AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ

ತಮಿಳಿನ ಜನಪ್ರಿಯ ನಟ ಜಯಂ ರವಿಯ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಮಾಜಿ ಪತ್ನಿ ಆರತಿ ವಿರುದ್ಧ ಜಯಂ ರವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪತ್ನಿ ತಮ್ಮನ್ನು ತಮ್ಮ ಮನೆಯಿಂದಲೇ ಹೊರಗೆ ಹಾಕಿದ್ದಾರೆ ಎಂದು ಜಯಂ ರವಿ ಆರೋಪಿಸಿದ್ದಾರೆ.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ
ಮಂಜುನಾಥ ಸಿ.
|

Updated on: Sep 25, 2024 | 12:19 PM

Share

ತಮಿಳು ನಟ ಜಯಂ ರವಿ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಕೆಲವು ದಿನಗಳ ಹಿಂದಷ್ಟೆ ನಟ ಜಯಂ ರವಿ, ತಾವು ತಮ್ಮ ಪತ್ನಿ ಆರತಿ ದೂರಾಗುತ್ತಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜಯಂ ರವಿ ಪತ್ನಿ ಆರತಿ, ನನ್ನ ಒಪ್ಪಿಗೆ ಇಲ್ಲದೆ ಜಯಂ ರವಿ ವಿಚ್ಛೇದನ ಪ್ರಕಟಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಅದಾದ ಬಳಿಕ ಜಯಂ ರವಿ ಹಾಗೂ ಆರತಿ ನಡುವೆ ಕಾನೂನು ಹೋರಾಟ ಪ್ರಾರಂಭವಾಗಿದೆ.

ಜಯಂ ರವಿಯ ಇನ್​ಸ್ಟಾಗ್ರಾಂ ಖಾತೆಯನ್ನು ಆರತಿ ‘ಹೈಜಾಕ್’ ಮಾಡಿದ್ದರು. ಈ ವಿಷಯವನ್ನು ಹೇಳಿಕೊಂಡಿದ್ದ ಜಯಂ ರವಿ ಬಳಿಕ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ತಮ್ಮ ಸುಪರ್ಧಿಗೆ ಪಡೆದು ಮಾಜಿ ಪತ್ನಿಯ ಚಿತ್ರಗಳನ್ನು ಡಿಲೀಟ್ ಮಾಡಿದರು. ಆ ಬಳಿಕ ನೀಡಿದ್ದ ಹೇಳಿಕೆಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ಪಡೆಯಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು. ಎಷ್ಟೇ ವರ್ಷಗಳಾದರೂ ಸಹ ನಾನು ಮಕ್ಕಳಿಗಾಗಿ ಹೋರಾಟ ಮಾಡುವೆ ಎಂದಿದ್ದರು.

ಇದೀಗ ಜಯಂ ರವಿ ತಮ್ಮ ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಆರತಿ, ಜಯಂ ರವಿ ಅವರನ್ನು ಅವರದ್ದೇ ಮನೆಯಿಂದ ಹೊರಗೆ ಹಾಕಿದ್ದು, ಮನೆಗೆ ಪ್ರವೇಶ ಮಾಡಲು ಅವಕಾಶ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಅಡ್ಯಾರ್ ಪೊಲೀಸ್ ಠಾಣೆಯಲ್ಲಿ ಜಯಂ ರವಿ ದೂರು ದಾಖಲಿಸಿದ್ದಾರೆ. ಚೆನ್ನೈನ ಇಸಿಆರ್ ರಸ್ತೆಯಲ್ಲಿ ಜಯಂ ರವಿಯ ಮನೆಯಿದ್ದು ಮನೆ ಹಾಗೂ ಅಲ್ಲಿರುವ ತಮ್ಮ ವಸ್ತುಗಳನ್ನು ತಮ್ಮ ವಶಕ್ಕೆ ಪಡೆಯಲು ಅವರು ಪೊಲೀಸರ ನೆರವು ಕೋರಿದ್ದಾರೆ.

ಇದನ್ನೂ ಓದಿ:‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ

ಜಯಂ ರವಿಗೆ ಗಾಯಕಿಯೊಬ್ಬರೊಟ್ಟಿಗೆ ಸಂಬಂಧ ಇದ್ದು ಅದೇ ಕಾರಣಕ್ಕೆ ಈ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಜಯಂ ರವಿ ಮತ್ತು ಆರತಿ ಪ್ರೀತಿಸಿ ಮದುವೆಯಾಗಿದ್ದರು. ಹಲವು ವರ್ಷ ಜೊತೆಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಈಗ ಈ ಜೋಡಿ ವಿಚ್ಛೇದನಕ್ಕೆ ಮುಂದಾಗಿದೆ. ಇಬ್ಬರ ವಿಚ್ಛೇದನ ಈಗ ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ