AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡ್ತಾರಾ ಅಟ್ಲಿ? ‘ಜವಾನ್​’ ನಿರ್ದೇಶಕನಿಗೆ ಡಿಮ್ಯಾಂಡ್​

ಮಾಸ್​ ಸಿನಿಮಾಗಳನ್ನು ಮಾಡುವಲ್ಲಿ ಅಟ್ಲಿ ಫೇಮಸ್​ ಆಗಿದ್ದಾರೆ. ಈ ವರ್ಷ ತೆರೆಕಂಡ ‘ಜವಾನ್​’ ಸಿನಿಮಾ ಮೂಲಕ ಅವರ ಕಸುಬುದಾರಿಕೆ ಏನು ಎಂಬುದು ಬಾಲಿವುಡ್​ ಮಂದಿಗೂ ಗೊತ್ತಾಯಿತು. ಅವರ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ಹೀರೋಗಳು ಆಸಕ್ತಿ ತೋರಿಸುತ್ತಿದ್ದಾರೆ.

ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡ್ತಾರಾ ಅಟ್ಲಿ? ‘ಜವಾನ್​’ ನಿರ್ದೇಶಕನಿಗೆ ಡಿಮ್ಯಾಂಡ್​
ಅಟ್ಲಿ, ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
|

Updated on:Dec 25, 2023 | 6:15 PM

ನಿರ್ದೇಶಕ ಅಟ್ಲಿ (Atlee) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಈ ಮೊದಲು ಕೇವಲ ಕಾಲಿವುಡ್​ನಲ್ಲಿ ಫೇಮಸ್​ ಆಗಿದ್ದ ಅವರು ‘ಜವಾನ್​’ (Jawan) ಸಿನಿಮಾದಿಂದ ಬಾಲಿವುಡ್​ನಲ್ಲೂ ತಮ್ಮ ಛಾಪು ಮೂಡಿಸಿದರು. ಈಗ ಅವರ ಹೊಸ ಪ್ರಾಜೆಕ್ಟ್​ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಅಟ್ಲಿ ಅವರು ಅಲ್ಲು ಅರ್ಜುನ್​ (Allu Arjun) ಜೊತೆ ಸಿನಿಮಾ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ‘ಪುಷ್ಪ 2’ ರಿಲೀಸ್​ ಆದ ಬಳಿಕ ಅಲ್ಲು ಅರ್ಜುನ್​ ಅವರು ಅಟ್ಲಿ ಜೊತೆ ಕೈ ಜೋಡಿಸುತ್ತಾರೆ ಎಂಬ ಗಾಸಿಪ್​ ಹಬ್ಬಿದೆ.

ಮಾಸ್​ ಸಿನಿಮಾಗಳನ್ನು ಮಾಡುವಲ್ಲಿ ಅಟ್ಲಿ ಫೇಮಸ್​ ಆಗಿದ್ದಾರೆ. ಈ ವರ್ಷ ತೆರೆಕಂಡ ‘ಜವಾನ್​’ ಸಿನಿಮಾ ಮೂಲಕ ಅವರ ಕಸುಬುದಾರಿಕೆ ಏನು ಎಂಬುದು ಬಾಲಿವುಡ್​ ಮಂದಿಗೂ ಗೊತ್ತಾಯಿತು. ಅವರ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ಹೀರೋಗಳು ಕಾದಿದ್ದಾರೆ. ಅಲ್ಲು ಅರ್ಜುನ್​ ಸಹ ಅಟ್ಲಿ ಜೊತೆ ಸಿನಿಮಾ ಮಾಡಲು ಉತ್ಸಾಹ ಹೊಂದಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಇದನ್ನೂ ಓದಿ: ‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ

ಅಲ್ಲು ಅರ್ಜುನ್​ ಅವರು ‘ಪುಷ್ಪ’ ಹಿಟ್​ ಆದ ಬಳಿಕ ಪ್ಯಾನ್​ ಇಂಡಿಯಾ ಸ್ಟಾರ್​ ಆದರು. ಈಗ ಅವರ ಸಂಪೂರ್ಣ ಗಮನ ‘ಪುಷ್ಪ 2’ ಸಿನಿಮಾದ ಮೇಲಿದೆ. 2024ರ ಆಗಸ್ಟ್​ 15ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ಆ ನಂತರ ಅಲ್ಲು ಅರ್ಜುನ್​ ಕೈಗೆತ್ತಿಕೊಳ್ಳುವ ಪ್ರಾಜೆಕ್ಟ್​ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ಇರಲಿದೆ. ಅದಕ್ಕೆ ಅಟ್ಲಿ ಆ್ಯಕ್ಷನ್​-ಕಟ್​ ಹೇಳುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಅಟ್ಲಿ ಮತ್ತು ಪ್ರಿಯಾ ದಂಪತಿ ಫೋಟೋಗಳು ವೈರಲ್​; ಆದರೆ ಕಮೆಂಟ್​ ಮಾಡುವಂತಿಲ್ಲ

ಅಭಿಮಾನಿಗಳು ಅಲ್ಲು ಅರ್ಜುನ್​ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆಯೇ ಅವರು ಸ್ಕ್ರಿಪ್ಟ್​ ಮತ್ತು ನಿರ್ದೇಶಕರ ಆಯ್ಕೆ ಮಾಡಿಕೊಳ್ಳಬೇಕಿದೆ. ‘ಪುಷ್ಪ’ ಸಿನಿಮಾದಲ್ಲಿನ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅಲ್ಲು ಅರ್ಜುನ್​ ಅವರ ಜವಾಬ್ದಾರಿ ಹೆಚ್ಚಾಗಿದೆ. ‘ಪುಷ್ಪ 2’ ನಂತರ ಅವರು ಯಾವ ಪ್ರಾಜೆಕ್ಟ್​ ಒಪ್ಪಿಕೊಳ್ಳುತ್ತಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ನಿರ್ದೇಶಕರಾದ ತ್ರಿವಿಕ್ರಂ ಶ್ರೀನಿವಾಸ್​ ಮತ್ತು ಸಂದೀಪ್​ ರೆಡ್ಡಿ ವಂಗಾ ಜೊತೆಯೂ ಅಲ್ಲು ಅರ್ಜುನ್​ ಸಿನಿಮಾ ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:15 pm, Mon, 25 December 23

ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ