ಕಿರುತೆರೆಗೆ ಕಂಬ್ಯಾಕ್​ ಮಾಡಿದ ಜಯ್​ ಡಿಸೋಜ; ವೀಕ್ಷಕರಿಗೆ ಇಷ್ಟವಾಗುತ್ತಾ ಭಿನ್ನ ಅವತಾರ?

Jay D Souza: ಜಯ್ ‘ಮನೆದೇವ್ರು’ ಧಾರಾವಾಹಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ಈಗ ಅವರು ‘ಆಕಾಶ ದೀಪ’ ಧಾರಾವಾಹಿ ಮೂಲಕ ಮತ್ತೆ ಕನ್ನಡ ವೀಕ್ಷಕರ ಎದುರು ಬರುತ್ತಿದ್ದಾರೆ.

ಕಿರುತೆರೆಗೆ ಕಂಬ್ಯಾಕ್​ ಮಾಡಿದ ಜಯ್​ ಡಿಸೋಜ; ವೀಕ್ಷಕರಿಗೆ ಇಷ್ಟವಾಗುತ್ತಾ ಭಿನ್ನ ಅವತಾರ?
ಜಯ್​ ಡಿಸೋಜ
Follow us
| Updated By: Digi Tech Desk

Updated on:Jun 22, 2021 | 10:13 AM

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಧಾರಾವಾಹಿಗಳು ಶೂಟಿಂಗ್​ ಮಾಡೋದು ಕಷ್ಟವಾಗುತ್ತಿದೆ. ಈ ಸಂದರ್ಭದಲ್ಲೂ ‘ಆಕಾಶ ದೀಪ’ ಧಾರಾವಾಹಿ ಆರಂಭಗೊಳ್ಳುತ್ತಿದೆ. ಈ ಧಾರಾವಾಹಿ ಮೂಲಕ ಜಯ್​ ಡಿಸೋಜ ಕಂಬ್ಯಾಕ್​ ಮಾಡುತ್ತಿದ್ದಾರೆ.

ಜಯ್ ‘ಮನೆದೇವ್ರು’ ಧಾರಾವಾಹಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ಈಗ ಅವರು ಆಕಾಶ ದೀಪ ಧಾರಾವಾಹಿ ಮೂಲಕ ಮತ್ತೆ ಕನ್ನಡ ವೀಕ್ಷಕರ ಎದುರು ಬರುತ್ತಿದ್ದಾರೆ. ಈ ಧಾರಾವಾಹಿಯ ಶೂಟಿಂಗ್​ ಕಳೆದ ಡಿಸೆಂಬರ್​ನಲ್ಲೇ ಆರಂಭಗೊಂಡಿದೆ. ಒಂದಷ್ಟು ಎಪಿಸೋಡ್​ಗಳನ್ನು ಈಗಾಗಲೇ ಶೂಟ್​ ಮಾಡಲಾಗಿದ್ದು, ಜೂನ್​ 21ರಿಂದ ಪ್ರಸಾರ ಆರಂಭಗೊಂಡಿದೆ.

ಈ ಮೊದಲೇ ‘ಆಕಾಶ ದೀಪ’ ಪ್ರಸಾರ ಆರಂಭಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಪ್ರಸಾರ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈಗ ‘ಆಕಾಶ ದೀಪ’ ಪ್ರಸಾರ ಆರಂಭಿಸಿದೆ. ಈ ಬಗ್ಗೆ ಜಯ್​ ಸಂತಸ ವ್ಯಕ್ತಪಡಿಸುತ್ತಾರೆ. ಅಲ್ಲದೆ, ಈ ಪಾತ್ರವನ್ನು ವೀಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಅವರಲ್ಲಿದೆ.

‘ಮನೆದೇವ್ರು’ ಧಾರಾವಾಹಿಯಲ್ಲಿ ಸೂರ್ಯ ಹೆಸರಿನ ಪಾತ್ರವನ್ನು ಜಯ್ ಮಾಡಿದ್ದರು. ಈಗ ಆಕಾಶದೀಪ ಧಾರಾವಾಹಿಯಲ್ಲಿ ಕುರುಡುನ ಪಾತ್ರಕ್ಕೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಇಡೀ ಧಾರಾವಾಹಿಯ ಕಥೆ ಇವರ ಸುತ್ತವೇ ಸಾಗಲಿದೆ ಅನ್ನೋದು ವಿಶೇಷ.

ಅಂದಹಾಗೆ, ಈ ಧಾರಾವಾಹಿಯ ನಾಯಕಿ ದೀಪಾ, ಹಾಲಿನ ಡೈರಿ ಮಾಡಿ ತನ್ನ ಮನೆ ನಡೆಸುವ ಗುರಿ ಇರುವ ಹುಡುಗಿ. ದಯೆ, ವಿನಯ, ಮುಗ್ಧತೆ ದೀಪಾಳ ಗುಣಗಳು. ಅಪ್ಪನ ಮುದ್ದಿನ ಮಗಳಾದರೂ, ಚಿಕ್ಕಮ್ಮ ಮತ್ತು ಮಲಸೋದರಿಯ ಮುಷ್ಠಿಗೆ ಸಿಲುಕಿ ನರಳುವ ಆಕೆಯ ಬಾಳಿಗೆ ಅನಿರೀಕ್ಷಿತ ಬೆಳಕೊಂದು ಬರುತ್ತದೆ. ಅದುವೇ ಆಕಾಶ್​. ನಂತರ ಏನೆಲ್ಲ ಆಗುತ್ತದೆ ಎಂಬುದು ಧಾರಾವಾಹಿಯ ಕಥೆ.

ಇದನ್ನೂ ಓದಿ:

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

Published On - 7:21 am, Tue, 22 June 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!