AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ನಯನತಾರಾ ಈಗ ನಿರ್ದೇಶಕಿ? ಅಭಿನಯಕ್ಕೆ ವಿದಾಯ ಹೇಳುವ ಸೂಚನೆ ಕೊಟ್ರಾ ಲೇಡಿ ಸೂಪರ್​ ಸ್ಟಾರ್​?

ಈ ಫೋಟೋ ನೋಡಿದ ನೆಟ್ಟಿಗರಿಗೆ ಅನುಮಾನ ಮೂಡಿದೆ. ಮಕ್ಕಳು ಮತ್ತು ಸಂಸಾರದ ಕಡೆಗೆ ಗಮನ ಹರಿಸುತ್ತಿರುವ ನಯನತಾರಾ ಅವರು ಇನ್ಮುಂದೆ ನಟನೆಗೆ ಹೆಚ್ಚು ಸಮಯ ನೀಡುವುದಿಲ್ಲ. ಅದರ ಬದಲು ನಿರ್ದೇಶನ ಮಾಡುತ್ತಾರೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಈ ಬಗ್ಗೆ ನಯನತಾರಾ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ನಟಿ ನಯನತಾರಾ ಈಗ ನಿರ್ದೇಶಕಿ? ಅಭಿನಯಕ್ಕೆ ವಿದಾಯ ಹೇಳುವ ಸೂಚನೆ ಕೊಟ್ರಾ ಲೇಡಿ ಸೂಪರ್​ ಸ್ಟಾರ್​?
ನಯನತಾರಾ
ಮದನ್​ ಕುಮಾರ್​
|

Updated on: Nov 27, 2023 | 3:40 PM

Share

ಹಲವು ವರ್ಷಗಳಿಂದ ನಟಿ ನಯನತಾರಾ (Nayanthara) ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ವಿವಿಧ ಪಾತ್ರಗಳಲ್ಲಿ ನೋಡುವ ಮೂಲಕ ಅಭಿಮಾನಿಗಳು ಎಂಜಾಯ್​ ಮಾಡಿದ್ದಾರೆ. ಈ ವರ್ಷ ‘ಜವಾನ್​’ (Jawan) ಸಿನಿಮಾದ ಮೂಲಕ ನಯನತಾರಾ ಅವರು ಬಾಲಿವುಡ್​ಗೆ ಕಾಲಿಟ್ಟರು. ಅಲ್ಲಿಯೂ ಅವರಿಗೆ ಬ್ಲಾಕ್​ ಬಸ್ಟರ್​ ಹಿಟ್​ ಸಿಕ್ಕಿತು. ನಟಿಯಾಗಿ ಇಷ್ಟೆಲ್ಲ ಸಕ್ಸಸ್​ ಕಂಡಿರುವ ನಯನತಾರಾ ಅವರಿಗೆ ನಟನೆ ಬಗ್ಗೆ ಬೇಸರ ಮೂಡಿದೆಯಾ? ಅಭಿನಯಕ್ಕೆ ವಿದಾಯ ಹೇಳಿ ಅವರು ನಿರ್ದೇಶನ (Direction) ಮಾಡುವ ತಯಾರಿಯಲ್ಲಿದ್ದಾರಾ? ಈ ಎಲ್ಲ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಒಂದು ಹೊಸ ಫೋಟೋ!

ಸೋಶಿಯಲ್ ಮೀಡಿಯಾದಲ್ಲಿ ನಯನತಾರಾ ಅವರು ಅಷ್ಟೇನೂ ಆ್ಯಕ್ಟೀವ್​ ಆಗಿಲ್ಲ. ಕೆಲವೇ ತಿಂಗಳ ಹಿಂದೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಖಾತೆ ತೆರೆದರು. ಅವರು ಈಗ ಒಂದು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಕ್ಯಾಮೆರಾ ಹಿಂದೆ ನಿಂತು ನಿರ್ದೇಶನ ಮಾಡುತ್ತಿರುವ ದೃಶ್ಯ ಇದೆ. ಈ ಫೋಟೋದ ಜೊತೆ ಅವರು ಹಂಚಿಕೊಂಡಿರುವ ಕ್ಯಾಪ್ಷನ್​ ಕೂಡ ಗಮನ ಸೆಳೆಯುತ್ತಿದೆ. ‘ಹೊಸ ಆರಂಭದ ಮ್ಯಾಜಿಕ್​ ಬಗ್ಗೆ ನಂಬಿಕೆ ಇರಲಿ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಈ ಫೋಟೋ ನೋಡಿದ ನೆಟ್ಟಿಗರಿಗೆ ಅನುಮಾನ ಮೂಡಿದೆ. ಮಕ್ಕಳು ಮತ್ತು ಸಂಸಾರದ ಕಡೆಗೆ ಗಮನ ಹರಿಸುತ್ತಿರುವ ನಯನತಾರಾ ಅವರು ಇನ್ಮುಂದೆ ನಟನೆಗೆ ಹೆಚ್ಚು ಸಮಯ ನೀಡುವುದಿಲ್ಲ. ಅದರ ಬದಲಿ ನಿರ್ದೇಶನ ಮಾಡುತ್ತಾರೆ. ಆ ಕಾರಣದಿಂದಲೇ ಅವರು ಈ ರೀತಿ ಕ್ಯಾಪ್ಷನ್​ ನೀಡಿದ್ದಾರೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಈ ಬಗ್ಗೆ ನಯನತಾರಾ ಅವರ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ. ಈ ಫೋಟೋಗೆ ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: Nayanthara: ‘ಅನ್ನಪೂರ್ಣಿ’ ಟೀಸರ್​ ಬಿಡುಗಡೆ; ಇದು ನಯನತಾರಾ ನಟನೆಯ 75ನೇ ಸಿನಿಮಾ

ನಟಿಯಾಗಿ ನಯನತಾರಾ ಅವರಿಗೆ ಸಖತ್​ ಬೇಡಿಕೆ ಇದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ಲೇಡಿ ಸೂಪರ್​ ಸ್ಟಾರ್​’ ಎಂದು ಕರೆಯುತ್ತಾರೆ. ಅನೇಕ ಸ್ಟಾರ್​ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಇಷ್ಟ ವರ್ಷಗಳ ಕಾಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿದ್ದ ಅವರು ಈಗ ಬಾಲಿವುಡ್​ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ನಟಿಯಾಗಿ ಇಷ್ಟೆಲ್ಲ ಡಿಮ್ಯಾಂಡ್ ಇರುವಾಗ ಅವರು ಅಭಿನಯಕ್ಕೆ ಗುಡ್​ಬೈ ಹೇಳಲು ಸಾಧ್ಯವೇ ಇಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​