ರಾಜ್​ಕುಮಾರ್ ಸಿನಿಮಾಗಳು ಎವರ್​ಗ್ರೀನ್ ಆಗಲು ಅವರು ಬಳಸುತ್ತಿದ್ದುದು ಇದೇ ತಂತ್ರ

ಜಯಮಾಲಾ ಅವರು ವರನಟ ಡಾ. ರಾಜ್​ಕುಮಾರ್ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಸಿನಿಮಾಗಳು ಎವರ್​​ಗ್ರೀನ್ ಆಗಿ ಉಳಿಯಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ. ರಾಜ್ ಕುಮಾರ್ ಅವರ ಚಿತ್ರಗಳ ದೀರ್ಘಕಾಲಿಕ ಯಶಸ್ಸು ಮತ್ತು ಒಟಿಟಿ ಯುಗದಲ್ಲಿನ ಬದಲಾವಣೆಗಳನ್ನು ಕುರಿತು ಇಲ್ಲಿ ವಿವರಿಸಲಾಗಿದೆ.

ರಾಜ್​ಕುಮಾರ್ ಸಿನಿಮಾಗಳು ಎವರ್​ಗ್ರೀನ್ ಆಗಲು ಅವರು ಬಳಸುತ್ತಿದ್ದುದು ಇದೇ ತಂತ್ರ
ರಾಜ್​ಕುಮಾರ್
Edited By:

Updated on: Feb 28, 2025 | 8:04 AM

ರಾಜ್​ಕುಮಾರ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಹೊಸ ಹೊಸ ಕಥೆಯೊಂದಿಗೆ ಅವರು ಬಂದಿದ್ದಾರೆ. ಒಂದರಲ್ಲಿ ಹಳ್ಳಿ ಹುಡುಗನ ಪಾತ್ರ ಮಾಡಿದರೆ ಮತ್ತೊಂದರಲ್ಲಿ ಪೊಲೀಸ್ ಅಧಿಕಾರಿ, ಮತ್ತೊಂದರಲ್ಲಿ ಪೌರಾಣಿಕ ಪಾತ್ರ. ಹೀಗೆ ಎಲ್ಲವೂ ಭಿನ್ನ. ರಾಜ್​ಕುಮಾರ್ ಸಿನಿಮಾಗಳು ಎವರ್​ಗ್ರೀನ್ ಆಗಿ ಇರಲು ಕಾರಣ ಏನು ಎಂಬುದನ್ನು ಜಯಮಾಲಾ ಅವರು ರಿವೀಲ್ ಮಾಡಿದ್ದರು. ಆ ಬಗ್ಗೆ ಇಂದು ಚರ್ಚಿಸೋಣ.

ಜಯಮಾಲಾ ಅವರಿಗೆ ಇಂದು (ಫೆಬ್ರವರಿ 28) 66ನೇ ವರ್ಷದ ಜನ್ಮದಿನ. ಇತ್ತೀಚೆಗೆ ಅವರು ಮಗಳ ಮದುವೆಯನ್ನು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಿಸಿದರು. ‘ಭೂತಯ್ಯನ ಮಗ ಅಯ್ಯು’ ಚಿತ್ರದಲ್ಲಿ ಪೋಷಕ ಪಾತ್ರ ಮಾಡಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಆಫರ್​ಗಳು ಅವರನ್ನು ಹುಡುಕಿ ಬಂದವು. ನಂತರ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರಿಗೆ ರಾಜ್​ಕುಮಾರ್ ಜೊತೆ ವಿಶೇಷ ಬಾಂಧವ್ಯ ಇತ್ತು.

ರಾಜ್​ಕುಮಾರ್ ನಟನೆಯ ‘ದಾರಿ ತಪ್ಪಿದ ಮಗ’ ಸಿನಿಮಾದಲ್ಲಿ ಬುಂದೇಲ್​ಪುರದ ರಾಜಕುಮಾರಿ ಪಾತ್ರ ಮಾಡಿದರು ಜಯಮಾಲಾ. ‘ಬಡವರ ಬಂಧು’, ‘ಪ್ರೇಮದ ಕಾಣಿಕೆ’ ಮೊದಲಾದ ಸಿನಿಮಾಗಳಲ್ಲಿ ಜಯಮಾಲಾ ಅವರು ರಾಜ್​ಕುಮಾರ್ ಜೊತೆ ತೆರೆ ಹಂಚಿಕೊಂಡಿದ್ದರು. ಹೀಗಾಗಿ, ಇವರ ಜೊತೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಅಣ್ಣಾವ್ರನ್ನು ಹತ್ತಿರದಿಂದ ಜಯಮಾಲಾ ಕಂಡಿದ್ದರು. ಅವರ ಸಿನಿಮಾಗಳು ಎವರ್​ಗ್ರೀನ್ ಆಗಲು ಕಾರಣ ಏನು ಎಂಬುದನ್ನು ಜಯಮಾಲಾ ವಿವರಿಸಿದ್ದರು.

ಇದನ್ನೂ ಓದಿ
ರಾಜ್​ಕುಮಾರ್ ಗಾಯನದ ಬಗ್ಗೆ ವ್ಯಂಗ್ಯವಾಡಿ ತಲೆಮರೆಸಿಕೊಂಡ ಗಾಯಕ
ಪುನೀತ್ ರಾಜ್​ಕುಮಾರ್​ ಅಭಿಮಾನಿಗಳ ಪರವಾಗಿ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ
ಪುನೀತ್ ಬರ್ತ್​ಡೇಗೆ ಬಿಗ್ ಸರ್​ಪ್ರೈಸ್; ಹಿಟ್ ಚಿತ್ರ ರೀ-ರಿಲೀಸ್
ದ್ವಾರಕೀಶ್ ವಿಧಿವಶ ಬಗ್ಗೆ ಶಿವಮೊಗ್ಗದಿಂದಲೇ ಶಿವರಾಜ್​​ಕುಮಾರ್ ಭಾವುಕ ಮಾತು

ಸ್ಕ್ರಿಪ್ಟ್​ನ ಆಯ್ಕೆ ಮಾಡಿಕೊಳ್ಳುವುದರಿಂದ ಹಿಡಿದು ನಂತರದ ಚರ್ಚೆ, ಸಿನಿಮಾ ಶೂಟಿಂಗ್ ಹಾಗೂ ರಿಲೀಸ್​ವರೆಗೆ ರಾಜ್​ಕುಮಾರ್ ಅವರು ಜೀವವನ್ನೇ ಇಟ್ಟಿರುತ್ತಾರೆ ಅನ್ನೋದು ಜಯಮಾಲಾ ಅಭಿಪ್ರಾಯ. ಈ ಕಾರಣದಿಂದಲೇ ಸಿನಿಮಾಗಳು ಎವರ್​ಗ್ರೀನ್​ ಆಗಿವೆ ಎಂಬುದು ಜಯಮಾಲಾ ಅಭಿಪ್ರಾಯ.

ಇದನ್ನೂ ಓದಿ: Rajkumar: ರಾಜ್​ಕುಮಾರ್ ಗಾಯನದ ಬಗ್ಗೆ ವ್ಯಂಗ್ಯವಾಡಿ ತಲೆಮರೆಸಿಕೊಂಡ ಗಾಯಕ

100 ದಿನಗಳು ಅನ್ನೋದು ರಾಜ್​ಕುಮಾರ್ ಸಿನಿಮಾಗೆ ತುಂಬಾನೇ ಸಣ್ಣದು. ಅವರ ಸಿನಿಮಾಗಳು ವರ್ಷಗಟ್ಟಲೆ ಓಡಿದ ಉದಾಹರಣೆಯೂ ಇದೆ. ಆದರೆ, ಈಗಿನ ಕಾಲದಲ್ಲಿ ಅದೆಲ್ಲ ಸಾಧ್ಯವಿಲ್ಲ. ಒಟಿಟಿಯ ಕಾರಣಕ್ಕೆ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ಥಿಯೇಟರ್​ನಿಂದ ಕಾಲ್ಕೀಳುತ್ತವೆ. ಆದರೆ, ರಾಜ್​ಕುಮಾರ್ ಅವರು ಅಂದು ಮಾಡಿದ ದಾಖಲೆಯನ್ನು ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವೇ ಇಲ್ಲ ಎನ್ನಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us