AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಜಯಲಲಿತಾ ಅವತಾರದಲ್ಲಿ ಕಂಗನಾ ರಣಾವತ್​; ಹೊಸ ಸಿನಿಮಾಗಾಗಿ ನಡೆದಿದೆ ಸಿದ್ಧತೆ

‘ತಲೈವಿ’ ಸಿನಿಮಾ ಸಂಪೂರ್ಣವಾಗಿ ಜಯಲಲಿತಾ ಜೀವನ ಕಥೆ ಆಧರಿಸಿ ಇದೆ. ಜಯಲಲಿತಾ ಚಿತ್ರರಂಗಕ್ಕೆ ಬಂದಿದ್ದು ಹೇಗೆ? ಅವರು ನಂತರ ಹೇಗೆ ರಾಜಕೀಯಕ್ಕೆ ಬಂದರು? ಹೇಗೆ ಸಿಎಂ ಆದರು? ಎನ್ನುವುದನ್ನು ಈ ಬಯೋಪಿಕ್​ನಲ್ಲಿ ಹೇಳಲಾಗಿತ್ತು.

ಮತ್ತೆ ಜಯಲಲಿತಾ ಅವತಾರದಲ್ಲಿ ಕಂಗನಾ ರಣಾವತ್​; ಹೊಸ ಸಿನಿಮಾಗಾಗಿ ನಡೆದಿದೆ ಸಿದ್ಧತೆ
ಕಂಗನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 22, 2021 | 6:00 PM

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜೀವನ ಆಧರಿಸಿ ಸಿದ್ಧಗೊಂಡಿರುವ ‘ತಲೈವಿ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಇದಕ್ಕೆ ಕಾರಣಗಳು ಹಲವು. ಆದರೆ, ಕಂಗನಾ ರಣಾವತ್​ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಮೇಕಿಂಗ್​ ಬಗ್ಗೆಯೂ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಿರುವಾಗಲೇ ಕಂಗನಾ ಮತ್ತೆ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗಾದರೆ, ಜಯಲಲಿತಾ ಬಗ್ಗೆ ಮತ್ತೊಂದು ಬಯೋಪಿಕ್​ ಬರುತ್ತಿದೆಯೇ? ಇಲ್ಲ. ‘ತಲೈವಿ 2’ ತೆರೆಮೇಲೆ ತರೋಕೆ ಪ್ಲ್ಯಾನ್​ ಸಿದ್ಧಗೊಂಡಿದೆ.

‘ತಲೈವಿ’ ಸಿನಿಮಾ ಸಂಪೂರ್ಣವಾಗಿ ಜಯಲಲಿತಾ ಜೀವನ ಕಥೆ ಆಧರಿಸಿ ಇದೆ. ಜಯಲಲಿತಾ ಚಿತ್ರರಂಗಕ್ಕೆ ಬಂದಿದ್ದು ಹೇಗೆ? ಅವರು ನಂತರ ಹೇಗೆ ರಾಜಕೀಯಕ್ಕೆ ಬಂದರು? ಹೇಗೆ ಸಿಎಂ ಆದರು? ಎನ್ನುವುದನ್ನು ಈ ಬಯೋಪಿಕ್​ನಲ್ಲಿ ಹೇಳಲಾಗಿತ್ತು. ಜಯಲಲಿತಾ ಮುಖ್ಯಮಂತ್ರಿ ಆದ ನಂತರ ಸಿನಿಮಾ ಪೂರ್ಣಗೊಂಡಿತ್ತು. ಇದು ಅನೇಕರಿಗೆ ಬೇಸರ ತರಿಸಿತ್ತು. ‘ತಲೈವಿ’ ಸಿನಿಮಾದಲ್ಲಿ ಜಯಲಲಿತಾ ಬಣ್ಣದ ಬದುಕಿನ ಬಗ್ಗೆ ಹೆಚ್ಚು ತೋರಿಸಲಾಗಿದೆ. ರಾಜಕೀಯ ಬದುಕನ್ನು ಹೆಚ್ಚು ಹೈಲೈಟ್​ ಮಾಡಿಲ್ಲ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ ನಿರ್ದೇಶಕರು ‘ತಲೈವಿ 2’ ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ.

ಸಿನಿಮಾದ ಸಹ ಬರಹಗಾರ ರಜತ್ ಅರೋರಾ ಈ ಬಗ್ಗೆ ಹೇಳಿಕೊಂಡಿದ್ದಾರೆ.  ‘ಜಯಲಲಿತಾ ರಾಜಕೀಯ ಬದುಕು ತುಂಬಾನೇ ದೀರ್ಘವಾಗಿತ್ತು. ಇದನ್ನು 15 ನಿಮಿಷಗಳಲ್ಲಿ ಹೇಳಿದರೆ ನಾವು ಅದಕ್ಕೆ ನ್ಯಾಯ ಒದಗಿಸಿದಂತೆ ಆಗುವುದಿಲ್ಲ ಎಂದು ನಮಗನಿಸಿತು. ಹೀಗಾಗಿ, ‘ತಲೈವಿ ಪಾರ್ಟ್​ 2’ ತರೋಕೆ ಸಿದ್ಧತೆ ನಡೆದಿದೆ. ನಾವು ಕಂಗನಾ ಜತೆಗೆ ಮಾತುಕತೆ ನಡೆಸಿದ್ದೇವೆ’ ಎಂದಿದ್ದಾರೆ ರಜತ್.

‘ಜಯಲಲಿತಾ ಸಿಎಂ ಆದ ನಂತರ ಏನಾಯಿತು ಎಂದು ಸಿನಿಮಾದಲ್ಲಿ ತೋರಿಸಿಯೇ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಹಾಗೆ ತೋರಿಸೋಕೆ ಸಾಕಷ್ಟು ವಿಷಯಗಳಿವೆ. ಅದನ್ನು ನಾವು ತೆರೆಮೇಲೆ ತರುತ್ತೇವೆ. ಮತ್ತೊಮ್ಮೆ ಇಡೀ ತಂಡವನ್ನು ಭೇಟಿ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

Thalaivii Movie Review: ‘ತಲೈವಿ’.. ಇದು ಕೇವಲ ಜಯಲಲಿತಾ ಕತೆಯಲ್ಲ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ