AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಗೆ ಕಂಬ್ಯಾಕ್​ ಮಾಡಿದ ಜಯ್​ ಡಿಸೋಜ; ವೀಕ್ಷಕರಿಗೆ ಇಷ್ಟವಾಗುತ್ತಾ ಭಿನ್ನ ಅವತಾರ?

Jay D Souza: ಜಯ್ ‘ಮನೆದೇವ್ರು’ ಧಾರಾವಾಹಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ಈಗ ಅವರು ‘ಆಕಾಶ ದೀಪ’ ಧಾರಾವಾಹಿ ಮೂಲಕ ಮತ್ತೆ ಕನ್ನಡ ವೀಕ್ಷಕರ ಎದುರು ಬರುತ್ತಿದ್ದಾರೆ.

ಕಿರುತೆರೆಗೆ ಕಂಬ್ಯಾಕ್​ ಮಾಡಿದ ಜಯ್​ ಡಿಸೋಜ; ವೀಕ್ಷಕರಿಗೆ ಇಷ್ಟವಾಗುತ್ತಾ ಭಿನ್ನ ಅವತಾರ?
ಜಯ್​ ಡಿಸೋಜ
ರಾಜೇಶ್ ದುಗ್ಗುಮನೆ
| Edited By: |

Updated on:Jun 22, 2021 | 10:13 AM

Share

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಧಾರಾವಾಹಿಗಳು ಶೂಟಿಂಗ್​ ಮಾಡೋದು ಕಷ್ಟವಾಗುತ್ತಿದೆ. ಈ ಸಂದರ್ಭದಲ್ಲೂ ‘ಆಕಾಶ ದೀಪ’ ಧಾರಾವಾಹಿ ಆರಂಭಗೊಳ್ಳುತ್ತಿದೆ. ಈ ಧಾರಾವಾಹಿ ಮೂಲಕ ಜಯ್​ ಡಿಸೋಜ ಕಂಬ್ಯಾಕ್​ ಮಾಡುತ್ತಿದ್ದಾರೆ.

ಜಯ್ ‘ಮನೆದೇವ್ರು’ ಧಾರಾವಾಹಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ಈಗ ಅವರು ಆಕಾಶ ದೀಪ ಧಾರಾವಾಹಿ ಮೂಲಕ ಮತ್ತೆ ಕನ್ನಡ ವೀಕ್ಷಕರ ಎದುರು ಬರುತ್ತಿದ್ದಾರೆ. ಈ ಧಾರಾವಾಹಿಯ ಶೂಟಿಂಗ್​ ಕಳೆದ ಡಿಸೆಂಬರ್​ನಲ್ಲೇ ಆರಂಭಗೊಂಡಿದೆ. ಒಂದಷ್ಟು ಎಪಿಸೋಡ್​ಗಳನ್ನು ಈಗಾಗಲೇ ಶೂಟ್​ ಮಾಡಲಾಗಿದ್ದು, ಜೂನ್​ 21ರಿಂದ ಪ್ರಸಾರ ಆರಂಭಗೊಂಡಿದೆ.

ಈ ಮೊದಲೇ ‘ಆಕಾಶ ದೀಪ’ ಪ್ರಸಾರ ಆರಂಭಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಪ್ರಸಾರ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈಗ ‘ಆಕಾಶ ದೀಪ’ ಪ್ರಸಾರ ಆರಂಭಿಸಿದೆ. ಈ ಬಗ್ಗೆ ಜಯ್​ ಸಂತಸ ವ್ಯಕ್ತಪಡಿಸುತ್ತಾರೆ. ಅಲ್ಲದೆ, ಈ ಪಾತ್ರವನ್ನು ವೀಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಅವರಲ್ಲಿದೆ.

‘ಮನೆದೇವ್ರು’ ಧಾರಾವಾಹಿಯಲ್ಲಿ ಸೂರ್ಯ ಹೆಸರಿನ ಪಾತ್ರವನ್ನು ಜಯ್ ಮಾಡಿದ್ದರು. ಈಗ ಆಕಾಶದೀಪ ಧಾರಾವಾಹಿಯಲ್ಲಿ ಕುರುಡುನ ಪಾತ್ರಕ್ಕೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಇಡೀ ಧಾರಾವಾಹಿಯ ಕಥೆ ಇವರ ಸುತ್ತವೇ ಸಾಗಲಿದೆ ಅನ್ನೋದು ವಿಶೇಷ.

ಅಂದಹಾಗೆ, ಈ ಧಾರಾವಾಹಿಯ ನಾಯಕಿ ದೀಪಾ, ಹಾಲಿನ ಡೈರಿ ಮಾಡಿ ತನ್ನ ಮನೆ ನಡೆಸುವ ಗುರಿ ಇರುವ ಹುಡುಗಿ. ದಯೆ, ವಿನಯ, ಮುಗ್ಧತೆ ದೀಪಾಳ ಗುಣಗಳು. ಅಪ್ಪನ ಮುದ್ದಿನ ಮಗಳಾದರೂ, ಚಿಕ್ಕಮ್ಮ ಮತ್ತು ಮಲಸೋದರಿಯ ಮುಷ್ಠಿಗೆ ಸಿಲುಕಿ ನರಳುವ ಆಕೆಯ ಬಾಳಿಗೆ ಅನಿರೀಕ್ಷಿತ ಬೆಳಕೊಂದು ಬರುತ್ತದೆ. ಅದುವೇ ಆಕಾಶ್​. ನಂತರ ಏನೆಲ್ಲ ಆಗುತ್ತದೆ ಎಂಬುದು ಧಾರಾವಾಹಿಯ ಕಥೆ.

ಇದನ್ನೂ ಓದಿ:

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

Published On - 7:21 am, Tue, 22 June 21

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ
ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ