ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ​ ಕೊರತೆ ಆಗುತ್ತಿದೆ

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?
ಜಾನ್​ ಅಬ್ರಹಾಂ

Updated on: Apr 30, 2021 | 8:03 PM

ಕೊರೊನಾ ಎರಡನೇ ಅಲೆಗೆ ಭಾರತ ತತ್ತರಿಸಿದೆ. ಕೊರೊನಾ ವಾರಿಯರ್​ಗಳು ಹಗಲು ರಾತ್ರಿ ಎನ್ನದೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜತೆಗೆ ಸೆಲೆಬ್ರಿಟಿಗಳು ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈಗ ಬಾಲಿವುಡ್​ ನಟ ಜಾನ್​ ಅಬ್ರಹಾಂ ಕೊರೊನಾ ವಿರುದ್ಧ ಹೋರಾಡಲು ತಮ್ಮ ಸಾಮಾಜಿಕ ಜಾಲತಾಣ ಖಾತೆಯನ್ನೇ ಬಿಟ್ಟುಕೊಟ್ಟಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ​ ಕೊರತೆ ಆಗುತ್ತಿದೆ. ಹೀಗಾಗಿ, ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಸಹಾಯಕ್ಕಾಗಿ ಪೋಸ್ಟ್ ಹಾಕುತ್ತಿದ್ದಾರೆ. ಹೀಗಾಗಿ, ಹೆಚ್ಚು ಜನರಿಗೆ ತಲುಪಲು ಸಹಕಾರಿಯಾಗಬಹುದು ಎನ್ನುವ ಕಾರಣಕ್ಕೆ ಎನ್​ಜಿಒ ಒಂದಕ್ಕೆ ತಮ್ಮ ಸೋಶಿಯಲ್​ ಮೀಡಿಯಾವನ್ನು ಹ್ಯಾಂಡೋವರ್​ ಮಾಡಿದ್ದಾರೆ ಜಾನ್​ ಅಬ್ರಹಾಂ. ಟ್ವಿಟರ್​ನಲ್ಲಿ 32 ಲಕ್ಷ ಹಾಗೂ ಇನ್​ಸ್ಟಾಗ್ರಾಂನಲ್ಲಿ 88 ಲಕ್ಷ ಹಿಂಬಾಲಕರನ್ನು ಅವರು ಹೊಂದಿದ್ದಾರೆ.

ಶುಕ್ರವಾರ ಅವರು ಟ್ವಿಟರ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ದೇಶದಲ್ಲಿ ನಾವು ತುಂಬಾ ಕಠಿಣ  ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಆಮ್ಲಜನಕ, ಐಸಿಯು, ಹಾಸಿಗೆ, ಲಸಿಕೆ ಹಾಗೂ ಆಹಾರ ಸಿಗದ ಒದ್ದಾಡುವವರ ಸಂಖ್ಯೆ ಪ್ರತೀ ಕ್ಷಣವೂ ಹಚ್ಚುತ್ತಲೇ ಇದೆ. ಇಂಥವರಿಗೆ ಸಹಾಯ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಇಂದಿನಿಂದ ನನ್ನ ಸೋಶಿಯಲ್​ ಮೀಡಿಯಾ ಖಾತೆಯನ್ನು ಎನ್​ಜಿಒಗೆ ನೀಡುತ್ತಿದ್ದೇನೆ. ನನ್ನ ಟ್ವಿಟರ್​ ಖಾತೆಯಿಂದ ಪೋಸ್ಟ್ ಮಾಡುವ ಎಲ್ಲಾ ವಿಚಾರಗಳು ಅವರಿಗೆ ಅಗತ್ಯವಿರುವ ಜತೆ ಸಂಪರ್ಕ ಸಾಧಿಸಲು ಸಹಕಾರಿಯಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ನಟ ಸೋನು ಸೂದ್​ ಮೊದಲ ಅಲೆಯಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ನಿಂತಿದ್ದಾರೆ. ಸಾವಿರಾರು ಮಂದಿಗೆ ಅವರು ಸಹಾಯ ಮಾಡಿದ್ದಾರೆ. ನಟ ಅಕ್ಷಯ್​ ಕುಮಾರ್​ ಕೂಡ ಕೊರೊನಾ ವಿರುದ್ಧ ಹೋರಾಡಲು ಕೈ ಜೋಡಿಸಿದ್ದಾರೆ. ಅವರು ಕೊರೊನಾ ವಿರುದ್ಧ ಹೋರಾಡಲು ಈಗಾಗಲೇ ಕೋಟ್ಯಾಂತರ ರೂಪಾಯಿ ನೀಡಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us