AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ​ ಕೊರತೆ ಆಗುತ್ತಿದೆ

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?
ಜಾನ್​ ಅಬ್ರಹಾಂ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 8:03 PM

Share

ಕೊರೊನಾ ಎರಡನೇ ಅಲೆಗೆ ಭಾರತ ತತ್ತರಿಸಿದೆ. ಕೊರೊನಾ ವಾರಿಯರ್​ಗಳು ಹಗಲು ರಾತ್ರಿ ಎನ್ನದೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜತೆಗೆ ಸೆಲೆಬ್ರಿಟಿಗಳು ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈಗ ಬಾಲಿವುಡ್​ ನಟ ಜಾನ್​ ಅಬ್ರಹಾಂ ಕೊರೊನಾ ವಿರುದ್ಧ ಹೋರಾಡಲು ತಮ್ಮ ಸಾಮಾಜಿಕ ಜಾಲತಾಣ ಖಾತೆಯನ್ನೇ ಬಿಟ್ಟುಕೊಟ್ಟಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ​ ಕೊರತೆ ಆಗುತ್ತಿದೆ. ಹೀಗಾಗಿ, ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಸಹಾಯಕ್ಕಾಗಿ ಪೋಸ್ಟ್ ಹಾಕುತ್ತಿದ್ದಾರೆ. ಹೀಗಾಗಿ, ಹೆಚ್ಚು ಜನರಿಗೆ ತಲುಪಲು ಸಹಕಾರಿಯಾಗಬಹುದು ಎನ್ನುವ ಕಾರಣಕ್ಕೆ ಎನ್​ಜಿಒ ಒಂದಕ್ಕೆ ತಮ್ಮ ಸೋಶಿಯಲ್​ ಮೀಡಿಯಾವನ್ನು ಹ್ಯಾಂಡೋವರ್​ ಮಾಡಿದ್ದಾರೆ ಜಾನ್​ ಅಬ್ರಹಾಂ. ಟ್ವಿಟರ್​ನಲ್ಲಿ 32 ಲಕ್ಷ ಹಾಗೂ ಇನ್​ಸ್ಟಾಗ್ರಾಂನಲ್ಲಿ 88 ಲಕ್ಷ ಹಿಂಬಾಲಕರನ್ನು ಅವರು ಹೊಂದಿದ್ದಾರೆ.

ಶುಕ್ರವಾರ ಅವರು ಟ್ವಿಟರ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ದೇಶದಲ್ಲಿ ನಾವು ತುಂಬಾ ಕಠಿಣ  ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಆಮ್ಲಜನಕ, ಐಸಿಯು, ಹಾಸಿಗೆ, ಲಸಿಕೆ ಹಾಗೂ ಆಹಾರ ಸಿಗದ ಒದ್ದಾಡುವವರ ಸಂಖ್ಯೆ ಪ್ರತೀ ಕ್ಷಣವೂ ಹಚ್ಚುತ್ತಲೇ ಇದೆ. ಇಂಥವರಿಗೆ ಸಹಾಯ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಇಂದಿನಿಂದ ನನ್ನ ಸೋಶಿಯಲ್​ ಮೀಡಿಯಾ ಖಾತೆಯನ್ನು ಎನ್​ಜಿಒಗೆ ನೀಡುತ್ತಿದ್ದೇನೆ. ನನ್ನ ಟ್ವಿಟರ್​ ಖಾತೆಯಿಂದ ಪೋಸ್ಟ್ ಮಾಡುವ ಎಲ್ಲಾ ವಿಚಾರಗಳು ಅವರಿಗೆ ಅಗತ್ಯವಿರುವ ಜತೆ ಸಂಪರ್ಕ ಸಾಧಿಸಲು ಸಹಕಾರಿಯಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ನಟ ಸೋನು ಸೂದ್​ ಮೊದಲ ಅಲೆಯಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ನಿಂತಿದ್ದಾರೆ. ಸಾವಿರಾರು ಮಂದಿಗೆ ಅವರು ಸಹಾಯ ಮಾಡಿದ್ದಾರೆ. ನಟ ಅಕ್ಷಯ್​ ಕುಮಾರ್​ ಕೂಡ ಕೊರೊನಾ ವಿರುದ್ಧ ಹೋರಾಡಲು ಕೈ ಜೋಡಿಸಿದ್ದಾರೆ. ಅವರು ಕೊರೊನಾ ವಿರುದ್ಧ ಹೋರಾಡಲು ಈಗಾಗಲೇ ಕೋಟ್ಯಾಂತರ ರೂಪಾಯಿ ನೀಡಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ