‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ

ಜಯಂ ರವಿ ಅವರು ತಮಿಳಿನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. 2003ರಲ್ಲಿ ಅವರು ‘ಜಯಂ’ ಹೆಸರಿನ ಸಿನಿಮಾ ಮಾಡಿದರು. ಆಗ ರವಿ ಆಗಿದ್ದ ಅವರು ಈ ಚಿತ್ರದ ಮೂಲಕ ಜಯಂ ರವಿ ಆದರು. ಅವರು ‘ಪೊನ್ನಿಯಿನ್ ಸೆಲ್ವನ್’ ರೀತಿಯ ಚಿತ್ರಗಳಲ್ಲಿ ನಟಿಸಿದ್ದಾರೆ.

‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ
‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ
Follow us
|

Updated on: Sep 11, 2024 | 12:48 PM

ಜಯಂ ರವಿ ಅವರು ದಕ್ಷಿಣ ಭಾರತದಲ್ಲಿ ಖ್ಯಾತಿ ಗಳಿಸಿದ್ದಾರೆ. ಇತ್ತೀಚೆಗೆ ಅವರು ಶಾಕಿಂಗ್ ಸ್ಟೇಟ್​ಮೆಂಟ್ ಒಂದನ್ನು ನೀಡಿದ್ದರು. ತಾವು ಪತ್ನಿ ಆರತಿ ಜೊತೆ ವಿಚ್ಛೇದನ ಪಡೆಯೋದಾಗಿ ಘೋಷಿಸಿದ್ದರು. ಈಗ ಅವರ ಪತ್ನಿ ಈ ವಿಚಾರದಲ್ಲಿ ಹೇಳಿಕೆ ನೀಡಿದ್ದಾರೆ. ನನ್ನ ಗಮನಕ್ಕೆ ತರದೆ ಪತಿ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಿಗೆ ಕುಳಿತು ಮಾತನಾಡಲು ಪತಿಯಿಂದ ಅವರು ಸಮಯ ಬೇಡುತ್ತಿದ್ದಾರೆ.

ಜಯಂ ರವಿ ಅವರು ತಮಿಳಿನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. 2003ರಲ್ಲಿ ಅವರು ‘ಜಯಂ’ ಹೆಸರಿನ ಸಿನಿಮಾ ಮಾಡಿದರು. ಆಗ ರವಿ ಆಗಿದ್ದ ಅವರು ಈ ಚಿತ್ರದ ಮೂಲಕ ಜಯಂ ರವಿ ಆದರು. ಅವರು ‘ಪೊನ್ನಿಯಿನ್ ಸೆಲ್ವನ್’ ರೀತಿಯ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಇತ್ತೀಚೆಗೆ ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದ್ದರು. ಈ ಬಗ್ಗೆ ಆರತಿ ಬೇಸರ ಹೊರಹಾಕಿದ್ದಾರೆ.

‘ಕಳೆದ ಕೆಲವು ದಿನಗಳಿಂದ ನನ್ನ ಪತಿ ಜೊತೆ ಮಾತನಾಡಲು ಅವಕಾಶ ಕೇಳಿದೆ. ಇಬ್ಬರ ಮಧ್ಯೆ ಮಾತುಕತೆ ಆಗಬಹುದು ಎಂದು ಭಾವಿಸಿದ್ದೇನೆ. ಇದರಿಂದ ನಮ್ಮಿಬ್ಬರ ಮಧ್ಯೆ ಹಾಗೂ ನಮ್ಮ ಕುಟುಂಬದ ಮಧ್ಯೆ ಬೆಳೆದ ಸಂಬಂಧಕ್ಕೆ ಇದು ಗೌರವ ನೀಡುತ್ತದೆ ಎಂದು ಭಾವಿಸುತ್ತೇನೆ’ ಎಂದಿದ್ದಾರೆ ಅವರು.

‘ನಾನು ಸಮಯದ ಮೇಲೆ ನಂಬಿಕೆ ಇಟ್ಟಿದ್ದೇನೆ. ನಮ್ಮ ಪರಿಸ್ಥಿತಿ ಅರ್ಥವಾಗುತ್ತದೆ’ ಎಂದು ಅವರು ಬರೆದಿದ್ದಾರೆ. ಮಕ್ಕಳು ಮೊದಲ ಆದ್ಯತೆ ಎಂದು ಅವರು ಹೇಳಿಕೊಂಡಿದ್ದಾರೆ. ವಿಚ್ಛೇದನದಿಂದ ದೂರ ಹೋಗುವ ನಿರ್ಧಾರ ಜಯಂ ರವಿ ಹೇಳಿದ್ದಾರೆ.

ಇದನ್ನೂ ಓದಿ: ಜಯಂ ರವಿ ವಿಚ್ಛೇದನ: 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ನಟ

ಜಯಂ ರವಿ ಹಾಗೂ ಆರತಿ ಮದುವೆ ಆಗಿ 15 ವರ್ಷಗಳು ಕಳೆದಿವೆ.  ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಇಷ್ಟು ವರ್ಷಗಳ ಬಳಿಕ ರವಿ ಮತ್ತು ಆರತಿ ಅವರು ಡಿವೋರ್ಸ್​ ಪಡೆದಿದ್ದು ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ