AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ನಯನತಾರಾ ಈಗ ನಿರ್ದೇಶಕಿ? ಅಭಿನಯಕ್ಕೆ ವಿದಾಯ ಹೇಳುವ ಸೂಚನೆ ಕೊಟ್ರಾ ಲೇಡಿ ಸೂಪರ್​ ಸ್ಟಾರ್​?

ಈ ಫೋಟೋ ನೋಡಿದ ನೆಟ್ಟಿಗರಿಗೆ ಅನುಮಾನ ಮೂಡಿದೆ. ಮಕ್ಕಳು ಮತ್ತು ಸಂಸಾರದ ಕಡೆಗೆ ಗಮನ ಹರಿಸುತ್ತಿರುವ ನಯನತಾರಾ ಅವರು ಇನ್ಮುಂದೆ ನಟನೆಗೆ ಹೆಚ್ಚು ಸಮಯ ನೀಡುವುದಿಲ್ಲ. ಅದರ ಬದಲು ನಿರ್ದೇಶನ ಮಾಡುತ್ತಾರೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಈ ಬಗ್ಗೆ ನಯನತಾರಾ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ನಟಿ ನಯನತಾರಾ ಈಗ ನಿರ್ದೇಶಕಿ? ಅಭಿನಯಕ್ಕೆ ವಿದಾಯ ಹೇಳುವ ಸೂಚನೆ ಕೊಟ್ರಾ ಲೇಡಿ ಸೂಪರ್​ ಸ್ಟಾರ್​?
ನಯನತಾರಾ
ಮದನ್​ ಕುಮಾರ್​
|

Updated on: Nov 27, 2023 | 3:40 PM

Share

ಹಲವು ವರ್ಷಗಳಿಂದ ನಟಿ ನಯನತಾರಾ (Nayanthara) ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ವಿವಿಧ ಪಾತ್ರಗಳಲ್ಲಿ ನೋಡುವ ಮೂಲಕ ಅಭಿಮಾನಿಗಳು ಎಂಜಾಯ್​ ಮಾಡಿದ್ದಾರೆ. ಈ ವರ್ಷ ‘ಜವಾನ್​’ (Jawan) ಸಿನಿಮಾದ ಮೂಲಕ ನಯನತಾರಾ ಅವರು ಬಾಲಿವುಡ್​ಗೆ ಕಾಲಿಟ್ಟರು. ಅಲ್ಲಿಯೂ ಅವರಿಗೆ ಬ್ಲಾಕ್​ ಬಸ್ಟರ್​ ಹಿಟ್​ ಸಿಕ್ಕಿತು. ನಟಿಯಾಗಿ ಇಷ್ಟೆಲ್ಲ ಸಕ್ಸಸ್​ ಕಂಡಿರುವ ನಯನತಾರಾ ಅವರಿಗೆ ನಟನೆ ಬಗ್ಗೆ ಬೇಸರ ಮೂಡಿದೆಯಾ? ಅಭಿನಯಕ್ಕೆ ವಿದಾಯ ಹೇಳಿ ಅವರು ನಿರ್ದೇಶನ (Direction) ಮಾಡುವ ತಯಾರಿಯಲ್ಲಿದ್ದಾರಾ? ಈ ಎಲ್ಲ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಒಂದು ಹೊಸ ಫೋಟೋ!

ಸೋಶಿಯಲ್ ಮೀಡಿಯಾದಲ್ಲಿ ನಯನತಾರಾ ಅವರು ಅಷ್ಟೇನೂ ಆ್ಯಕ್ಟೀವ್​ ಆಗಿಲ್ಲ. ಕೆಲವೇ ತಿಂಗಳ ಹಿಂದೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಖಾತೆ ತೆರೆದರು. ಅವರು ಈಗ ಒಂದು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಕ್ಯಾಮೆರಾ ಹಿಂದೆ ನಿಂತು ನಿರ್ದೇಶನ ಮಾಡುತ್ತಿರುವ ದೃಶ್ಯ ಇದೆ. ಈ ಫೋಟೋದ ಜೊತೆ ಅವರು ಹಂಚಿಕೊಂಡಿರುವ ಕ್ಯಾಪ್ಷನ್​ ಕೂಡ ಗಮನ ಸೆಳೆಯುತ್ತಿದೆ. ‘ಹೊಸ ಆರಂಭದ ಮ್ಯಾಜಿಕ್​ ಬಗ್ಗೆ ನಂಬಿಕೆ ಇರಲಿ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಈ ಫೋಟೋ ನೋಡಿದ ನೆಟ್ಟಿಗರಿಗೆ ಅನುಮಾನ ಮೂಡಿದೆ. ಮಕ್ಕಳು ಮತ್ತು ಸಂಸಾರದ ಕಡೆಗೆ ಗಮನ ಹರಿಸುತ್ತಿರುವ ನಯನತಾರಾ ಅವರು ಇನ್ಮುಂದೆ ನಟನೆಗೆ ಹೆಚ್ಚು ಸಮಯ ನೀಡುವುದಿಲ್ಲ. ಅದರ ಬದಲಿ ನಿರ್ದೇಶನ ಮಾಡುತ್ತಾರೆ. ಆ ಕಾರಣದಿಂದಲೇ ಅವರು ಈ ರೀತಿ ಕ್ಯಾಪ್ಷನ್​ ನೀಡಿದ್ದಾರೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಈ ಬಗ್ಗೆ ನಯನತಾರಾ ಅವರ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ. ಈ ಫೋಟೋಗೆ ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: Nayanthara: ‘ಅನ್ನಪೂರ್ಣಿ’ ಟೀಸರ್​ ಬಿಡುಗಡೆ; ಇದು ನಯನತಾರಾ ನಟನೆಯ 75ನೇ ಸಿನಿಮಾ

ನಟಿಯಾಗಿ ನಯನತಾರಾ ಅವರಿಗೆ ಸಖತ್​ ಬೇಡಿಕೆ ಇದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ಲೇಡಿ ಸೂಪರ್​ ಸ್ಟಾರ್​’ ಎಂದು ಕರೆಯುತ್ತಾರೆ. ಅನೇಕ ಸ್ಟಾರ್​ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಇಷ್ಟ ವರ್ಷಗಳ ಕಾಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿದ್ದ ಅವರು ಈಗ ಬಾಲಿವುಡ್​ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ನಟಿಯಾಗಿ ಇಷ್ಟೆಲ್ಲ ಡಿಮ್ಯಾಂಡ್ ಇರುವಾಗ ಅವರು ಅಭಿನಯಕ್ಕೆ ಗುಡ್​ಬೈ ಹೇಳಲು ಸಾಧ್ಯವೇ ಇಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ