AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿನಿಮಾ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​-ಜಾನ್​ ಅಬ್ರಾಹಂ; ಮಲಯಾಳಂ ಚಿತ್ರಕ್ಕೆ ಸ್ಟಾರ್​ ನಟರು ಫಿದಾ

ಮಲಯಾಳಂ ಸೂಪರ್​ ಹಿಟ್​ ಚಿತ್ರವನ್ನು ರಿಮೇಕ್​ ಮಾಡಲು ಅಲ್ಲು ಅರ್ಜುನ್​ ಹಾಗೂ ಜಾನ್​ ಅಬ್ರಾಹಂ ಮುಗಿಬಿದ್ದಿದ್ದಾರೆ. ಇಬ್ಬರೂ ಬೇರೆ ಬೇರೆ ಭಾಷೆಯಲ್ಲಿ ರಿಮೇಕ್​ ಮಾಡಲು ಪ್ಲ್ಯಾನ್​ ಮಾಡಿಕೊಂಡಿದ್ದಾರೆ.

ಒಂದೇ ಸಿನಿಮಾ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​-ಜಾನ್​ ಅಬ್ರಾಹಂ; ಮಲಯಾಳಂ ಚಿತ್ರಕ್ಕೆ ಸ್ಟಾರ್​ ನಟರು ಫಿದಾ
ಅಲ್ಲು ಅರ್ಜುನ್, ಜಾನ್ ಅಬ್ರಾಹಂ
TV9 Web
| Updated By: ಮದನ್​ ಕುಮಾರ್​|

Updated on:Aug 03, 2021 | 11:39 AM

Share

ವಿಭಿನ್ನ ಸಿನಿಮಾಗಳನ್ನು ಮಾಡುವ ಮೂಲಕ ಮಲಯಾಳಂ ಚಿತ್ರರಂಗ ಬೆಳೆಯುತ್ತಿದೆ. ಸಿಂಪಲ್​ ಆದ ಮೇಕಿಂಗ್​, ಸಣ್ಣ ಬಜೆಟ್​ನಲ್ಲಿಯೇ ಅದ್ಭುತವಾದ ಚಿತ್ರಗಳನ್ನು ಕಟ್ಟಿಕೊಡುವಲ್ಲಿ ಮಾಲಿವುಡ್​ ನಿರ್ದೇಶಕರು ಯಶಸ್ವಿ ಆಗುತ್ತಿದ್ದಾರೆ. ಮಲಯಾಳಂನಲ್ಲಿ ಸೂಪರ್​ ಹಿಟ್​ ಆದ ಸಿನಿಮಾಗಳು ಬೇರೆ ಭಾಷೆಗಳಿಗೆ ರಿಮೇಕ್​ (Remake) ಆಗುವ ಮೂಲಕ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪುತ್ತಿವೆ. ಅಂಥ ಒಂದು ಚಿತ್ರದ ಮೇಲೆ ಅಲ್ಲು ಅರ್ಜುನ್​ (Allu Arjun) ಮತ್ತು ಜಾನ್​ ಅಬ್ರಾಹಂ (John Abraham) ಕಣ್ಣಿಟ್ಟಿದ್ದಾರೆ. ಯಾವುದು ಆ ಚಿತ್ರ? ನಾಯಟ್ಟು! 

ಪೊಲೀಸ್​ ಇಲಾಖೆಗೆ ಸಂಬಂಧಿಸಿದ ರೋಚಕ ಕಥೆಯನ್ನು ಹೊಂದಿರುವ ‘ನಾಯಟ್ಟು’ ಚಿತ್ರ ಈ ವರ್ಷ ಏಪ್ರಿಲ್​ನಲ್ಲಿ ಬಿಡುಗಡೆ ಆಗಿತ್ತು. ರಾಜಕೀಯ ಪಿತೂರಿಯ ಕಾರಣದಿಂದ ಪೊಲೀಸ್​ ಇಲಾಖೆಯ ಅಧಿಕಾರಿಗಳು ತೊಂದರೆಗೆ ಒಳಗಾಗುವ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಈ ಚಿತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಆ ಚಿತ್ರವನ್ನು ರಿಮೇಕ್​ ಮಾಡಲು ಅಲ್ಲು ಅರ್ಜುನ್​ ಹಾಗೂ ಜಾನ್​ ಅಬ್ರಾಹಂ ಮುಗಿಬಿದ್ದಿದ್ದಾರೆ. ಹಾಗಂತ ಅವರಿಬ್ಬರ ನಡುವೆ ಪೈಪೋಟಿ ಶುರುವಾಗಿಲ್ಲ. ಇಬ್ಬರೂ ಬೇರೆ ಬೇರೆ ಭಾಷೆಯಲ್ಲಿ ರಿಮೇಕ್​ ಮಾಡಲು ಪ್ಲ್ಯಾನ್​ ಮಾಡಿಕೊಂಡಿದ್ದಾರೆ.

‘ನಾಯಟ್ಟು’ ಚಿತ್ರವನ್ನು ತೆಲುಗಿನಲ್ಲಿ ಅಲ್ಲು ಅರ್ಜುನ್​ ನಿರ್ಮಿಸಲಿದ್ದಾರೆ. ಹಿಂದಿಯಲ್ಲಿ ಜಾನ್​ ಅಬ್ರಾಹಂ ನಿರ್ಮಿಸಲಿದ್ದಾರೆ. ಇಬ್ಬರೂ ಕೂಡ ರಿಮೇಕ್​ ಹಕ್ಕುಗಳನ್ನು ಖರೀದಿಸಿದ್ದಾರೆ. ಈ ವಿಚಾರವನ್ನು ‘ನಾಯಟ್ಟು’ ನಿರ್ದೇಶಕ ಮಾರ್ಟಿನ್​ ಪ್ರಕಟ್​ ಬಹಿರಂಗಪಡಿಸಿದ್ದಾರೆ. ಆದರೆ ಅಧಿಕೃತವಾಗಿ ಜಾನ್​ ಆಗಲಿ, ಅಲ್ಲು ಅರ್ಜುನ್​ ಆಗಲಿ ಏನನ್ನೂ ಬಾಯಿ ಬಿಟ್ಟಿಲ್ಲ. ರಿಮೇಕ್​ನಲ್ಲಿ ಯಾವ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಥಿಯೇಟರ್​ನಲ್ಲಿ ‘ನಾಯಟ್ಟು’ ಚಿತ್ರ ತೆರೆಕಂಡಾಗ ಕೊರೊನಾ ಹಾವಳಿ ಇತ್ತು. ಹಾಗಾಗಿ ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಕಲೆಕ್ಷನ್​ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ನೆಟ್​ಫ್ಲಿಕ್ಸ್​ ಮೂಲಕ ಬಿಡುಗಡೆ ಮಾಡಲಾಯಿತು. ಅದರಿಂದ ಹೆಚ್ಚು ಜನರನ್ನು ತಲುಪಿತು. ಈಗ ರಿಮೇಕ್​ ಆಗುವ ಮೂಲಕ ಇನ್ನಿತರ ಭಾಷೆಯ ಪ್ರೇಕ್ಷಕರನ್ನೂ ಈ ಕಥೆ ಸೆಳೆದುಕೊಳ್ಳಲು ಪ್ರಯತ್ನಿಸಲಿದೆ. ಜಾನ್​ ಅಬ್ರಾಹಂ ರಿಮೇಕ್​ ಮಾಡುತ್ತಿರುವ ಎರಡನೇ ಮಾಲಿವುಡ್​ ಸಿನಿಮಾ ಇದಾಗಿದೆ. ಈ ಮೊದಲು ಅವರು ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಹಕ್ಕುಗಳನ್ನು ಕೂಡ ಖರೀದಿಸಿದ್ದು, ಅದರ ಕೆಲಸಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ:

ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ ಅಲ್ಲು ಅರ್ಜುನ್​ ಮಗಳು; ಸಮಂತಾ ಜೊತೆ ಅಲ್ಲು ಅರ್ಹಾ ನಟನೆ

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

Published On - 11:09 am, Tue, 3 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ