AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಗೆ ಕಂಬ್ಯಾಕ್​ ಮಾಡಿದ ಜಯ್​ ಡಿಸೋಜ; ವೀಕ್ಷಕರಿಗೆ ಇಷ್ಟವಾಗುತ್ತಾ ಭಿನ್ನ ಅವತಾರ?

Jay D Souza: ಜಯ್ ‘ಮನೆದೇವ್ರು’ ಧಾರಾವಾಹಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ಈಗ ಅವರು ‘ಆಕಾಶ ದೀಪ’ ಧಾರಾವಾಹಿ ಮೂಲಕ ಮತ್ತೆ ಕನ್ನಡ ವೀಕ್ಷಕರ ಎದುರು ಬರುತ್ತಿದ್ದಾರೆ.

ಕಿರುತೆರೆಗೆ ಕಂಬ್ಯಾಕ್​ ಮಾಡಿದ ಜಯ್​ ಡಿಸೋಜ; ವೀಕ್ಷಕರಿಗೆ ಇಷ್ಟವಾಗುತ್ತಾ ಭಿನ್ನ ಅವತಾರ?
ಜಯ್​ ಡಿಸೋಜ
ರಾಜೇಶ್ ದುಗ್ಗುಮನೆ
| Edited By: |

Updated on:Jun 22, 2021 | 10:13 AM

Share

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಧಾರಾವಾಹಿಗಳು ಶೂಟಿಂಗ್​ ಮಾಡೋದು ಕಷ್ಟವಾಗುತ್ತಿದೆ. ಈ ಸಂದರ್ಭದಲ್ಲೂ ‘ಆಕಾಶ ದೀಪ’ ಧಾರಾವಾಹಿ ಆರಂಭಗೊಳ್ಳುತ್ತಿದೆ. ಈ ಧಾರಾವಾಹಿ ಮೂಲಕ ಜಯ್​ ಡಿಸೋಜ ಕಂಬ್ಯಾಕ್​ ಮಾಡುತ್ತಿದ್ದಾರೆ.

ಜಯ್ ‘ಮನೆದೇವ್ರು’ ಧಾರಾವಾಹಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ಈಗ ಅವರು ಆಕಾಶ ದೀಪ ಧಾರಾವಾಹಿ ಮೂಲಕ ಮತ್ತೆ ಕನ್ನಡ ವೀಕ್ಷಕರ ಎದುರು ಬರುತ್ತಿದ್ದಾರೆ. ಈ ಧಾರಾವಾಹಿಯ ಶೂಟಿಂಗ್​ ಕಳೆದ ಡಿಸೆಂಬರ್​ನಲ್ಲೇ ಆರಂಭಗೊಂಡಿದೆ. ಒಂದಷ್ಟು ಎಪಿಸೋಡ್​ಗಳನ್ನು ಈಗಾಗಲೇ ಶೂಟ್​ ಮಾಡಲಾಗಿದ್ದು, ಜೂನ್​ 21ರಿಂದ ಪ್ರಸಾರ ಆರಂಭಗೊಂಡಿದೆ.

ಈ ಮೊದಲೇ ‘ಆಕಾಶ ದೀಪ’ ಪ್ರಸಾರ ಆರಂಭಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಪ್ರಸಾರ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈಗ ‘ಆಕಾಶ ದೀಪ’ ಪ್ರಸಾರ ಆರಂಭಿಸಿದೆ. ಈ ಬಗ್ಗೆ ಜಯ್​ ಸಂತಸ ವ್ಯಕ್ತಪಡಿಸುತ್ತಾರೆ. ಅಲ್ಲದೆ, ಈ ಪಾತ್ರವನ್ನು ವೀಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಅವರಲ್ಲಿದೆ.

‘ಮನೆದೇವ್ರು’ ಧಾರಾವಾಹಿಯಲ್ಲಿ ಸೂರ್ಯ ಹೆಸರಿನ ಪಾತ್ರವನ್ನು ಜಯ್ ಮಾಡಿದ್ದರು. ಈಗ ಆಕಾಶದೀಪ ಧಾರಾವಾಹಿಯಲ್ಲಿ ಕುರುಡುನ ಪಾತ್ರಕ್ಕೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಇಡೀ ಧಾರಾವಾಹಿಯ ಕಥೆ ಇವರ ಸುತ್ತವೇ ಸಾಗಲಿದೆ ಅನ್ನೋದು ವಿಶೇಷ.

ಅಂದಹಾಗೆ, ಈ ಧಾರಾವಾಹಿಯ ನಾಯಕಿ ದೀಪಾ, ಹಾಲಿನ ಡೈರಿ ಮಾಡಿ ತನ್ನ ಮನೆ ನಡೆಸುವ ಗುರಿ ಇರುವ ಹುಡುಗಿ. ದಯೆ, ವಿನಯ, ಮುಗ್ಧತೆ ದೀಪಾಳ ಗುಣಗಳು. ಅಪ್ಪನ ಮುದ್ದಿನ ಮಗಳಾದರೂ, ಚಿಕ್ಕಮ್ಮ ಮತ್ತು ಮಲಸೋದರಿಯ ಮುಷ್ಠಿಗೆ ಸಿಲುಕಿ ನರಳುವ ಆಕೆಯ ಬಾಳಿಗೆ ಅನಿರೀಕ್ಷಿತ ಬೆಳಕೊಂದು ಬರುತ್ತದೆ. ಅದುವೇ ಆಕಾಶ್​. ನಂತರ ಏನೆಲ್ಲ ಆಗುತ್ತದೆ ಎಂಬುದು ಧಾರಾವಾಹಿಯ ಕಥೆ.

ಇದನ್ನೂ ಓದಿ:

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

Published On - 7:21 am, Tue, 22 June 21

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ