AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ​ ಕೊರತೆ ಆಗುತ್ತಿದೆ

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?
ಜಾನ್​ ಅಬ್ರಹಾಂ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 8:03 PM

Share

ಕೊರೊನಾ ಎರಡನೇ ಅಲೆಗೆ ಭಾರತ ತತ್ತರಿಸಿದೆ. ಕೊರೊನಾ ವಾರಿಯರ್​ಗಳು ಹಗಲು ರಾತ್ರಿ ಎನ್ನದೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜತೆಗೆ ಸೆಲೆಬ್ರಿಟಿಗಳು ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈಗ ಬಾಲಿವುಡ್​ ನಟ ಜಾನ್​ ಅಬ್ರಹಾಂ ಕೊರೊನಾ ವಿರುದ್ಧ ಹೋರಾಡಲು ತಮ್ಮ ಸಾಮಾಜಿಕ ಜಾಲತಾಣ ಖಾತೆಯನ್ನೇ ಬಿಟ್ಟುಕೊಟ್ಟಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ​ ಕೊರತೆ ಆಗುತ್ತಿದೆ. ಹೀಗಾಗಿ, ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಸಹಾಯಕ್ಕಾಗಿ ಪೋಸ್ಟ್ ಹಾಕುತ್ತಿದ್ದಾರೆ. ಹೀಗಾಗಿ, ಹೆಚ್ಚು ಜನರಿಗೆ ತಲುಪಲು ಸಹಕಾರಿಯಾಗಬಹುದು ಎನ್ನುವ ಕಾರಣಕ್ಕೆ ಎನ್​ಜಿಒ ಒಂದಕ್ಕೆ ತಮ್ಮ ಸೋಶಿಯಲ್​ ಮೀಡಿಯಾವನ್ನು ಹ್ಯಾಂಡೋವರ್​ ಮಾಡಿದ್ದಾರೆ ಜಾನ್​ ಅಬ್ರಹಾಂ. ಟ್ವಿಟರ್​ನಲ್ಲಿ 32 ಲಕ್ಷ ಹಾಗೂ ಇನ್​ಸ್ಟಾಗ್ರಾಂನಲ್ಲಿ 88 ಲಕ್ಷ ಹಿಂಬಾಲಕರನ್ನು ಅವರು ಹೊಂದಿದ್ದಾರೆ.

ಶುಕ್ರವಾರ ಅವರು ಟ್ವಿಟರ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ದೇಶದಲ್ಲಿ ನಾವು ತುಂಬಾ ಕಠಿಣ  ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಆಮ್ಲಜನಕ, ಐಸಿಯು, ಹಾಸಿಗೆ, ಲಸಿಕೆ ಹಾಗೂ ಆಹಾರ ಸಿಗದ ಒದ್ದಾಡುವವರ ಸಂಖ್ಯೆ ಪ್ರತೀ ಕ್ಷಣವೂ ಹಚ್ಚುತ್ತಲೇ ಇದೆ. ಇಂಥವರಿಗೆ ಸಹಾಯ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಇಂದಿನಿಂದ ನನ್ನ ಸೋಶಿಯಲ್​ ಮೀಡಿಯಾ ಖಾತೆಯನ್ನು ಎನ್​ಜಿಒಗೆ ನೀಡುತ್ತಿದ್ದೇನೆ. ನನ್ನ ಟ್ವಿಟರ್​ ಖಾತೆಯಿಂದ ಪೋಸ್ಟ್ ಮಾಡುವ ಎಲ್ಲಾ ವಿಚಾರಗಳು ಅವರಿಗೆ ಅಗತ್ಯವಿರುವ ಜತೆ ಸಂಪರ್ಕ ಸಾಧಿಸಲು ಸಹಕಾರಿಯಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ನಟ ಸೋನು ಸೂದ್​ ಮೊದಲ ಅಲೆಯಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ನಿಂತಿದ್ದಾರೆ. ಸಾವಿರಾರು ಮಂದಿಗೆ ಅವರು ಸಹಾಯ ಮಾಡಿದ್ದಾರೆ. ನಟ ಅಕ್ಷಯ್​ ಕುಮಾರ್​ ಕೂಡ ಕೊರೊನಾ ವಿರುದ್ಧ ಹೋರಾಡಲು ಕೈ ಜೋಡಿಸಿದ್ದಾರೆ. ಅವರು ಕೊರೊನಾ ವಿರುದ್ಧ ಹೋರಾಡಲು ಈಗಾಗಲೇ ಕೋಟ್ಯಾಂತರ ರೂಪಾಯಿ ನೀಡಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ