AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್ ಬಗ್ಗೆ ಮೊದಲ ಬಾರಿ ಮಾತನಾಡಿದ ಪುತ್ರ ಸಂಜಯ್

Thalapathy Vijay son Sanjay: ವಿಜಯ್ ಅವರು ಸಿಎಂ ಆಗುವ ಮುಂಚೆಯೇ ಪತ್ನಿ ಸಂಗೀತಾ ಅವರೊಟ್ಟಿಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಆ ಸಮಯದಲ್ಲಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಜೊತೆಗಿದ್ದ ‘ವಿಜಯ್’ ಹೆಸರನ್ನು ತೆಗೆದು ಹಾಕಿದ್ದರು. ಆ ಮೂಲಕ ಪರೋಕ್ಷ ಸಿಟ್ಟನ್ನು ತಂದೆಯ ವಿರದ್ಧ ಹೊರ ಹಾಕಿದ್ದರು. ಆದರೆ ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ಜೇಸನ್, ಮೊದಲ ಬಾರಿಗೆ ತಂದೆಯ ಬಗ್ಗೆ ಮಾತನಾಡಿದ್ದಾರೆ.

ಸಿಎಂ ವಿಜಯ್ ಬಗ್ಗೆ ಮೊದಲ ಬಾರಿ ಮಾತನಾಡಿದ ಪುತ್ರ ಸಂಜಯ್
Jason Vijay
ಮಂಜುನಾಥ ಸಿ.
|

Updated on: Jul 17, 2026 | 9:50 AM

Share

ವಿಜಯ್  (Vijay) ಸಿಎಂ ಆಗಿದ್ದಾರೆ. ವಿಜಯ್, ಸಿನಿಮಾ ಮತ್ತು ರಾಜಕೀಯ ಕ್ಷೇತ್ರ ಎರಡರಲ್ಲೂ ದೊಡ್ಡ ಯಶಸ್ಸು ಗಳಿಸಿದಂತಾಗಿದೆ. ಆದರೆ ಅವರ ಖಾಸಗಿ ಬದುಕು ಇನ್ನೂ ಚರ್ಚೆಯ ವಿಷಯವಾಗಿಯೇ ಉಳಿದಿದೆ. ವಿಜಯ್ ಅವರು ಸಿಎಂ ಆಗುವ ಮುಂಚೆಯೇ ಪತ್ನಿ ಸಂಗೀತಾ ಅವರೊಟ್ಟಿಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಆ ಸಮಯದಲ್ಲಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಜೊತೆಗಿದ್ದ ‘ವಿಜಯ್’ ಹೆಸರನ್ನು ತೆಗೆದು ಹಾಕಿದ್ದರು. ಆ ಮೂಲಕ ಪರೋಕ್ಷ ಸಿಟ್ಟನ್ನು ತಂದೆಯ ವಿರದ್ಧ ಹೊರ ಹಾಕಿದ್ದರು. ಆದರೆ ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ಜೇಸನ್, ಮೊದಲ ಬಾರಿಗೆ ತಂದೆಯ ಬಗ್ಗೆ ಮಾತನಾಡಿದ್ದಾರೆ.

ವಿಕಟನ್​ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಜೇಸನ್, ‘ನಾನು ತಂದೆ, ತಾಯಿ ಸಂಗೀತ ಮತ್ತು ಸಹೋದರಿಯೊಡನೆ ನನ್ನ ಆಯ್ಕೆ (ಸಿನಿಮಾ ನಿರ್ದೇಶನ) ಬಗ್ಗೆ ಚರ್ಚಿಸಿಯೇ ನಿರ್ದೇಶನಕ್ಕೆ ಮುಂದಾದೆ. ಎಲ್ಲರೂ ಸಹ ನನಗೆ ಬೆಂಬಲ ನೀಡಿದರು, ಹಾರೈಸಿದರು. ಒಂದು ಕುಟುಂಬವಾಗಿ ಅವರು ಬಹಳ ಪ್ರೀತಿ, ನಂಬಿಕೆಯನ್ನು ವ್ಯಕ್ತಪಡಿಸಿದರು. ನನ್ನ ಕುಟುಂಬದವರು ನನ್ನ ಮೇಲೆ ಎಷ್ಟು ನಂಬಿಕೆ ಇಟ್ಟಿದ್ದಾರೆ ಎಂಬುದು ನನಗೆ ಇದರಿಂದ ಗೊತ್ತಾಯ್ತು’ ಎಂದಿದ್ದಾರೆ. ಜೇಸನ್ ಮೊದಲ ಸಿನಿಮಾ ನಿರ್ದೇಶನ ಆರಂಭಿಸಿದಾಗ ವಿಜಯ್ ಸೇತುಪತಿ ಸೇರಿ ಹಲವರಿಗೆ ಅವರಿಗೆ ಶುಭ ಹಾರೈಕೆಗಳು, ಆಶೀರ್ವಾದ ದೊರಕಿತಂತೆ. ಸಂದರ್ಶನದಲ್ಲಿ, ಸಂಜಯ್, ತಮಗೆ ವಿಜಯ್ ಅವರಿಂದ ಯಾವುದೇ ಸಹಾಯ ದೊರೆತಿಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ:ಜುಲೈ 23ಕ್ಕೆ ಬಿಡುಗಡೆ ಆಗಲಿದೆ ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’

ಜೇಸನ್ ಸಂಜಯ್ ಅವರು ತಮ್ಮ ಸಿನಿಮಾ ಜರ್ನಿಯ ಬಗ್ಗೆಯೂ ಮಾತನಾಡಿದ್ದು, ‘ನಾನು ಕೆನಡಾನಲ್ಲಿ ಸಿನಿಮಾ ಕಲಿಯುತ್ತಿದ್ದಾಗ 120 ಪುಟಗಳ ಚಿತ್ರಕತೆಯನ್ನು ಬರೆದಿದ್ದೆ. ಆದರೆ ಅದನ್ನು ಸಿನಿಮಾ ಮಾಡುತ್ತೇನೆಯೋ ಇಲ್ಲವೋ ಗೊತ್ತಿರಲಿಲ್ಲ. ಹಾಗಾಗಿ ಆದ ಅದನ್ನು 20 ನಿಮಿಷಗಳ ಶಾರ್ಟ್ ಫಿಲಂ ಮಾಡಿದೆ. ಭಾರತಕ್ಕೆ ಬಂದ ಬಳಿಕ ಮೂರು ಕತೆಗಳ ಮೇಲೆ ಕೆಲಸ ಮಾಡುತ್ತಿದ್ದೆ. ಅದರಲ್ಲಿ ಒಂದು ಐಡಿಯಾ ನನಗೆ ಹಿಡಿಸಿತು, ಕೆಲವರೊಟ್ಟಿಗೆ ಚರ್ಚೆ ಮಾಡಿದೆ. ಎಲ್ಲರಿಗೂ ಅದು ಇಷ್ಟವಾಯ್ತು. ಸೋ ಅದೇ ಐಡಿಯಾ ಮೇಲೆ ಕೆಲಸ ಮಾಡಿ, ಸಿನಿಮಾ ಮಾಡುವ ಮನಸ್ಸು ಮಾಡಿದೆ’ ಎಂದಿದ್ದಾರೆ.

‘ನನ್ನ ಅಂಕಲ್ ಸಂಜೀವ್ ಅವರ ನೆರವಿನಿಂದ ನಾನು ಕೆಲ ನಿರ್ಮಾಪಕರನ್ನು ಭೇಟಿಯಾಗಿ ಸಿನಿಮಾ ಕತೆ ಹೇಳಿದೆ. ತಮಿಳು ಕುಮಾರನ್ ಅವರಿಗೆ ಕತೆ ಇಷ್ಟವಾಯ್ತು, ಸುಭಾಸ್ಕರನ್ ಅವರಿಗೂ ಕತೆ ಇಷ್ಟವಾಯ್ತು. ಹಾಗಾಗಿ ನಾವು ‘ಸಿಗ್ಮಾ’ ಸಿನಿಮಾ ಮಾಡುವ ಮನಸ್ಸು ಮಾಡಿದೆವು. ಸಿನಿಮಾ ನಾವಂದುಕೊಂಡಂತೆ ಚೆನ್ನಾಗಿ ಮೂಡಿ ಬಂದಿದೆ’ ಎಂದಿದ್ದಾರೆ. ಸಂದೀಪ್ ಕೃಷ್ಣ ನಾಯಕನಾಗಿ ನಟಿಸಿರುವ ‘ಸಿಗ್ಮಾ’ ಸಿನಿಮಾ ಇದೇ ತಿಂಗಳು ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಖುದ್ದು ಜೇಸನ್ ಸಂಜಯ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಮೊದಲ ಶುಕ್ರವಾರ ಶ್ರೀ ಚಾಮುಂಡೇಶ್ವರಿ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಮೊದಲ ಶುಕ್ರವಾರ ಶ್ರೀ ಚಾಮುಂಡೇಶ್ವರಿ ಅಲಂಕಾರ ಹೇಗಿದೆ ನೋಡಿ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!