AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ

ತಮಿಳಿನ ಜನಪ್ರಿಯ ನಟ ಜಯಂ ರವಿಯ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಮಾಜಿ ಪತ್ನಿ ಆರತಿ ವಿರುದ್ಧ ಜಯಂ ರವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪತ್ನಿ ತಮ್ಮನ್ನು ತಮ್ಮ ಮನೆಯಿಂದಲೇ ಹೊರಗೆ ಹಾಕಿದ್ದಾರೆ ಎಂದು ಜಯಂ ರವಿ ಆರೋಪಿಸಿದ್ದಾರೆ.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ
ಮಂಜುನಾಥ ಸಿ.
|

Updated on: Sep 25, 2024 | 12:19 PM

Share

ತಮಿಳು ನಟ ಜಯಂ ರವಿ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಕೆಲವು ದಿನಗಳ ಹಿಂದಷ್ಟೆ ನಟ ಜಯಂ ರವಿ, ತಾವು ತಮ್ಮ ಪತ್ನಿ ಆರತಿ ದೂರಾಗುತ್ತಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜಯಂ ರವಿ ಪತ್ನಿ ಆರತಿ, ನನ್ನ ಒಪ್ಪಿಗೆ ಇಲ್ಲದೆ ಜಯಂ ರವಿ ವಿಚ್ಛೇದನ ಪ್ರಕಟಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಅದಾದ ಬಳಿಕ ಜಯಂ ರವಿ ಹಾಗೂ ಆರತಿ ನಡುವೆ ಕಾನೂನು ಹೋರಾಟ ಪ್ರಾರಂಭವಾಗಿದೆ.

ಜಯಂ ರವಿಯ ಇನ್​ಸ್ಟಾಗ್ರಾಂ ಖಾತೆಯನ್ನು ಆರತಿ ‘ಹೈಜಾಕ್’ ಮಾಡಿದ್ದರು. ಈ ವಿಷಯವನ್ನು ಹೇಳಿಕೊಂಡಿದ್ದ ಜಯಂ ರವಿ ಬಳಿಕ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ತಮ್ಮ ಸುಪರ್ಧಿಗೆ ಪಡೆದು ಮಾಜಿ ಪತ್ನಿಯ ಚಿತ್ರಗಳನ್ನು ಡಿಲೀಟ್ ಮಾಡಿದರು. ಆ ಬಳಿಕ ನೀಡಿದ್ದ ಹೇಳಿಕೆಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ಪಡೆಯಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು. ಎಷ್ಟೇ ವರ್ಷಗಳಾದರೂ ಸಹ ನಾನು ಮಕ್ಕಳಿಗಾಗಿ ಹೋರಾಟ ಮಾಡುವೆ ಎಂದಿದ್ದರು.

ಇದೀಗ ಜಯಂ ರವಿ ತಮ್ಮ ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಆರತಿ, ಜಯಂ ರವಿ ಅವರನ್ನು ಅವರದ್ದೇ ಮನೆಯಿಂದ ಹೊರಗೆ ಹಾಕಿದ್ದು, ಮನೆಗೆ ಪ್ರವೇಶ ಮಾಡಲು ಅವಕಾಶ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಅಡ್ಯಾರ್ ಪೊಲೀಸ್ ಠಾಣೆಯಲ್ಲಿ ಜಯಂ ರವಿ ದೂರು ದಾಖಲಿಸಿದ್ದಾರೆ. ಚೆನ್ನೈನ ಇಸಿಆರ್ ರಸ್ತೆಯಲ್ಲಿ ಜಯಂ ರವಿಯ ಮನೆಯಿದ್ದು ಮನೆ ಹಾಗೂ ಅಲ್ಲಿರುವ ತಮ್ಮ ವಸ್ತುಗಳನ್ನು ತಮ್ಮ ವಶಕ್ಕೆ ಪಡೆಯಲು ಅವರು ಪೊಲೀಸರ ನೆರವು ಕೋರಿದ್ದಾರೆ.

ಇದನ್ನೂ ಓದಿ:‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ

ಜಯಂ ರವಿಗೆ ಗಾಯಕಿಯೊಬ್ಬರೊಟ್ಟಿಗೆ ಸಂಬಂಧ ಇದ್ದು ಅದೇ ಕಾರಣಕ್ಕೆ ಈ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಜಯಂ ರವಿ ಮತ್ತು ಆರತಿ ಪ್ರೀತಿಸಿ ಮದುವೆಯಾಗಿದ್ದರು. ಹಲವು ವರ್ಷ ಜೊತೆಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಈಗ ಈ ಜೋಡಿ ವಿಚ್ಛೇದನಕ್ಕೆ ಮುಂದಾಗಿದೆ. ಇಬ್ಬರ ವಿಚ್ಛೇದನ ಈಗ ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು