AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 25 ವರ್ಷಗಳಿಂದ ಸಿಹಿಯನ್ನು ತಿಂದೇ ಇಲ್ಲ ಜಾನ್ ಅಬ್ರಹಾಂ

ಸಿಹಿ ಪದಾರ್ಥ ಎಂದರೆ ಎಲ್ಲರ ಬಾಯಲ್ಲೂ ನೀರೂರುತ್ತದೆ. ತಂಪು ಪಾನೀಯ, ಸಿಹಿ ಪದಾರ್ಥ ಹೀಗೆ ಅನೇಕ ಸಿಹಿ ಅಂಶ ದೇಹ ಸೇರುತ್ತಲೇ ಇರುತ್ತವೆ. ಆದರೆ, ಜಾನ್ ಅಬ್ರಹಾಂ ಮಾತ್ರ ಈ ರೀತಿ ಅಲ್ಲ. ಅವರಿಗೆ ಈಗ 52 ವರ್ಷ ವಯಸ್ಸು. ಈಗಲೂ ಫಿಟ್ನೆಸ್ ಬಗ್ಗೆ ಗಮನ ನೀಡುವ ಅವರು, ಇದಕ್ಕೆ ತಕ್ಕಂತೆ ಆಹಾರ ಕ್ರಮ ಫಾಲೋ ಮಾಡುತ್ತಾರೆ.

ಕಳೆದ 25 ವರ್ಷಗಳಿಂದ ಸಿಹಿಯನ್ನು ತಿಂದೇ ಇಲ್ಲ ಜಾನ್ ಅಬ್ರಹಾಂ
ಜಾನ್ ಅಬ್ರಹಾಂ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Dec 17, 2024 | 7:39 AM

Share

ಜಾನ್ ಅಬ್ರಹಾಂ ಅವರಿಗೆ ಇಂದು (ಡಿಸೆಂಬರ್ 17) ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮಾತ್ರ ಎಂದಿಗೂ ಮರೆತರವರಲ್ಲ. ಅವರಿಗೆ ಈಗ 52 ವರ್ಷ. ಈ ವಯಸ್ಸಲ್ಲೂ ಅವರು ಸಾಕಷ್ಟು ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸಿಹಿ ಪದಾರ್ಥ ತಿನ್ನದೆ 25 ವರ್ಷಗಳೇ ಕಳೆದು ಹೋಗಿವೆ. ಇದು ಅವರು ಫಿಟ್ನೆಸ್​ಗೆ ಹಾಗೂ ಆರೋಗ್ಯಕ್ಕೆ ಕೊಡುವ ಪ್ರಾಮುಖ್ಯತೆ ಇದು.

ಸಿಹಿ ಪದಾರ್ಥ ಎಂದರೆ ಎಲ್ಲರ ಬಾಯಲ್ಲೂ ನೀರೂರುತ್ತದೆ. ತಂಪು ಪಾನೀಯ, ಸಿಹಿ ಪದಾರ್ಥ ಹೀಗೆ ಅನೇಕ ಸಿಹಿ ಅಂಶ ದೇಹ ಸೇರುತ್ತಲೇ ಇರುತ್ತವೆ. ಆದರೆ, ಜಾನ್ ಅಬ್ರಹಾಂ ಮಾತ್ರ ಈ ರೀತಿ ಅಲ್ಲ. ಅವರಿಗೆ ಈಗ 52 ವರ್ಷ ವಯಸ್ಸು. ಈಗಲೂ ಫಿಟ್ನೆಸ್ ಬಗ್ಗೆ ಗಮನ ನೀಡುವ ಅವರು, ಇದಕ್ಕೆ ತಕ್ಕಂತೆ ಆಹಾರ ಕ್ರಮ ಫಾಲೋ ಮಾಡುತ್ತಾರೆ.

ನಟಿ ಆಲಿ ಖಾನ್ ಅವರು ಜಾನ್ ಅಬ್ರಹಾಂ ಅವರ ಬಗ್ಗೆ, ಅವರ ಆಹಾರ ಕ್ರಮದ ಬಗ್ಗೆ ಮಾತನಾಡಿದ್ದರು. ‘ಜಾನ್ ಅಬ್ರಹಾಂ ಅವರು ಈ ಕಾಲದಲ್ಲೂ ಸಖತ್ ಫಿಟ್ ಆಗಿದ್ದಾರೆ. ಅದಕ್ಕೆ ಕಾರಣ ಅವರು ಕಳೆದ 25 ವರ್ಷಗಳಿಂದ ಸಿಹಿ ಪದಾರ್ಥ ಸೇವನೆ ಮಾಡೇ ಇಲ್ಲ’ ಎಂದಿದ್ದಾರೆ ಅವರು. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.

ಸಿಹಿ ಪದಾರ್ಥವನ್ನು ತ್ಯಜಿಸುವುದರಿಂದ ಸಾಕಷ್ಟು ಲಾಭಗಳಿವೆ. ದೇಹದ ತೂಕದಲ್ಲಿ ಇಳಿಕೆ ಆಗುತ್ತದೆ. ಸಕ್ಕರೆ ತಿನ್ನದಿದ್ದರೆ ಡಯಾಬಿಟಿಸ್​ನಿಂದ ದೂರ ಇರಬಹುದು. ಕೊಲೆಸ್ಟ್ರಾಲ್ ಲೆವೆಲನ್​ ನಿಯಂತ್ರಣದಲ್ಲಿ ಇಡಬಹುದು. ಕೊಲೆಸ್ಟ್ರಾಲ್ ಇಲ್ಲ ಎಂದರೆ ಹೃದಯದ ಸಮಸ್ಯೆ ಇಲ್ಲ. ಹೊಟ್ಟೆಯ ಆರೋಗ್ಯವೂ ಉತ್ತಮವಾಗಿರುತ್ತದೆ.

ಜಾನ್ ಅಬ್ರಹಾಂ ಅವರು ಇಷ್ಟೊಂದು ಒಳ್ಳೆಯ ಬಾಡಿ ಮಾಡಿದ್ದಾರೆ ಎಂದ ಮಾತ್ರಕ್ಕೆ ಅವರು ನಾನ್​ವೆಜ್ ತಿನ್ನುತ್ತಾರೆ ಎಂದು ಎಲ್ಲರೂ ಅಂದುಕೊಳ್ಳಬಹುದು. ಆದರೆ, ಅದು ಸುಳ್ಳು. ಅವರು ಪಕ್ಕಾ ಸಸ್ಯಾಹಾರಿ. ಸಸ್ಯಾಹಾರ ಸೇವನೆಯಿಂದ ಇಷ್ಟು ಒಳ್ಳೆಯ ಬಾಡಿ ಮಾಡಿದ್ದಾರೆ.

ಇದನ್ನೂ ಓದಿ: ‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್ 

ಜಾನ್ ಅಬ್ರಹಾಂ ಅವರು ಹೀರೋ ಆಗಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿಲ್ಲ. ಅವರು ಬಾಲಿವುಡ್​ನಲ್ಲಿ ವಿಲನ್ ಆಗಿಯೂ ಹೆಸರು ಮಾಡಿದ್ದಾರೆ. ಅವರ ಜನಪ್ರಿಯತೆ ಹೆಚ್ಚುತ್ತಿದೆ.  ಅವರ ನಟನೆಯ ‘ವೇದ’ ಇತ್ತೀಚೆಗೆ ರಿಲೀಸ್ ಆಗಿ ಸಾಧಾರಣ ಗೆಲುವು ಕಂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ