಿಮಾನಿಗಳಿಗೆ ಆತಂಕ

ಕಜುಕಿ ಕಿಟಾಮುರಾ ಮಾತ್ರವೇ ಅಲ್ಲದೆ ಥಾಯ್ ಜನಪ್ರಿಯ ನಟರೊಬ್ಬರು ಸಹ ‘ಓಜಿ’ ಸಿನಿಮಾನಲ್ಲಿ ನಟಿಸಲಿದ್ದಾರೆ. ವಿಥಾಯಾ ಪನ್​ಸ್ರಿಗನ್ ಅವರು ಸಹ ‘ಓಜಿ’ ಸಿನಿಮಾನಲ್ಲಿ ನಟಿಸಲಿದ್ದಾರೆ. ‘ಓನ್ಲಿ ಗಾಡ್ ಫರ್ಗೀವ್ಸ್’, ‘ಹ್ಯಾಂಗೋವರ್ 2’, ‘ಪ್ಯಾರಡಾಕ್ಸ್’ ಇನ್ನೂ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾನಲ್ಲಿ ಜಪಾನಿನ ಮಾಫಿಯಾ ಡಾನ್ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ಈ ನಟ ‘ಓಜಿ’ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ.

‘ಓಜಿ’ ಸಿನಿಮಾ ಅಂಡರ್ವಲ್ಡ್ ಕತೆಯನ್ನು ಒಳಗೊಂಡಿದ್ದು, ಸಿನಿಮಾ ಅನ್ನು ಸುಜಿತ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ತಮಗೆ ಸಾಕಷ್ಟು ನಿರೀಕ್ಷೆಗಳು ಇವೆ ಎಂದು ಸ್ವತಃ ಪವನ್ ಕಲ್ಯಾಣ್, ಚುನಾವಣೆ ಸಮಯದಲ್ಲಿ ಹೇಳಿಕೊಂಡಿದ್ದರು. ಸಿನಿಮಾದ ಮತ್ತೊಂದು ವಿಶೇಷವೆಂದರೆ ಪವನ್ ಕಲ್ಯಾಣ್ ಹಿರಿಯ ಪುತ್ರ ‘ಓಜಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಕೊಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ