AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ

ತಮಿಳಿನ ಜನಪ್ರಿಯ ನಟ ಜಯಂ ರವಿಯ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಮಾಜಿ ಪತ್ನಿ ಆರತಿ ವಿರುದ್ಧ ಜಯಂ ರವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪತ್ನಿ ತಮ್ಮನ್ನು ತಮ್ಮ ಮನೆಯಿಂದಲೇ ಹೊರಗೆ ಹಾಕಿದ್ದಾರೆ ಎಂದು ಜಯಂ ರವಿ ಆರೋಪಿಸಿದ್ದಾರೆ.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ
ಮಂಜುನಾಥ ಸಿ.
|

Updated on: Sep 25, 2024 | 12:19 PM

Share

ತಮಿಳು ನಟ ಜಯಂ ರವಿ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಕೆಲವು ದಿನಗಳ ಹಿಂದಷ್ಟೆ ನಟ ಜಯಂ ರವಿ, ತಾವು ತಮ್ಮ ಪತ್ನಿ ಆರತಿ ದೂರಾಗುತ್ತಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜಯಂ ರವಿ ಪತ್ನಿ ಆರತಿ, ನನ್ನ ಒಪ್ಪಿಗೆ ಇಲ್ಲದೆ ಜಯಂ ರವಿ ವಿಚ್ಛೇದನ ಪ್ರಕಟಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಅದಾದ ಬಳಿಕ ಜಯಂ ರವಿ ಹಾಗೂ ಆರತಿ ನಡುವೆ ಕಾನೂನು ಹೋರಾಟ ಪ್ರಾರಂಭವಾಗಿದೆ.

ಜಯಂ ರವಿಯ ಇನ್​ಸ್ಟಾಗ್ರಾಂ ಖಾತೆಯನ್ನು ಆರತಿ ‘ಹೈಜಾಕ್’ ಮಾಡಿದ್ದರು. ಈ ವಿಷಯವನ್ನು ಹೇಳಿಕೊಂಡಿದ್ದ ಜಯಂ ರವಿ ಬಳಿಕ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ತಮ್ಮ ಸುಪರ್ಧಿಗೆ ಪಡೆದು ಮಾಜಿ ಪತ್ನಿಯ ಚಿತ್ರಗಳನ್ನು ಡಿಲೀಟ್ ಮಾಡಿದರು. ಆ ಬಳಿಕ ನೀಡಿದ್ದ ಹೇಳಿಕೆಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ಪಡೆಯಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು. ಎಷ್ಟೇ ವರ್ಷಗಳಾದರೂ ಸಹ ನಾನು ಮಕ್ಕಳಿಗಾಗಿ ಹೋರಾಟ ಮಾಡುವೆ ಎಂದಿದ್ದರು.

ಇದೀಗ ಜಯಂ ರವಿ ತಮ್ಮ ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಆರತಿ, ಜಯಂ ರವಿ ಅವರನ್ನು ಅವರದ್ದೇ ಮನೆಯಿಂದ ಹೊರಗೆ ಹಾಕಿದ್ದು, ಮನೆಗೆ ಪ್ರವೇಶ ಮಾಡಲು ಅವಕಾಶ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಅಡ್ಯಾರ್ ಪೊಲೀಸ್ ಠಾಣೆಯಲ್ಲಿ ಜಯಂ ರವಿ ದೂರು ದಾಖಲಿಸಿದ್ದಾರೆ. ಚೆನ್ನೈನ ಇಸಿಆರ್ ರಸ್ತೆಯಲ್ಲಿ ಜಯಂ ರವಿಯ ಮನೆಯಿದ್ದು ಮನೆ ಹಾಗೂ ಅಲ್ಲಿರುವ ತಮ್ಮ ವಸ್ತುಗಳನ್ನು ತಮ್ಮ ವಶಕ್ಕೆ ಪಡೆಯಲು ಅವರು ಪೊಲೀಸರ ನೆರವು ಕೋರಿದ್ದಾರೆ.

ಇದನ್ನೂ ಓದಿ:‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ

ಜಯಂ ರವಿಗೆ ಗಾಯಕಿಯೊಬ್ಬರೊಟ್ಟಿಗೆ ಸಂಬಂಧ ಇದ್ದು ಅದೇ ಕಾರಣಕ್ಕೆ ಈ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಜಯಂ ರವಿ ಮತ್ತು ಆರತಿ ಪ್ರೀತಿಸಿ ಮದುವೆಯಾಗಿದ್ದರು. ಹಲವು ವರ್ಷ ಜೊತೆಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಈಗ ಈ ಜೋಡಿ ವಿಚ್ಛೇದನಕ್ಕೆ ಮುಂದಾಗಿದೆ. ಇಬ್ಬರ ವಿಚ್ಛೇದನ ಈಗ ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್