AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ಸಿಗುವವರೆಗೆ ಸಿನಿಮಾಗಳಲ್ಲಿ ನಟಿಸಲ್ಲ: ಜಯಂ ರವಿ ಘೋಷಣೆ

Jayam Ravi: ತಮಿಳು ನಟ ಜಯಂ ರವಿ ಅವರು ಸಿನಿಮಾಗಳ ಬದಲಿಗೆ ತಮ್ಮ ಖಾಸಗಿ ಬದುಕಿನಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಜಯಂ ರವಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಗಾಯಕಿ ಕೆನೀಶಾ ಪ್ರಾನ್ಸಿಸ್​ ಜೊತೆ ಸಂಬಂಧದಲ್ಲಿದ್ದರು. ಇದೀಗ ರವಿ ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಘೋಷಣೆ ಮಾಡಿದ್ದಾರೆ. ‘ವಿಚ್ಛೇದನ ಸಿಗುವವರೆಗೆ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ’ ಎಂದಿದ್ದಾರೆ.

ವಿಚ್ಛೇದನ ಸಿಗುವವರೆಗೆ ಸಿನಿಮಾಗಳಲ್ಲಿ ನಟಿಸಲ್ಲ: ಜಯಂ ರವಿ ಘೋಷಣೆ
Jayam Ravi
ಮಂಜುನಾಥ ಸಿ.
|

Updated on:May 16, 2026 | 3:22 PM

Share

ಜಯಂ ರವಿ (Jayam Ravi), ತಮಿಳು ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರು. ತಮಿಳಿನ ‘ಜಯಂ’ ಸಿನಿಮಾ ಮೂಲಕ ನಟರಾದ ರವಿ ಮೋಹನ್, ಆ ನಂತರ ನಾಯಕರಾಗಿ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನಿಡಿದ್ದಾರೆ. ಆದರೆ ಇತ್ತೀಚೆಗೆ ಜಯಂ ರವಿ ಅವರು ಸಿನಿಮಾಗಳ ಬದಲಿಗೆ ತಮ್ಮ ಖಾಸಗಿ ಬದುಕಿನಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಜಯಂ ರವಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಗಾಯಕಿ ಕೆನೀಶಾ ಪ್ರಾನ್ಸಿಸ್​ ಜೊತೆ ಸಂಬಂಧದಲ್ಲಿದ್ದರು. ಇದೀಗ ರವಿ ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಘೋಷಣೆ ಮಾಡಿದ್ದಾರೆ. ‘ವಿಚ್ಛೇದನ ಸಿಗುವವರೆಗೆ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ’ ಎಂದಿದ್ದಾರೆ.

ರವಿ, ತಮ್ಮ ಪತ್ನಿ ಆರತಿ ಇಂದ ಪ್ರತ್ಯೇಕವಾಗಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ರವಿ, ತಮ್ಮ ಮನೆಯನ್ನು ಸಹ ಪತ್ನಿಗೆ ಬಿಟ್ಟುಕೊಟ್ಟಿದ್ದರು. ಆದರೆ ಅವರಿಗೆ ಇನ್ನೂ ಅಧಿಕೃತವಾಗಿ ವಿಚ್ಛೇದನ ದೊರೆತಿಲ್ಲ. ಇದೀಗ ಸುದ್ದಿಗೋಷ್ಠಿ ನಡೆಸಿ ಭಾವುಕರಾಗಿ ಮಾತನಾಡಿದ ಅವರು, ‘ನನ್ನನ್ನು ಗುಲಾನಂತೆ ಇರಿಸಿಕೊಳ್ಳಲಾಗಿತ್ತು’ ಎಂದಿದ್ದಾರೆ. ಸುದ್ದಿಗೋಷ್ಠಿ ಸಂದರ್ಭದಲ್ಲಿ ಜೋರಾಗಿ ಕಿರುಚಾಡಿ, ಕೂಗಾಡಿ ಜಯಂ ರವಿ ಮಾತನಾಡಿದ್ದು, ಅದರ ವಿಡಿಯೋಗಳು ಇದೀಗ ವೈರಲ್ ಆಗಿವೆ.

‘ನನಗೆ ವಿಚ್ಛೇದನ ಸಿಗುವವರೆಗೆ ನಾನು ಸಿನಿಮಾಗಳಲ್ಲಿ ನಟಿಸಲ್ಲ. ನನಗೆ ಆಗಿರುವ ಅವಮಾನಗಳು, ಹಾನಿ ಆಗಿರುವ ನನ್ನ ಖಾಸಗಿ ಬದುಕು ಎಲ್ಲವನ್ನೂ ನಾನು ಸರಿ ಮಾಡಿಕೊಳ್ಳುವೆ. ಅಲ್ಲಿಯ ವರೆಗೆ ನನಗೆ ನಟಿಸಲು ಆಗುವುದಿಲ್ಲ. ನಾನು ಸುಮ್ಮನೆ ಕೂರುವುದೂ ಇಲ್ಲ. ಎಲ್ಲ ಸತ್ಯವನ್ನು ಹೊರಗೆ ತೆಗೆದುಕೊಂಡು ಬರುವೆ, 14 ವರ್ಷಗಳಿಂದ ಸುಮ್ಮನಿದ್ದೆ, ಆದರೆ ಇನ್ನು ಮುಂದೆ ನಾನು ಸುಮ್ಮನೆ ಕೂರುವುದಿಲ್ಲ’ ಎಂದು ರವಿ ಹೇಳಿದ್ದಾರೆ.

‘ಆನ್​​ಲೈನ್ ನಿಂದನೆ ಮಾಡುವವರ ವಿರುದ್ಧ ಹೋರಾಡುತ್ತೇನೆ. ನನ್ನ ಮಕ್ಕಳ ಮೇಲೆ ಪ್ರೀತಿ ಇಲ್ಲ ಎಂದು ಹೇಗೆ ಹೇಳುತ್ತೀರಿ, ಮಕ್ಕಳ ಫೀಸು 90 ಲಕ್ಷ ರೂಪಾಯಿ ಕಟ್ಟುತ್ತಿದ್ದೇನೆ. ಸಣ್ಣ ಮಗನ ಜೊತೆಗೆ ಪ್ರತಿದಿನ ಚೆಸ್ ಆಡುತ್ತಿದ್ದೆ. ಮಕ್ಕಳ ಮೇಲೆ ಪ್ರೀತಿ ಇಲ್ಲ ಎಂದು ಹೇಗೆ ಹೇಳುತ್ತಾರೆ. ಈಗ ನನ್ನ ಮಕ್ಕಳನ್ನೇ ನೋಡಲು ಬಿಡುತ್ತಿಲ್ಲ. ಶಾಲೆಗೆ ಬಾಡಿಗಾರ್ಡ್ ಜೊತೆಗೆ ಕಳಿಸುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ:ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ

‘ನಾನು ಇದ್ದಾಗ ನನ್ನನ್ನು ಗುಲಾಮನಂತೆ ನೋಡಿದರು. ಇರಬೇಕಾದರೆ ನೋಡಿಕೊಳ್ಳಲು ಆಗಲಿಲ್ಲ ಎಂದಮೇಲೆ, ಇಲ್ಲದೇ ಇದ್ದಾಗ ಮುಚ್ಚಿಕೊಂಡು ಇರಬೇಕು. ನಾನು ಸಾಕಷ್ಟು ನೊಂದಿದ್ದೀನಿ, ಈ ಆನ್​​ಲೈನ್ ನಿಂದನೆಯಿಂದ ಇನ್ನಷ್ಟು ನೋಯಿಸಬೇಡಿ. ಈಗಾಗಲೇ ಒಬ್ಬ ಮಹಿಳೆಯನ್ನು ಹಾಳು ಮಾಡಿದ್ದೀರಿ, ಚೆನ್ನೈನಿಂದ ದೂರ ಹೋಗುವಂತೆ ಮಾಡಿದ್ದೀರಿ (ಗೆಳತಿ ಕೆನೀಶಾ ಚೆನ್ನೈ ಬಿಟ್ಟು ಹೋದ ಬಗ್ಗೆ) ಇದನ್ನು ಮುಂದುವರೆಸಬೇಡಿ, ಮುಂದಿನ ದಿನಗಳಲ್ಲಿ ಸಾಕಷ್ಟು ಸತ್ಯಗಳು ಹೊರಗೆ ಬರಲಿವೆ’ ಎಂದು ರವಿ ಹೇಳಿದ್ದಾರೆ.

ರವಿ ಜೊತೆಗೆ ಆಪ್ತವಾಗಿದ್ದ ಗಾಯಕಿ ಕೆನೀಶಾ ಫ್ರಾನ್ಸಿಸ್ ಈಗ ರವಿ ಅವರ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕನ್ನಡಿಯ ಮುಂದೆ ನಿಂತು ಸೆಲ್ಫಿ ಕ್ಲಿಕ್ ಮಾಡಿಕೊಂಡಿರುವ ಫೋಟೋ ಒಂದನ್ನು ಕೆನೀಶಾ ಹಂಚಿಕೊಂಡಿದ್ದಾರೆ. ಅದಕ್ಕೆ ಅವರು ಬರೆದಿರುವ ಶೀರ್ಷಿಕೆ ನೆಟ್ಟಿಗರ ಗಮನ ಸೆಳೆದಿದೆ. ಅವರು, ‘ವಿದಾಯ ಚೆನ್ನೈ, ನಿನ್ನನ್ನು ತುಂಬಾ ಪ್ರೀತಿಸುತ್ತೇನೆ. ಅಂದಹಾಗೆ, ಅವನು ಈಗ ಸಂಪೂರ್ಣವಾಗಿ ನಿಮ್ಮವನೇ’ ಎಂದು ಬರೆದುಕೊಂಡಿದ್ದಾರೆ. ಅದರ ಬೆನ್ನಲ್ಲೆ ಇದೀಗ ರವಿ, ಸುದ್ದಿಗೋಷ್ಠಿ ನಡೆಸಿ ಪರೋಕ್ಷವಾಗಿ ಪತ್ನಿಯ ವಿರುದ್ಧ ಟ್ರೋಲಿಗರ ವಿರುದ್ಧ ಕಿಡಿ ಕಾರಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sat, 16 May 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!