ತಂದೆ ಸಾವಿನ ಸುದ್ದಿಗೆ ಮಗ ಜೀವಾ ಶಾಕ್; ಬಿಗಿದಪ್ಪಿ ಅತ್ತ ನಟ

ಸೂಪರ್ ಗುಡ್ ಫಿಲ್ಮ್ಸ್ ನಿರ್ಮಾಪಕ ಆರ್.ಬಿ. ಚೌಧರಿ ರಾಜಸ್ಥಾನದ ಉದಯಪುರದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತಮಿಳು ಚಿತ್ರರಂಗಕ್ಕೆ ಹಲವು ಹಿಟ್ ಚಿತ್ರಗಳನ್ನು ನೀಡಿದ ಅವರ ಸಾವಿನಿಂದ ದಕ್ಷಿಣ ಭಾರತದ ಚಿತ್ರರಂಗಕ್ಕೆ ಆಘಾತವಾಗಿದೆ. ತಂದೆಯ ಸಾವಿನ ಸುದ್ದಿ ಕೇಳಿದ ನಟ ಜೀವ ತೀವ್ರ ಆಘಾತಕ್ಕೊಳಗಾಗಿ, ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯಗಳು ವೈರಲ್ ಆಗಿವೆ.

ತಂದೆ ಸಾವಿನ ಸುದ್ದಿಗೆ ಮಗ ಜೀವಾ ಶಾಕ್; ಬಿಗಿದಪ್ಪಿ ಅತ್ತ ನಟ
ಚೌದರಿ-ಜೀವಾ

Updated on: May 06, 2026 | 11:32 AM

ಸೂಪರ್ ಗುಡ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಆರ್.ಬಿ. ಚೌಧರಿ (RB Choudary) ಅವರು ರಾಜಸ್ಥಾನದ ಉದಯಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತಮಿಳಿನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರ ಸಾವಿನ ಸುದ್ದಿ ಕೇಳಿ ಇಡೀ ದಕ್ಷಿಣ ಭಾರತದ ಚಿತ್ರರಂಗ ಆಘಾತಕ್ಕೊಳಗಾಗಿದೆ. ಅವರ ಪುತ್ರ, ನಟ ಜೀವಾ ತಂದೆಯ ಸಾವಿನ ಸುದ್ದಿ ಕೇಳಿ ಶಾಕ್​​ಗೆ ಒಳಗಾದರು.

1. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಆರ್​​ಬಿ ಚೌಧರಿ ನಿಧನ

2. ರಾಜಸ್ಥಾನದ ಉದಯಪುರದಲ್ಲಿ ನಡೆದ ರಸ್ತೆ ಅಪಘಾತ

3. ತಂದೆ ಸಾವಿನಿಂದ ಮಗ, ನಟ ಜೀವಾಗೆ ಶಾಕ್ 

ಚೌಧರಿ ಅವರು ಈ ರೀತಿ ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸರಲಿಲ್ಲ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜೀವಾ ಅವರು ದುಃಖ ತಡೆಯಲಾಗದೆ ಕಣ್ಣೀರು ಹಾಕಿದ್ದಾರೆ. ಆಪ್ತ ಬಳಗದವರು ಜೀವ ಅವರಿಗೆ ಸಾಂತ್ವನ ಹೇಳಲು ಬಂದರು. ಆಗ ಅವರನ್ನು ಜೀವಾ ಅಪ್ಪಿಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಕೂಡ ಭಾವುಕರಾಗಿದ್ದಾರೆ. ತಂದೆಯ ಮಾರ್ಗದರ್ಶನದಲ್ಲೇ ಬೆಳೆದಿದ್ದ ಜೀವ ಅವರಿಗೆ ಈ ಸಾವು ದೊಡ್ಡ ಸಾಕಷ್ಟು ನೋವನ್ನು ನೀಡಿದೆ.

ಚೌಧರಿ ಕೇವಲ ನಿರ್ಮಾಪಕ ಮಾತ್ರ ಆಗಿರಲಿಲ್ಲ. ಜೀವಾ ಹಾಗೂ ಜಿತನ್ ರಮೇಶ್ ಅವರ ವೃತ್ತಿಜೀವನಕ್ಕೆ ಭದ್ರ ಬುನಾದಿ ಹಾಕಿಕೊಟ್ಟು ತಂದೆಯಾಗಿ ತಮ್ಮ ಕರ್ತವ್ಯ ಮಾಡಿದ್ದರು. ಸೂಪರ್ ಗುಡ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಜೀವಾ ಅವರಿಗೆ ಹಲವು ಹಿಟ್ ಸಿನಿಮಾಗಳನ್ನು ನೀಡಿ, ಚಿತ್ರರಂಗದಲ್ಲಿ ಅವರೊಂದು ಸ್ಥಾನ ಕಂಡುಕೊಳ್ಳುವಂತೆ ಮಾಡಿದ್ದರು. ವೃತ್ತಿಪರತೆಯ ಜೊತೆಗೆ ಮಗನ ಪ್ರತಿಭೆಯ ಮೇಲೆ ಅವರು ಅಪಾರ ನಂಬಿಕೆ ಇಟ್ಟಿದ್ದರು. ತಂದೆಯನ್ನು ಕಳೆದುಕೊಂಡ ಜೀವಾ ಈಗ ಅನಾಥಪ್ರಜ್ಞೆಯಲ್ಲಿ ಮುಳುಗಿದ್ದಾರೆ.

1988ರಿಂದಲೂ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಆರ್.ಬಿ. ಚೌಧರಿ, ಕನ್ನಡ ಸೇರಿದಂತೆ ದಕ್ಷಿಣದ ಎಲ್ಲಾ ಭಾಷೆಗಳಲ್ಲಿಚಿತ್ರಗಳನ್ನು ನೀಡಿದವರು. ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿದ್ದ ಅವರು, ಹಲವು ತಾಂತ್ರಿಕ ವರ್ಗದವರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಶ್ರೇಯಸ್ಸಿಗೆ ಪಾತ್ರರಾಗಿದ್ದರು. ಏಳು ಬಾರಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದ ಅವರ ಹೆಚ್ಚುಗಾರಿಗೆ.

ಇದನ್ನೂ ಓದಿ: ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ನಿಧನ; ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ

ಚೌಧರಿ ಅವರ ಪತ್ನಿ ಮಹಜಬೀನ್ ಹಾಗೂ ನಾಲ್ವರು ಗಂಡು ಮಕ್ಕಳಾದ ಸುರೇಶ್, ಜೀವನ್, ಜೀವಾಮತ್ತು ಜಿತನ್ ರಮೇಶ್ ಅವರನ್ನು ಅಗಲಿದ್ದಾರೆ. ಈ ಶೋಕದ ಸಮಯದಲ್ಲಿ ದಕ್ಷಿಣ ಭಾರತದ ಖ್ಯಾತ ನಟ-ನಟಿಯರು ಜೀವಾ ಅವರ ಕುಟುಂಬಕ್ಕೆ ಧೈರ್ಯ ತುಂಬುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Wed, 6 May 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us