AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಜಯಲಲಿತಾ ಅವತಾರದಲ್ಲಿ ಕಂಗನಾ ರಣಾವತ್​; ಹೊಸ ಸಿನಿಮಾಗಾಗಿ ನಡೆದಿದೆ ಸಿದ್ಧತೆ

‘ತಲೈವಿ’ ಸಿನಿಮಾ ಸಂಪೂರ್ಣವಾಗಿ ಜಯಲಲಿತಾ ಜೀವನ ಕಥೆ ಆಧರಿಸಿ ಇದೆ. ಜಯಲಲಿತಾ ಚಿತ್ರರಂಗಕ್ಕೆ ಬಂದಿದ್ದು ಹೇಗೆ? ಅವರು ನಂತರ ಹೇಗೆ ರಾಜಕೀಯಕ್ಕೆ ಬಂದರು? ಹೇಗೆ ಸಿಎಂ ಆದರು? ಎನ್ನುವುದನ್ನು ಈ ಬಯೋಪಿಕ್​ನಲ್ಲಿ ಹೇಳಲಾಗಿತ್ತು.

ಮತ್ತೆ ಜಯಲಲಿತಾ ಅವತಾರದಲ್ಲಿ ಕಂಗನಾ ರಣಾವತ್​; ಹೊಸ ಸಿನಿಮಾಗಾಗಿ ನಡೆದಿದೆ ಸಿದ್ಧತೆ
ಕಂಗನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 22, 2021 | 6:00 PM

Share

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜೀವನ ಆಧರಿಸಿ ಸಿದ್ಧಗೊಂಡಿರುವ ‘ತಲೈವಿ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಇದಕ್ಕೆ ಕಾರಣಗಳು ಹಲವು. ಆದರೆ, ಕಂಗನಾ ರಣಾವತ್​ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಮೇಕಿಂಗ್​ ಬಗ್ಗೆಯೂ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಿರುವಾಗಲೇ ಕಂಗನಾ ಮತ್ತೆ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗಾದರೆ, ಜಯಲಲಿತಾ ಬಗ್ಗೆ ಮತ್ತೊಂದು ಬಯೋಪಿಕ್​ ಬರುತ್ತಿದೆಯೇ? ಇಲ್ಲ. ‘ತಲೈವಿ 2’ ತೆರೆಮೇಲೆ ತರೋಕೆ ಪ್ಲ್ಯಾನ್​ ಸಿದ್ಧಗೊಂಡಿದೆ.

‘ತಲೈವಿ’ ಸಿನಿಮಾ ಸಂಪೂರ್ಣವಾಗಿ ಜಯಲಲಿತಾ ಜೀವನ ಕಥೆ ಆಧರಿಸಿ ಇದೆ. ಜಯಲಲಿತಾ ಚಿತ್ರರಂಗಕ್ಕೆ ಬಂದಿದ್ದು ಹೇಗೆ? ಅವರು ನಂತರ ಹೇಗೆ ರಾಜಕೀಯಕ್ಕೆ ಬಂದರು? ಹೇಗೆ ಸಿಎಂ ಆದರು? ಎನ್ನುವುದನ್ನು ಈ ಬಯೋಪಿಕ್​ನಲ್ಲಿ ಹೇಳಲಾಗಿತ್ತು. ಜಯಲಲಿತಾ ಮುಖ್ಯಮಂತ್ರಿ ಆದ ನಂತರ ಸಿನಿಮಾ ಪೂರ್ಣಗೊಂಡಿತ್ತು. ಇದು ಅನೇಕರಿಗೆ ಬೇಸರ ತರಿಸಿತ್ತು. ‘ತಲೈವಿ’ ಸಿನಿಮಾದಲ್ಲಿ ಜಯಲಲಿತಾ ಬಣ್ಣದ ಬದುಕಿನ ಬಗ್ಗೆ ಹೆಚ್ಚು ತೋರಿಸಲಾಗಿದೆ. ರಾಜಕೀಯ ಬದುಕನ್ನು ಹೆಚ್ಚು ಹೈಲೈಟ್​ ಮಾಡಿಲ್ಲ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ ನಿರ್ದೇಶಕರು ‘ತಲೈವಿ 2’ ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ.

ಸಿನಿಮಾದ ಸಹ ಬರಹಗಾರ ರಜತ್ ಅರೋರಾ ಈ ಬಗ್ಗೆ ಹೇಳಿಕೊಂಡಿದ್ದಾರೆ.  ‘ಜಯಲಲಿತಾ ರಾಜಕೀಯ ಬದುಕು ತುಂಬಾನೇ ದೀರ್ಘವಾಗಿತ್ತು. ಇದನ್ನು 15 ನಿಮಿಷಗಳಲ್ಲಿ ಹೇಳಿದರೆ ನಾವು ಅದಕ್ಕೆ ನ್ಯಾಯ ಒದಗಿಸಿದಂತೆ ಆಗುವುದಿಲ್ಲ ಎಂದು ನಮಗನಿಸಿತು. ಹೀಗಾಗಿ, ‘ತಲೈವಿ ಪಾರ್ಟ್​ 2’ ತರೋಕೆ ಸಿದ್ಧತೆ ನಡೆದಿದೆ. ನಾವು ಕಂಗನಾ ಜತೆಗೆ ಮಾತುಕತೆ ನಡೆಸಿದ್ದೇವೆ’ ಎಂದಿದ್ದಾರೆ ರಜತ್.

‘ಜಯಲಲಿತಾ ಸಿಎಂ ಆದ ನಂತರ ಏನಾಯಿತು ಎಂದು ಸಿನಿಮಾದಲ್ಲಿ ತೋರಿಸಿಯೇ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಹಾಗೆ ತೋರಿಸೋಕೆ ಸಾಕಷ್ಟು ವಿಷಯಗಳಿವೆ. ಅದನ್ನು ನಾವು ತೆರೆಮೇಲೆ ತರುತ್ತೇವೆ. ಮತ್ತೊಮ್ಮೆ ಇಡೀ ತಂಡವನ್ನು ಭೇಟಿ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

Thalaivii Movie Review: ‘ತಲೈವಿ’.. ಇದು ಕೇವಲ ಜಯಲಲಿತಾ ಕತೆಯಲ್ಲ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ