AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80ರ ದಶಕದ ಈ ಸಿನಿಮಾದ ರಿಮೇಕ್ ‘ಜವಾನ್’? ಆ ಚಿತ್ರದ ಕಥೆಯೂ ಹೀಗೆಯೇ ಇದೆ

‘ಜವಾನ್’ ಸಿನಿಮಾ ನಿರ್ದೇಶಕ ಅಟ್ಲಿ ಅವರು ಚಿತ್ರಕ್ಕೆ ಸೌತ್​ ಇಂಡಿಯಾದ ಫ್ಲೇವರ್ ಬೆರೆಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಹೀಗಾಗಿ ಬಾಲಿವುಡ್ ಜೊತೆ ದಕ್ಷಿಣ ಭಾರತದಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಈ ಕಾರಣದಿಂದಲೇ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತಿದೆ.

80ರ ದಶಕದ ಈ ಸಿನಿಮಾದ ರಿಮೇಕ್ ‘ಜವಾನ್’? ಆ ಚಿತ್ರದ ಕಥೆಯೂ ಹೀಗೆಯೇ ಇದೆ
ಶಾರುಖ್-ಸತ್ಯರಾಜ್
ರಾಜೇಶ್ ದುಗ್ಗುಮನೆ
|

Updated on:Sep 10, 2023 | 7:41 AM

Share

ಶಾರುಖ್ ಖಾನ್ ನಟನೆಯಜವಾನ್’ ಚಿತ್ರವನ್ನು (Jawan Movie) ಒಂದಷ್ಟು ಮಂದಿ ಬಾಯ್ತುಂಬ ಹೊಗಳುತ್ತಿದ್ದಾರೆ. ಸಿನಿಮಾ ಗಳಿಕೆ ಮಾಡುತ್ತಿರುವ ರೀತಿಗೆ ಅನೇಕರು ದಂಗಾಗಿದ್ದಾರೆ. ಎರಡೇ ದಿನಕ್ಕೆ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದಾರೆ. ದಕ್ಷಿಣ ಭಾರತದ ಕೆಲವು ಸಿನಿಮಾಗಳನ್ನು ರಿಮೇಕ್ ಮಾಡಿ ಈ ಚಿತ್ರವನ್ನು ಸಿದ್ಧಪಡಿಸಿದಂತಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಈ ಚಿತ್ರದ ಮೂಲವನ್ನು ಹುಡುಕಿ ತೆಗೆದಿದ್ದಾರೆ. 1989ರಲ್ಲಿ ಬಂದ ತಮಿಳಿನ ‘ತಾಯಿ ನಾಡು’ (Thai Naadu) ಸಿನಿಮಾದ ಕಥೆಯೂ ಹೀಗೆಯೇ ಇದೆ ಅನ್ನೋದು ಅನೇಕರ ಅಭಿಪ್ರಾಯ.

‘ತಾಯಿ ನಾಡು’ ಚಿತ್ರವನ್ನು ಆರ್. ಅರವಿಂದ್ ರಾಜ್ ನಿರ್ದೇಶನ ಮಾಡಿದ್ದರು. ಸತ್ಯರಾಜ್ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಜವಾನ್’ ರೀತಿಯೇ ತಂದೆ ಮಗನ ಪಾತ್ರ. ‘ತಾಯಿ ನಾಡು’ ಸಿನಿಮಾದಲ್ಲಿ ತಂದೆ ಮಿಲಿಟರಿಯಲ್ಲಿರುತ್ತಾನೆ. ಆದರೆ, ವೈರಿಗಳ ಕುತಂತ್ರಕ್ಕೆ ಬಲಿಯಾಗುತ್ತಾನೆ. ಆತ ಎದುರಾಳಿಗೆ ಮಾಹಿತಿ ಲೀಕ್ ಮಾಡುತ್ತಿದ್ದ ಎನ್ನುವ ಆರೋಪ ಹೊರಿಸಲಾಗುತ್ತದೆ. ನಂತರ ಆತನ ಕೊಲೆ ಮಾಡಲಾಗುತ್ತದೆ. ನಂತರ ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತದೆ. ತಂದೆಯ ಸಾವಿಗೆ ಕಾರಣರಾದವರನ್ನು ಮಗ ಹುಡುಕಿ ಹೋಗುತ್ತಾನೆ. ‘ಜವಾನ್’ ಸಿನಿಮಾ ಕಥೆಯೂ ಇದೇ ರೀತಿ ಇದೆ.

‘ಜವಾನ್’ ಸಿನಿಮಾ ನಿರ್ದೇಶಕ ಅಟ್ಲಿ ಅವರು ಚಿತ್ರಕ್ಕೆ ಸೌತ್​ ಇಂಡಿಯಾದ ಫ್ಲೇವರ್ ಬೆರೆಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಹೀಗಾಗಿ ಬಾಲಿವುಡ್ ಜೊತೆ ದಕ್ಷಿಣ ಭಾರತದಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಈ ಕಾರಣದಿಂದಲೇ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತಿದೆ. ವೀಕೆಂಡ್​ನಲ್ಲಿ ಸಿನಿಮಾಗೆ ಯಾವ ರೀತಿಯಲ್ಲಿ ಗಳಿಕೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 2ನೇ ದಿನವೂ ಸುನಾಮಿ ಎಬ್ಬಿಸಿದ ‘ಜವಾನ್​’; ಭಾರತದಲ್ಲಿ 120 ಕೋಟಿ ರೂ. ದಾಟಿದ ಕಲೆಕ್ಷನ್​

‘ಜವಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾ ಮಣಿ ಮೊದಲಾದವರು ನಟಿಸಿದ್ದಾರೆ. ವಿಲನ್ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಿದ್ದಾರೆ. ಅವರು ಆ್ಯಕ್ಷನ್​ಗಿಂತ ಹಾವಭಾವದಲ್ಲೇ ವಿಲನ್​ಗಿರಿ ತೋರಿಸಿದ್ದಾರೆ. ಅವರ ಪಾತ್ರಕ್ಕೆ ಇನ್ನೂ ಏನೋ ಕಡಿಮೆ ಎನ್ನುವ ಫೀಲ್ ಅಭಿಮಾನಿಗಳಿಗೆ ಸಿಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Sun, 10 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​